ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ನಂತರ ಕಳೆದ ತಿಂಗಳಲ್ಲಿ ಚಿರತೆ ದಾಳಿಗೆ ತುತ್ತಾದ ಎಂ.ಎಲ್. ಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಮೃತಪಟ್ಟ ಸ್ಥಳ ಪರಿಶೀಲಿಸಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಉಕ್ಕಲಗೆರೆ ಬೆಟ್ಟ ಸುತ್ತಲೂ ಸ್ಥಳ ಪರಿಶೀಲಿಸುವ, ಕಾರ್ಯಾಚರಣೆ ವೈಖರಿಯ ಬಗ್ಗೆ ವಿವರ ಪಡೆದರು.
ಚಿರತೆಯ ಕಾರ್ಯಕ್ಷೇತ್ರ ಎನ್ನಲಾದ ವಡ್ಗಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಕಾರ್ಯಾಚರಣೆ ವೈಖರಿ ವೀಕ್ಷಿಸಿ ಕೆಲವೊಂದು ಉಪಯುಕ್ತ ಸಲಹೆ ನೀಡಿದರು.
ಅಲ್ಲದೆ ಅರಣ್ಯ ಇಲಾಖೆ ಬೆಟ್ಟದಲ್ಲಿ ಚಿರತೆ ಸೆರೆಹಿಡಿಯಲು ಅಳವಡಿಸಲಾಗಿರುವ ಬೋನು ಮತ್ತು ಕ್ಯಾಮೆರಾಗಳನ್ನು ವೀಕ್ಷಿಸಿ ಚಿರತೆ ಸೆರೆ ಹಿಡಿಯುವ ಸಂಬಂಧ ಸಿಬ್ಬಂದಿಗೆ ಕೆಲ ಮಾಹಿತಿ ನೀಡಿದರಲ್ಲದೆ, ಶೀಘ್ರವಾಗಿ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ಸಿಎಫ್ಓ ಡಾ. ಮಾಲತಿ ಪ್ರಿಯ, ಡಿಸಿಎಫ್ಗಳಾದ ಕಮಲಾ ಕರಿಕಾಳನ್, ಆರ್ಎಫ್ಓ ಸೈಯದ್ ನದೀಮ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು: ಖಾಲಿ ಇರುವ ಸರ್ಕಾರಿ ಹುದ್ದೆಗಳ ನೇಮಕಾತಿಗೆ ಆಗ್ರಹಿಸಿ ಧಾರವಾಡದಲ್ಲಿ ನಡೆದ ಬೃಹತ್ ಹೋರಾಟ ಕುರಿತು ಗೃಹ ಸಚಿವ ಪರಮೇಶ್ವರ್…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದ ಪರಿಣಾಮ ರಾಜ್ಯದ 11 ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು…
ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ರಾಜ್ಯ ಸಚಿವ ಸಂಪುಟವನ್ನು ಪುನರ್ರಚಿಸಬೇಕು, ಮೊದಲ ಬಾರಿ ಶಾಸಕರಾಗಿರುವವರಿಗೆ ಸಂಪುಟದಲ್ಲಿ ಐದು ಸ್ಥಾನಗಳನ್ನು ನೀಡಬೇಕು, ಕೆಲಸ ಮಾಡದ…
ಮೈಸೂರು: ಮೈಸೂರು ನಗರ ಪೊಲೀಸ್ ಸ್ವತ್ತು ಕಳುವು ಪ್ರಕರಣಗಳನ್ನು ಭೇದಿಸುವಲ್ಲಿ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತೆ…
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಕೆಟ್ಟ ಕೊಳಕು ಆಡಳಿತದಿಂದ ಸಮಾಜದ ಪ್ರತಿ ವರ್ಗ ಬೀದಿಗಿಳಿದು ಹೋರಾಟ ನಡೆಸುತ್ತಿದೆ ಎಂದು ವಿಪಕ್ಷ…
ಮಡಿಕೇರಿ: ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಗದ್ದುಗೆ ಉರುಳಿ ಬಿದ್ದ ಘಟನೆ ಕೊಡಗು ಜಿಲ್ಲೆಯ ಮಡಿಕೇರಿ ತಾಲ್ಲೂಕಿನ…