ಜಿಲ್ಲೆಗಳು

ಚಿರತೆ ದಾಳಿ ಸ್ಥಳಗಳಿಗೆ ಸಿಸಿಎಫ್ ರಾಜೀವ್ ಭೇಟಿ

ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ನಂತರ ಕಳೆದ ತಿಂಗಳಲ್ಲಿ ಚಿರತೆ ದಾಳಿಗೆ ತುತ್ತಾದ ಎಂ.ಎಲ್. ಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಮೃತಪಟ್ಟ ಸ್ಥಳ ಪರಿಶೀಲಿಸಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಉಕ್ಕಲಗೆರೆ ಬೆಟ್ಟ ಸುತ್ತಲೂ ಸ್ಥಳ ಪರಿಶೀಲಿಸುವ, ಕಾರ್ಯಾಚರಣೆ ವೈಖರಿಯ ಬಗ್ಗೆ ವಿವರ ಪಡೆದರು.
ಚಿರತೆಯ ಕಾರ್ಯಕ್ಷೇತ್ರ ಎನ್ನಲಾದ ವಡ್ಗಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಕಾರ್ಯಾಚರಣೆ  ವೈಖರಿ ವೀಕ್ಷಿಸಿ ಕೆಲವೊಂದು ಉಪಯುಕ್ತ ಸಲಹೆ ನೀಡಿದರು.
ಅಲ್ಲದೆ ಅರಣ್ಯ ಇಲಾಖೆ ಬೆಟ್ಟದಲ್ಲಿ ಚಿರತೆ ಸೆರೆಹಿಡಿಯಲು ಅಳವಡಿಸಲಾಗಿರುವ ಬೋನು ಮತ್ತು ಕ್ಯಾಮೆರಾಗಳನ್ನು ವೀಕ್ಷಿಸಿ ಚಿರತೆ ಸೆರೆ ಹಿಡಿಯುವ ಸಂಬಂಧ ಸಿಬ್ಬಂದಿಗೆ ಕೆಲ ಮಾಹಿತಿ ನೀಡಿದರಲ್ಲದೆ, ಶೀಘ್ರವಾಗಿ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ಸಿಎಫ್‌ಓ ಡಾ. ಮಾಲತಿ ಪ್ರಿಯ, ಡಿಸಿಎಫ್‌ಗಳಾದ ಕಮಲಾ ಕರಿಕಾಳನ್, ಆರ್‌ಎಫ್‌ಓ ಸೈಯದ್ ನದೀಮ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.

andolanait

Recent Posts

ಮದ್ದೂರು| ಚಿಕ್ಕದೊಡ್ಡಿಯಲ್ಲಿ ಬೋನಿಗೆ ಬಿದ್ದ ಚಿರತೆ

ಮದ್ದೂರು: ಮಂಡ್ಯ ಜಿಲ್ಲೆ ಮದ್ದೂರು ತಾಲ್ಲೂಕಿನ ಕೊಪ್ಪ ಸಮೀಪದ ಗೂಳೂರು-ಚಿಕ್ಕದೊಡ್ಡಿ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ ಬೋನಿಗೆ ಚಿರತೆಯೊಂದು ಸೆರೆಯಾಗಿದೆ.…

48 mins ago

ನಂದಿನಿ ಉತ್ಪನ್ನಗಳ ಕುರಿತು ವದಂತಿಗಳಿಗೆ ಕಿವಿಗೊಡಬೇಡಿ: ಕೆಎಂಎಫ್‌

ಬೆಂಗಳೂರು: ನಂದಿನಿ ಬ್ರಾಂಡ್‌ನ ಕೆಲವು ಉತ್ಪನ್ನಗಳ ಸೇವನೆ ಅಸುರಕ್ಷಿತ, ಆರೋಗ್ಯಕ್ಕೆ ಹಾನಿ ಎಂದೆಲ್ಲಾ ಸೋಷಿಯಲ್‌ ಮೀಡಿಯಾದಲ್ಲಿ ಹೇಳಿಕೆಗಳು ವೈರಲ್‌ ಆಗುತ್ತಿವೆ.…

1 hour ago

ಸಿಎಂ ಸಿದ್ದರಾಮಯ್ಯ ಆಡಳಿತ ನೋಡಿ ಜನ ನಗುತ್ತಿದ್ದಾರೆ: ಎಂಎಲ್‌ಸಿ ಎಚ್.ವಿಶ್ವನಾಥ್‌ ಲೇವಡಿ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಡಳಿತ ವೈಖರಿ ನೋಡಿ ಜನ ಛೀ... ಥೂ.. ಎನ್ನುತ್ತಿದ್ದಾರೆ. ಇಂಥ ಆಡಳಿತ ಕೊಡಲು ನಿಮಗೆ ನಾಚಿಕೆಯಾಗುವುದಿಲ್ಲವೇ?…

1 hour ago

ಫೆಬ್ರವರಿ.20ರಂದು ರಾಜ್ಯಾದ್ಯಂತ ಸಾರಿಗೆ ನೌಕರರ ಮುಷ್ಕರ

ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…

1 hour ago

ಫೆ.28ರಿಂದ ದ್ವಿತೀಯ ಪಿಯುಸಿ, ಮಾರ್ಚ್.‌18ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

ಬೆಂಗಳೂರು: ಪ್ರಸಕ್ತ 2026-27 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ- 1 ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಹಾಗೂ…

1 hour ago

ಕುಶಾಲನಗರ| ಲಂಚ ಪಡೆಯುತ್ತಿದ್ದ ನೌಕರ ಲೋಕಾಯುಕ್ತ ಬಲೆಗೆ

ಕುಶಾಲನಗರ: ಗುತ್ತಿಗೆದಾರ ಲೈಸೆನ್ಸ್‌ ನೀಡಲು ಲೋಕೋಪಯೋಗಿ ಇಲಾಖೆ ಕಚೇರಿಯ ನೌಕರನೊಬ್ಬ ಲಂಚ ಪಡೆಯುತ್ತಿದ್ದ ಸಂದರ್ಭ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಸಿಕ್ಕಿಬಿದ್ದಿದ್ದು,…

2 hours ago