ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ನಂತರ ಕಳೆದ ತಿಂಗಳಲ್ಲಿ ಚಿರತೆ ದಾಳಿಗೆ ತುತ್ತಾದ ಎಂ.ಎಲ್. ಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಮೃತಪಟ್ಟ ಸ್ಥಳ ಪರಿಶೀಲಿಸಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಉಕ್ಕಲಗೆರೆ ಬೆಟ್ಟ ಸುತ್ತಲೂ ಸ್ಥಳ ಪರಿಶೀಲಿಸುವ, ಕಾರ್ಯಾಚರಣೆ ವೈಖರಿಯ ಬಗ್ಗೆ ವಿವರ ಪಡೆದರು.
ಚಿರತೆಯ ಕಾರ್ಯಕ್ಷೇತ್ರ ಎನ್ನಲಾದ ವಡ್ಗಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಕಾರ್ಯಾಚರಣೆ ವೈಖರಿ ವೀಕ್ಷಿಸಿ ಕೆಲವೊಂದು ಉಪಯುಕ್ತ ಸಲಹೆ ನೀಡಿದರು.
ಅಲ್ಲದೆ ಅರಣ್ಯ ಇಲಾಖೆ ಬೆಟ್ಟದಲ್ಲಿ ಚಿರತೆ ಸೆರೆಹಿಡಿಯಲು ಅಳವಡಿಸಲಾಗಿರುವ ಬೋನು ಮತ್ತು ಕ್ಯಾಮೆರಾಗಳನ್ನು ವೀಕ್ಷಿಸಿ ಚಿರತೆ ಸೆರೆ ಹಿಡಿಯುವ ಸಂಬಂಧ ಸಿಬ್ಬಂದಿಗೆ ಕೆಲ ಮಾಹಿತಿ ನೀಡಿದರಲ್ಲದೆ, ಶೀಘ್ರವಾಗಿ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ಸಿಎಫ್ಓ ಡಾ. ಮಾಲತಿ ಪ್ರಿಯ, ಡಿಸಿಎಫ್ಗಳಾದ ಕಮಲಾ ಕರಿಕಾಳನ್, ಆರ್ಎಫ್ಓ ಸೈಯದ್ ನದೀಮ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.
ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…