ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ನಂತರ ಕಳೆದ ತಿಂಗಳಲ್ಲಿ ಚಿರತೆ ದಾಳಿಗೆ ತುತ್ತಾದ ಎಂ.ಎಲ್. ಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಮೃತಪಟ್ಟ ಸ್ಥಳ ಪರಿಶೀಲಿಸಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಉಕ್ಕಲಗೆರೆ ಬೆಟ್ಟ ಸುತ್ತಲೂ ಸ್ಥಳ ಪರಿಶೀಲಿಸುವ, ಕಾರ್ಯಾಚರಣೆ ವೈಖರಿಯ ಬಗ್ಗೆ ವಿವರ ಪಡೆದರು.
ಚಿರತೆಯ ಕಾರ್ಯಕ್ಷೇತ್ರ ಎನ್ನಲಾದ ವಡ್ಗಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಕಾರ್ಯಾಚರಣೆ ವೈಖರಿ ವೀಕ್ಷಿಸಿ ಕೆಲವೊಂದು ಉಪಯುಕ್ತ ಸಲಹೆ ನೀಡಿದರು.
ಅಲ್ಲದೆ ಅರಣ್ಯ ಇಲಾಖೆ ಬೆಟ್ಟದಲ್ಲಿ ಚಿರತೆ ಸೆರೆಹಿಡಿಯಲು ಅಳವಡಿಸಲಾಗಿರುವ ಬೋನು ಮತ್ತು ಕ್ಯಾಮೆರಾಗಳನ್ನು ವೀಕ್ಷಿಸಿ ಚಿರತೆ ಸೆರೆ ಹಿಡಿಯುವ ಸಂಬಂಧ ಸಿಬ್ಬಂದಿಗೆ ಕೆಲ ಮಾಹಿತಿ ನೀಡಿದರಲ್ಲದೆ, ಶೀಘ್ರವಾಗಿ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ಸಿಎಫ್ಓ ಡಾ. ಮಾಲತಿ ಪ್ರಿಯ, ಡಿಸಿಎಫ್ಗಳಾದ ಕಮಲಾ ಕರಿಕಾಳನ್, ಆರ್ಎಫ್ಓ ಸೈಯದ್ ನದೀಮ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…