ತಿ.ನರಸೀಪುರ: ಚಿರತೆ ದಾಳಿಯಿಂದ ಮೃತಪಟ್ಟ ತಾಲ್ಲೂಕಿನ ಸೋಸಲೆ ಗ್ರಾಮದ ಮೇಘನಾ ಮನೆಗೆ ಭೇಟಿ ನೀಡಿದ ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ರಾಜೀವ್ ರಂಜನ್ ಅವರು ಮೃತಕುಟುಂಬಸ್ಥರಿಗೆ ಸಾಂತ್ವನ ಹೇಳಿ, ನರಹಂತಕ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ನಂತರ ಕಳೆದ ತಿಂಗಳಲ್ಲಿ ಚಿರತೆ ದಾಳಿಗೆ ತುತ್ತಾದ ಎಂ.ಎಲ್. ಹುಂಡಿ ಗ್ರಾಮದ ವಿದ್ಯಾರ್ಥಿ ಮಂಜುನಾಥ್ ಮೃತಪಟ್ಟ ಸ್ಥಳ ಪರಿಶೀಲಿಸಿ ಘಟನೆಯ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದು, ಉಕ್ಕಲಗೆರೆ ಬೆಟ್ಟ ಸುತ್ತಲೂ ಸ್ಥಳ ಪರಿಶೀಲಿಸುವ, ಕಾರ್ಯಾಚರಣೆ ವೈಖರಿಯ ಬಗ್ಗೆ ವಿವರ ಪಡೆದರು.
ಚಿರತೆಯ ಕಾರ್ಯಕ್ಷೇತ್ರ ಎನ್ನಲಾದ ವಡ್ಗಲ್ ರಂಗನಾಥ ಸ್ವಾಮಿ ಬೆಟ್ಟಕ್ಕೆ ಭೇಟಿ ನೀಡಿ ಅರಣ್ಯ ಇಲಾಖೆಯ ಕಾರ್ಯಾಚರಣೆ ವೈಖರಿ ವೀಕ್ಷಿಸಿ ಕೆಲವೊಂದು ಉಪಯುಕ್ತ ಸಲಹೆ ನೀಡಿದರು.
ಅಲ್ಲದೆ ಅರಣ್ಯ ಇಲಾಖೆ ಬೆಟ್ಟದಲ್ಲಿ ಚಿರತೆ ಸೆರೆಹಿಡಿಯಲು ಅಳವಡಿಸಲಾಗಿರುವ ಬೋನು ಮತ್ತು ಕ್ಯಾಮೆರಾಗಳನ್ನು ವೀಕ್ಷಿಸಿ ಚಿರತೆ ಸೆರೆ ಹಿಡಿಯುವ ಸಂಬಂಧ ಸಿಬ್ಬಂದಿಗೆ ಕೆಲ ಮಾಹಿತಿ ನೀಡಿದರಲ್ಲದೆ, ಶೀಘ್ರವಾಗಿ ಚಿರತೆ ಸೆರೆಹಿಡಿಯುವ ಭರವಸೆ ನೀಡಿದರು.
ಸಿಎಫ್ಓ ಡಾ. ಮಾಲತಿ ಪ್ರಿಯ, ಡಿಸಿಎಫ್ಗಳಾದ ಕಮಲಾ ಕರಿಕಾಳನ್, ಆರ್ಎಫ್ಓ ಸೈಯದ್ ನದೀಮ್, ಉಪ ವಲಯ ಅರಣ್ಯ ಅಧಿಕಾರಿಗಳಾದ ಮಂಜುನಾಥ್, ಉಮೇಶ್ ಹಾಗೂ ಸಿಬ್ಬಂದಿ ಹಾಜರಿದ್ದರು.
ಬೆಂಗಳೂರು: ಸಿಇಟಿ ಕೇಂದ್ರದಲ್ಲಿ ಜನಿವಾರ ತೆಗೆಸಿದ ಸಿಬ್ಬಂದಿ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್…
ಬೆಂಗಳೂರು: ರಾಜ್ಯದ ವಿವಿಧ ನಗರಗಳಲ್ಲಿ ಸುಡುತ್ತಿರುವ ಬಿಸಿಲು ಮತ್ತು ಹೆಚ್ಚುತ್ತಿರುವ ಧೂಳಿನ ನಡುವೆ ಕರ್ತವ್ಯ ನಿರ್ವಹಿಸುತ್ತಿರುವ ಸಂಚಾರ ಪೊಲೀಸರ ನೆರವಿಗೆ…
ಮೈಸೂರು: ಇಲ್ಲಿನ ಚಲುವಾಂಬ ಆಸ್ಪತ್ರೆಯಲ್ಲಿ ನವಜಾತ ಶಿಶು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು: ಒಳಮೀಸಲಾತಿ ಬಗ್ಗೆ ಹಲವು ವರ್ಷಗಳಿಂದ ಇದ್ದ ಗೊಂದಲಗಳಿಗೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ತೆರೆ ಎಳೆದಿದೆ. ಸಿಎಂ ಸಿದ್ದರಾಮಯ್ಯ…
ಸೋಮವಾರಪೇಟೆ: ತಾಲೂಕಿನ ತೋಳೂರುಶೆಟ್ಟಳ್ಳಿ ಗ್ರಾಮದಲ್ಲಿನ ಶ್ರೀ ಸಬ್ಬಮ್ಮ ದೇವಿಯ ಸುಗ್ಗಿ ಉತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿ ಶುಕ್ರವಾರ ವಿಜೃಂಭಣೆಯಿಂದ ನಡೆಯಿತು.…