ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಹುಲಿಗಳ ಬದಲಾಗಿ ಚಿರತೆ ಪ್ರತ್ಯಕ್ಷವಾಗಿರುವುದು ಕಂಡುಬಂದಿದೆ.
ದೊಡ್ಡ ಕಾನ್ಯಾ ಎಂಬ ಗ್ರಾಮದ ಬಳಿ ಕಳೆದ ಮಂಗಳವಾರದಿಂದ ಎರಡು ಹುಲಿಗಳು ಓಡಾಡುತ್ತಿವೆ ಎಂಬ ಮಾಹಿತಿಯನ್ನು ಅರಣ್ಯ ಇಲಾಖೆಗೆ ಇಲ್ಲಿನ ಗ್ರಾಮಸ್ಥರು ನೀಡಿದ್ದರು. ಈ ವಿಚಾರದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ಅರಣ್ಯ ಇಲಾಖೆಯವರು ಸ್ಥಳದ ಪರಿಶೀಲನೆ ನಡೆಸಿದ ಬಳಿಕ ಗ್ರಾಮಸ್ಥರ ಹೇಳಿಕೆಗಳ ಆಧಾರದ ಮೇಲೆ ಹುಲಿಗಳು ತಿರುಗಾಡುತ್ತಿವೆ ಎಂಬುದನ್ನು ಖಚಿತ ಪಡಿಸಿಕೊಂಡು ಆ ಸ್ಥಳಕ್ಕೆ ಸಿಸಿಟಿವಿಯನ್ನು ಅಳವಡಿಸಿದ್ದರು.
ಈ ಗ್ರಾಮದಲ್ಲಿ ಸಿಸಿಟಿವಿಯನ್ನು ಅಳವಡಿಸಿರುವ ತೋಟದ ಮನೆಯ ಮುಂದಿರುವ ಗೇಟ್ ನಲ್ಲಿ ಹುಲಿಗಳ ಬದಲಾಗಿ ಎರಡು ಚಿರತೆಗಳು ಓಡಾಟ ನಡೆಸಿರುವ ದೃಶ್ಯ ಕಂಡು ಬಂದಿದ್ದರಿಂದ, ಈ ಸಂಬಂಧ ಅರಣ್ಯಾಧಿಕಾರಿಗಳು ಸಿಸಿಟಿವಿಯನ್ನು ಪರಿಶೀಲಿಸಿದಾಗ ಆ ಸ್ಥಳದಲ್ಲಿ ಓಡಾಟ ನಡೆಸಿರುವುದು ಹುಲಿಗಳಲ್ಲ ಚಿರತೆಗಳು ಎಂಬುದು ತಿಳಿದುದ್ದರಿಂದ ತನಿಖೆ ನಡೆಸಿ ಚಿರತೆಗಳ ಸೆರೆಗೆ ಸಿಬ್ಬಂದಿಯು ಕಾರ್ಯಾಚಾರಣೆ ಮುಂದುವರೆಸಿದ್ದಾರೆ.
ವಿರಾಜಪೇಟೆ: ಅಕಾಲಿಕ ಮಳೆಯ ಪರಿಣಾಮ ಒಣಗಿದ ಮರ ದೇಗುಲದ ಕಟ್ಟಡ ದ ಮೇಲೆ ಬಿದ್ದು ಹಾನಿಯಾಗಿರುವ ಘಟನೆ ವಿರಾಜಪೇಟೆ ತೆಲುಗರಬೀದಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಾಡು ಪ್ರಾಣಿಗಳ ಹಾವಳಿ ನಿಯಂತ್ರಿಸಲು ರೈಲ್ವೆ ಬ್ಯಾರಿಕೇಡ್, ಆನೆಕಂದಕ ನಿರ್ಮಾಣ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಚ್ 2026ರ ರಾಜ್ಯ ಬಜೆಟ್ನಲ್ಲಿ ಆಶಾ ಕಾರ್ಯಕರ್ತೆಯರಿಗೆ ನೀಡಲಾಗಿದ್ದ ಹಿಂದಿನ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ಚಿರತೆ ದಾಳಿಗೆ ಹಸುವೊಂದು ಬಲಿಯಾಗಿರುವ ಘಟನೆ ರಾಮಾಪುರ ಸಮೀಪದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಹುದಿನಗಳಿಂದ ನೆನಗುದಿಗೆ ಬಿದ್ದಿದ್ದ ರಾಮನಗುಡ್ಡ ಜಲಾಶಯಕ್ಕೆ ನೀರು ತುಂಬಿಸಿ, ಅಲ್ಲಿಂದ…
ತುಮಕೂರು: ಎಷ್ಟೇ ಟೀಕೆ ಟಿಪ್ಪಣಿಗಳು ಬಂದರೂ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೂ ನಿಲ್ಲಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಭರವಸೆ…