ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಹುಲಿಗಳ ಬದಲಾಗಿ ಚಿರತೆ ಪ್ರತ್ಯಕ್ಷವಾಗಿರುವುದು ಕಂಡುಬಂದಿದೆ.
ದೊಡ್ಡ ಕಾನ್ಯಾ ಎಂಬ ಗ್ರಾಮದ ಬಳಿ ಕಳೆದ ಮಂಗಳವಾರದಿಂದ ಎರಡು ಹುಲಿಗಳು ಓಡಾಡುತ್ತಿವೆ ಎಂಬ ಮಾಹಿತಿಯನ್ನು ಅರಣ್ಯ ಇಲಾಖೆಗೆ ಇಲ್ಲಿನ ಗ್ರಾಮಸ್ಥರು ನೀಡಿದ್ದರು. ಈ ವಿಚಾರದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ಅರಣ್ಯ ಇಲಾಖೆಯವರು ಸ್ಥಳದ ಪರಿಶೀಲನೆ ನಡೆಸಿದ ಬಳಿಕ ಗ್ರಾಮಸ್ಥರ ಹೇಳಿಕೆಗಳ ಆಧಾರದ ಮೇಲೆ ಹುಲಿಗಳು ತಿರುಗಾಡುತ್ತಿವೆ ಎಂಬುದನ್ನು ಖಚಿತ ಪಡಿಸಿಕೊಂಡು ಆ ಸ್ಥಳಕ್ಕೆ ಸಿಸಿಟಿವಿಯನ್ನು ಅಳವಡಿಸಿದ್ದರು.
ಈ ಗ್ರಾಮದಲ್ಲಿ ಸಿಸಿಟಿವಿಯನ್ನು ಅಳವಡಿಸಿರುವ ತೋಟದ ಮನೆಯ ಮುಂದಿರುವ ಗೇಟ್ ನಲ್ಲಿ ಹುಲಿಗಳ ಬದಲಾಗಿ ಎರಡು ಚಿರತೆಗಳು ಓಡಾಟ ನಡೆಸಿರುವ ದೃಶ್ಯ ಕಂಡು ಬಂದಿದ್ದರಿಂದ, ಈ ಸಂಬಂಧ ಅರಣ್ಯಾಧಿಕಾರಿಗಳು ಸಿಸಿಟಿವಿಯನ್ನು ಪರಿಶೀಲಿಸಿದಾಗ ಆ ಸ್ಥಳದಲ್ಲಿ ಓಡಾಟ ನಡೆಸಿರುವುದು ಹುಲಿಗಳಲ್ಲ ಚಿರತೆಗಳು ಎಂಬುದು ತಿಳಿದುದ್ದರಿಂದ ತನಿಖೆ ನಡೆಸಿ ಚಿರತೆಗಳ ಸೆರೆಗೆ ಸಿಬ್ಬಂದಿಯು ಕಾರ್ಯಾಚಾರಣೆ ಮುಂದುವರೆಸಿದ್ದಾರೆ.
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…
೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…
ಪ್ರಸ್ತುತ ವರ್ಷ ಮುಂಗಾರು ಕೈಕೊಟ್ಟಿದ್ದು ಎಲ್ನಿನೋ ಪರಿಣಾಮ ಎಂದು ವರದಿಗಳು ಹೇಳಿವೆ. ಜೊತೆಗೆ ಹವಾಮಾನ ಇಲಾಖೆ ಅದನ್ನು ಪುಷ್ಟೀಕರಿಸಿದ್ದು, ಈ…
ವಸಂತಕುಮಾರ ಮೈಸೂರು ಮಠ, ತಂಬಾಕು ವಿರೋಧಿ ಹೋರಾಟಗಾರ ಗುಣಮಟ್ಟದ ತಂಬಾಕು ಬೆಳೆ ಸಂಬಂಧ ರಾಜಕೀಯ ಹಸ್ತಕ್ಷೇಪ ಸಲ್ಲದು ಯಾವುದೇ ರೀತಿಯ…
ನವೀನ್ ಡಿಸೋಜ ಸಾಂಕ್ರಾಮಿಕ ಕಾಯಿಲೆಯಲ್ಲಿ ಹಿನ್ನೆಲೆ ಹೋಟೆಲ್, ರೆಸ್ಟೋರೆಂಟ್ಗಳಿಗೆ ಆಹಾರ ಸುರಕ್ಷತೆ ಇಲಾಖೆ ಸೂಚನೆ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮಳೆ…