ಜಿಲ್ಲೆಗಳು

ಮೈಸೂರು: ಹುಲಿ ವೀಕ್ಷಣೆಗಾಗಿ ಹಾಕಿದ್ದ ಸಿಸಿಟಿವಿಯಲ್ಲಿ ಚಿರತೆ ಸೆರೆ

ಮೈಸೂರು: ಜಯಪುರ ಹೋಬಳಿಯ ದೊಡ್ಡ ಕಾನ್ಯಾ ಗ್ರಾಮದಲ್ಲಿ ಹುಲಿಗಳು ಸಂಚರಿಸುತ್ತಿವೆ ಎಂದು  ಸ್ಥಳೀಯರು ನೀಡಿದ್ದ ಮಾಹಿತಿಯ ಹಿನ್ನೆಲೆಯಲ್ಲಿ ಅವುಗಳ ಚಲನವಲನ ಗಮನಿಸಲು ಅರಣ್ಯ ಇಲಾಖೆ ಅಳವಡಿಸಿದ್ದ ಸಿಸಿಟಿವಿಯಲ್ಲಿ ಹುಲಿಗಳ ಬದಲಾಗಿ ಚಿರತೆ ಪ್ರತ್ಯಕ್ಷವಾಗಿರುವುದು ಕಂಡುಬಂದಿದೆ.

ದೊಡ್ಡ ಕಾನ್ಯಾ ಎಂಬ ಗ್ರಾಮದ ಬಳಿ ಕಳೆದ ಮಂಗಳವಾರದಿಂದ ಎರಡು ಹುಲಿಗಳು ಓಡಾಡುತ್ತಿವೆ ಎಂಬ ಮಾಹಿತಿಯನ್ನು ಅರಣ್ಯ ಇಲಾಖೆಗೆ ಇಲ್ಲಿನ  ಗ್ರಾಮಸ್ಥರು ನೀಡಿದ್ದರು. ಈ ವಿಚಾರದ ಹಿನ್ನೆಲೆಯಲ್ಲಿ ಗ್ರಾಮಕ್ಕೆ ಬಂದ ಅರಣ್ಯ ಇಲಾಖೆಯವರು ಸ್ಥಳದ ಪರಿಶೀಲನೆ ನಡೆಸಿದ ಬಳಿಕ ಗ್ರಾಮಸ್ಥರ ಹೇಳಿಕೆಗಳ ಆಧಾರದ ಮೇಲೆ ಹುಲಿಗಳು ತಿರುಗಾಡುತ್ತಿವೆ ಎಂಬುದನ್ನು ಖಚಿತ ಪಡಿಸಿಕೊಂಡು ಆ ಸ್ಥಳಕ್ಕೆ ಸಿಸಿಟಿವಿಯನ್ನು ಅಳವಡಿಸಿದ್ದರು.

ಈ ಗ್ರಾಮದಲ್ಲಿ ಸಿಸಿಟಿವಿಯನ್ನು ಅಳವಡಿಸಿರುವ ತೋಟದ ಮನೆಯ ಮುಂದಿರುವ ಗೇಟ್‌ ನಲ್ಲಿ ಹುಲಿಗಳ ಬದಲಾಗಿ ಎರಡು ಚಿರತೆಗಳು ಓಡಾಟ ನಡೆಸಿರುವ ದೃಶ್ಯ ಕಂಡು ಬಂದಿದ್ದರಿಂದ, ಈ ಸಂಬಂಧ ಅರಣ್ಯಾಧಿಕಾರಿಗಳು ಸಿಸಿಟಿವಿಯನ್ನು ಪರಿಶೀಲಿಸಿದಾಗ ಆ ಸ್ಥಳದಲ್ಲಿ ಓಡಾಟ ನಡೆಸಿರುವುದು ಹುಲಿಗಳಲ್ಲ ಚಿರತೆಗಳು ಎಂಬುದು ತಿಳಿದುದ್ದರಿಂದ ತನಿಖೆ ನಡೆಸಿ ಚಿರತೆಗಳ ಸೆರೆಗೆ ಸಿಬ್ಬಂದಿಯು ಕಾರ್ಯಾಚಾರಣೆ ಮುಂದುವರೆಸಿದ್ದಾರೆ.

andolana

Recent Posts

ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಏಕಾಏಕಿ ಕಾಡಾನೆ ದಾಳಿ

ರಾಮನಗರ : ಕಾವೇರಿ ನದಿಯಲ್ಲಿ ಆಟವಾಡುತ್ತಿದ್ದ ಪ್ರವಾಸಿಗರ ಮೇಲೆ ಕಾಡಾನೆ ದಾಳಿ ನಡೆಸಿರುವ ಘಟನೆ ಸಂಗಮ ಅರಣ್ಯ ಪ್ರದೇಶದ ಮೇಕೆದಾಟು…

10 mins ago

ಕೊಡಗು | ಜಿಲ್ಲೆಯಲ್ಲಿ 2-3 ಸಾವಿರ ಅನಧಿಕೃತ ಹೋಂಸ್ಟೇ!

ಅನಧಿಕೃತ ಹೋಂಸ್ಟೇಗಳ ವಿರುದ್ಧ ಕ್ರಮಕ್ಕೆ ಒತ್ತಾಯ ; ವಿದೇಶಿ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣದ ಬೆನ್ನಲ್ಲೇ ಕ್ರಮಕ್ಕೆ ಆಗ್ರಹ  ನವೀನ್…

37 mins ago

ಕೋಟೆ | ರೆಸಾರ್ಟ್‌, ಹೋಂ ಸ್ಟೇಗಳ ಮೇಲೆ ಹೆಚ್ಚಿನ ನಿಗಾ

ಸರ್ಕಾರದ ನಿಯಮಗಳನ್ನು ಪಾಲನೆ ಮಾಡುತ್ತಿರುವ ಕುರಿತು ಪರಿಶೀಲಿಸುತ್ತಿರುವ ಅಧಿಕಾರಿಗಳು ಎಚ್.ಡಿ.ಕೋಟೆ : ಕಬಿನಿ ಜಲಾಶಯದ ಹಿನ್ನೀರು ಮತ್ತು ನಾಗರಹೊಳೆ, ಬಂಡೀಪುರ…

1 hour ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಮಕ್ಕಳ ಮನದಂಗಳದಲ್ಲಿ ಗಾಂಧೀ ಚಿಂತನೆಯ ಬೇರುಗಳು

ಅಸ್ಪೃಶ್ಯರನ್ನು ಅವರ ನೋವುಗಳಿಂದ ಮುಕ್ತಗೊಳಿಸಲು ಶ್ರಮಿಸಿದ ಮಹಾತ್ಮ ಯಾವುದೇ ಸಮಸ್ಯೆಗೆ ಆಯುಧಗಳು ಮಾತ್ರ ಉತ್ತರವಲ್ಲ ಎಂದು ಮಹಾತ್ಮ ಗಾಂಧಿ ಯಾವಾಗಲೂ…

2 hours ago

ಇರುವೆ ಕಚ್ಚಿ ಶಿಶು ಸಾವು ಪ್ರಕರಣ ; ವೈದ್ಯರು ಸೇರಿ 7 ಮಂದಿಗೆ ಶೋಕಾಸ್‌ ನೋಟಿಸ್

ಮೈಸೂರು : ನಗರದ ಚೆಲುವಾಂಬ ಆಸ್ಪತ್ರೆಯಲ್ಲಿ ಇರುವೆ ಕಚ್ಚಿ ನವಜಾತ ಶಿಶು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎನ್‌ಐಸಿಯುನ ಉಸ್ತುವಾರಿ ವೈದ್ಯರು…

2 hours ago

ಆಂದೋಲನ ದಿನಪತ್ರಿಕೆಯ ಗಾಂಧಿ ಅಭಿಯಾನ | ಗಾಂಧಿ ಆತ್ಮಕತೆಯ ಆಯ್ದ ತುಣುಕು ; ಬಾಲ್ಯ ವಿವಾಹವೆಂಬ ನಾಚಿಕೆಗೇಡಿನ ಸಂಗತಿ

ನನ್ನ ಮದುವೆ, ನನ್ನ ಹದಿಮೂರನೆಯ ವಯಸ್ಸಿನಲ್ಲಿ ನಡೆಯಿತೆಂಬುದನ್ನು ನಾನು ವ್ಯಥೆಯಿಂದ ಇಲ್ಲಿ ಬರೆಯಬೇಕಾಗಿದೆ. ನಾನು ಮಾತಾಪಿತೃ ನಿಷ್ಠೆಯಿಂದ ಕೂಡಿದ್ದೆ. ಆದರೆ…

2 hours ago