ಜಿಲ್ಲೆಗಳು

ವರ್ತುಲ ರಸ್ತೆಗೆ ಬೆಳಕು : ಝಗಮಗಿಸಿದ ಎಲ್‌ಇಡಿ ವಿದ್ಯುತ್ ದೀಪಗಳು

ಪ್ರತಿ 2 ಕಿ.ಮೀ.ಗೆ ಸಿಸಿ ಕ್ಯಾಮೆರಾ ಅಳವಡಿಕೆ ಚಿಂತನೆ

ಮೈಸೂರು: ತಿಂಗಳುಗಳಿಂದ ಕಗ್ಗತ್ತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದಲೇ ಎಲ್‌ಇಡಿ ಬೆಳಕು ಪ್ರಜ್ವಲಿಸಿತು.

ಕಳೆದ ಹಲವಾರು ವರ್ಷಗಳಿಂದ ವರ್ತುಲ ರಸ್ತೆಯಲ್ಲಿ ವಿದ್ಯುತ್ ದೀಪಗಳು ಇರಲಿಲ್ಲ. ಇದರಿಂದ ಪ್ರಾಂಣಿಕರಿಗೆ ಹಾಗೂ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಜತೆಗೆ ಅಪರಾಧ ಕೃತ್ಯಗಳು ನಡೆಯುತ್ತಿದ್ದವು. ವಿದ್ಯುತ್ ದೀಪಗಳ ಅಳವಡಿಕೆಯಿಂದ ಇದಕ್ಕೆಲ್ಲಾ ಕಡಿವಾಣ ಬಿದ್ದಿದೆ.

ಈ ಹಿಂದೆ ವಿದ್ಯುತ್ ದೀಪದ ಬಿಲ್ ಕೂಡ 1.19 ಕೋಟಿ ಸೆಸ್ಕ್‌ಗೆ ಬಾಕಿ ಇತ್ತು. ಇದರಿಂದ ಕೂಡ ಬೀದಿ ದೀಪಗಳನ್ನು ಬೆಳಗಿಸಲು ಸಾಧ್ಯವಾಗಿರಲಿಲ್ಲ. ಅದರಂತೆ ಸೆಸ್ಕ್‌ಗೆ ಪಾವತಿಸಬೇಕಿದ್ದ 1.19 ಕೋಟಿ ರೂ.ಗಳನ್ನು ಮುಡಾ ವತಿಯಿಂದ ನೀಡಲಾಗಿದೆ. ಬೀದಿ ದೀಪಗಳ ನಿರ್ವಹಣೆಗೆ ಒಂದು ವರ್ಷದವರೆಗೆ ಗುತ್ತಿಗೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಬಿಲ್ ಪಾವತಿ ಹಾಗೂ ನಿರ್ವಹಣೆಯನ್ನು ನಗರಪಾಲಿಕೆ ಮಾಡಲಿದೆ.

ಈ ಹಿಂದೆ ವರ್ತುಲ ರಸ್ತೆಯ ಸುತ್ತಾ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಕೇಬಲ್, ಕಂಬ, ಬಲ್ಬ್ ಗಳ ಕಳವು ಪ್ರಕರಣಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ವರ್ತುಲ ರಸ್ತೆುಂ ಪ್ರತಿ 2 ಕಿ.ಮೀ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಸಲು ಚಿಂತನೆ ನಡೆಸಲಾಗಿದೆ.

ಎಲ್‌ಇಡಿ ದೀಪಗಳ ಅಳವಡಿಕೆಗೆ ಕಳೆದ ಕೆಲವು ತಿಂಗಳಿನಿಂದ ಸಂಸದ ಪ್ರತಾಪ್ ಸಿಂಹ ಯೋಜನೆ ರೂಪಿಸಿದ್ದರು. ಡಿಸೆಂಬರ್ ಒಳಗೆ ವಿದ್ಯುತ್ ದೀಪ ಅಳವಡಿಸುವ ಭರವಸೆಯನ್ನೂ ನೀಡಿದ್ದರು. ಅದರಂತೆ ಗುರುವಾರ (ಡಿ.1) ರಾತ್ರಿ ನೂತನ ವ್ಯವಸ್ಥೆಗೆ ಪ್ರತಾಪ್ ಸಿಂಹ ಚಾಲನೆ ನೀಡಿದರು.

12 ಕೋಟಿ ರೂ. ವೆಚ್ಚ

45 ಕಿ.ಮೀ. ಸುತ್ತಳತೆ

86 ಕಿ.ಮೀ. ಕೇಬಲ್

4,556ಎಲ್‌ಇಡಿ ಬಲ್ಬ್

20 ಹೈಮಾಸ್ಟ್ ದೀಪ

andolana

Recent Posts

ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕ ಬೆಂಕಿ

ಮದ್ದೂರು : ತಾಲ್ಲೂಕಿನ ನಿಡಘಟ್ಟದ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಕಾರು ಸುಟ್ಟುಹೋಗಿದ್ದು, ಅದೃಷ್ಟವಶಾತ್…

9 hours ago

ಮೈಸೂರಿನಲ್ಲಿ ನಾಳೆ ಇಂದ ಮೂರು ದಿನ ದೇಸಿ ಎಣ್ಣೆ ಮೇಳ : ಮೇಳೈಸಲಿದೆ ಸಾಂಪ್ರದಾಯಿಕ ಎಣ್ಣೆ

ಮೈಸೂರು : ಇತ್ತೀಚಿನ ದಿನಗಳಲ್ಲಿ ಸಾಂಪ್ರದಾಯಿಕ ಅಡುಗೆ ಎಣ್ಣೆಗಳು, ಅವುಗಳ ಆರೋಗ್ಯ ಲಾಭಗಳ ಕಾರಣದಿಂದ ಮತ್ತೆ ಹೆಚ್ಚಿನ ಮಹತ್ವ ಪಡೆದುಕೊಳ್ಳುತ್ತಿವೆ.…

10 hours ago

ಬಿ-ಖಾತಾಗಳಿಗೂ ʼಎ-ಖಾತಾʼ ಭಾಗ್ಯ ; ಸಂಪುಟ ಸಭೆಯಲ್ಲಿ ನಿರ್ಣಯ

ಬೆಂಗಳೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಇಂದು (ಜ.8) ನಡೆದ 2026ನೇ ಸಾಲಿನ 2ನೇ ಸಚಿವ ಸಂಪುಟದ ಸಭೆಯಲ್ಲಿ…

11 hours ago

ಮಂಡ್ಯದಲ್ಲಿ ಕೆಂಪೇಗೌಡರ ಬೃಹತ್‌ ಪ್ರತಿಮೆ : ಶಿಲ್ಪಿ ಅರುಣ್‌ ಯೋಗಿರಾಜ್‌ಗೆ ಕೆತ್ತನೆ ಜವಾಬ್ದಾರಿ

ಮಂಡ್ಯ : ನಗರಕ್ಕೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿರುವ ಶಾಸಕ ಪಿ. ರವಿಕುಮಾರಗೌಡ ಅವರು, ಒಕ್ಕಲಿಗ ಜನಾಂಗದ ಹಲವು ವರ್ಷಗಳ…

12 hours ago

ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಚಿಂತನೆ : ಸಂಸದ ಯದುವೀರ್‌

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನ ಸ್ವಚ್ಛತೆಯನ್ನು ಕಾಪಾಡುವ ನಿಟ್ಟಿನಲ್ಲಿ ನಗರದಲ್ಲಿ ಬೀದಿಬದಿ ವ್ಯಾಪಾರಿಗಳ ವಲಯ ನಿರ್ಮಿಸಲು ಆದ್ಯತೆ ನೀಡಲಾಗುವುದು…

13 hours ago

ಗೃಹಲಕ್ಷ್ಮಿ ಹಣ ಶೀಘ್ರ ಸಂದಾಯ : ಸಚಿವೆ ಹೆಬ್ಬಾಳಕರ್‌

ಬೆಂಗಳೂರು : ಹಣಕಾಸು ಇಲಾಖೆ ಅನುಮತಿ ನೀಡಿದ ತಕ್ಷಣವೇ 2025ರ ಫೆಬ್ರವರಿ ಹಾಗೂ ಮಾರ್ಚ್‌ ತಿಂಗಳ ಗೃಹಲಕ್ಷ್ಮೀ ಯೋಜನೆಯ ಹಣವನ್ನು…

13 hours ago