ಮೈಸೂರು: ತಿಂಗಳುಗಳಿಂದ ಕಗ್ಗತ್ತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದಲೇ ಎಲ್ಇಡಿ ಬೆಳಕು ಪ್ರಜ್ವಲಿಸಿತು.
ಕಳೆದ ಹಲವಾರು ವರ್ಷಗಳಿಂದ ವರ್ತುಲ ರಸ್ತೆಯಲ್ಲಿ ವಿದ್ಯುತ್ ದೀಪಗಳು ಇರಲಿಲ್ಲ. ಇದರಿಂದ ಪ್ರಾಂಣಿಕರಿಗೆ ಹಾಗೂ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಜತೆಗೆ ಅಪರಾಧ ಕೃತ್ಯಗಳು ನಡೆಯುತ್ತಿದ್ದವು. ವಿದ್ಯುತ್ ದೀಪಗಳ ಅಳವಡಿಕೆಯಿಂದ ಇದಕ್ಕೆಲ್ಲಾ ಕಡಿವಾಣ ಬಿದ್ದಿದೆ.
ಈ ಹಿಂದೆ ವಿದ್ಯುತ್ ದೀಪದ ಬಿಲ್ ಕೂಡ 1.19 ಕೋಟಿ ಸೆಸ್ಕ್ಗೆ ಬಾಕಿ ಇತ್ತು. ಇದರಿಂದ ಕೂಡ ಬೀದಿ ದೀಪಗಳನ್ನು ಬೆಳಗಿಸಲು ಸಾಧ್ಯವಾಗಿರಲಿಲ್ಲ. ಅದರಂತೆ ಸೆಸ್ಕ್ಗೆ ಪಾವತಿಸಬೇಕಿದ್ದ 1.19 ಕೋಟಿ ರೂ.ಗಳನ್ನು ಮುಡಾ ವತಿಯಿಂದ ನೀಡಲಾಗಿದೆ. ಬೀದಿ ದೀಪಗಳ ನಿರ್ವಹಣೆಗೆ ಒಂದು ವರ್ಷದವರೆಗೆ ಗುತ್ತಿಗೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಬಿಲ್ ಪಾವತಿ ಹಾಗೂ ನಿರ್ವಹಣೆಯನ್ನು ನಗರಪಾಲಿಕೆ ಮಾಡಲಿದೆ.
ಈ ಹಿಂದೆ ವರ್ತುಲ ರಸ್ತೆಯ ಸುತ್ತಾ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಕೇಬಲ್, ಕಂಬ, ಬಲ್ಬ್ ಗಳ ಕಳವು ಪ್ರಕರಣಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ವರ್ತುಲ ರಸ್ತೆುಂ ಪ್ರತಿ 2 ಕಿ.ಮೀ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಸಲು ಚಿಂತನೆ ನಡೆಸಲಾಗಿದೆ.
ಎಲ್ಇಡಿ ದೀಪಗಳ ಅಳವಡಿಕೆಗೆ ಕಳೆದ ಕೆಲವು ತಿಂಗಳಿನಿಂದ ಸಂಸದ ಪ್ರತಾಪ್ ಸಿಂಹ ಯೋಜನೆ ರೂಪಿಸಿದ್ದರು. ಡಿಸೆಂಬರ್ ಒಳಗೆ ವಿದ್ಯುತ್ ದೀಪ ಅಳವಡಿಸುವ ಭರವಸೆಯನ್ನೂ ನೀಡಿದ್ದರು. ಅದರಂತೆ ಗುರುವಾರ (ಡಿ.1) ರಾತ್ರಿ ನೂತನ ವ್ಯವಸ್ಥೆಗೆ ಪ್ರತಾಪ್ ಸಿಂಹ ಚಾಲನೆ ನೀಡಿದರು.
12 ಕೋಟಿ ರೂ. ವೆಚ್ಚ
45 ಕಿ.ಮೀ. ಸುತ್ತಳತೆ
86 ಕಿ.ಮೀ. ಕೇಬಲ್
4,556ಎಲ್ಇಡಿ ಬಲ್ಬ್
20 ಹೈಮಾಸ್ಟ್ ದೀಪ
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…