ಜಿಲ್ಲೆಗಳು

ವರ್ತುಲ ರಸ್ತೆಗೆ ಬೆಳಕು : ಝಗಮಗಿಸಿದ ಎಲ್‌ಇಡಿ ವಿದ್ಯುತ್ ದೀಪಗಳು

ಪ್ರತಿ 2 ಕಿ.ಮೀ.ಗೆ ಸಿಸಿ ಕ್ಯಾಮೆರಾ ಅಳವಡಿಕೆ ಚಿಂತನೆ

ಮೈಸೂರು: ತಿಂಗಳುಗಳಿಂದ ಕಗ್ಗತ್ತಲಿನಲ್ಲಿದ್ದ ನಗರದ ವರ್ತುಲ ರಸ್ತೆಯಲ್ಲಿನ ಬೀದಿ ದೀಪಗಳ ಸಮಸ್ಯೆ ಬಗೆಹರಿದಿದ್ದು, ಗುರುವಾರ ರಾತ್ರಿಯಿಂದಲೇ ಎಲ್‌ಇಡಿ ಬೆಳಕು ಪ್ರಜ್ವಲಿಸಿತು.

ಕಳೆದ ಹಲವಾರು ವರ್ಷಗಳಿಂದ ವರ್ತುಲ ರಸ್ತೆಯಲ್ಲಿ ವಿದ್ಯುತ್ ದೀಪಗಳು ಇರಲಿಲ್ಲ. ಇದರಿಂದ ಪ್ರಾಂಣಿಕರಿಗೆ ಹಾಗೂ ರಾತ್ರಿ ವೇಳೆ ಸಂಚರಿಸುವ ಸಾರ್ವಜನಿಕರಿಗೆ ತೊಂದರೆಯಾಗುತ್ತಿತ್ತು. ಜತೆಗೆ ಅಪರಾಧ ಕೃತ್ಯಗಳು ನಡೆಯುತ್ತಿದ್ದವು. ವಿದ್ಯುತ್ ದೀಪಗಳ ಅಳವಡಿಕೆಯಿಂದ ಇದಕ್ಕೆಲ್ಲಾ ಕಡಿವಾಣ ಬಿದ್ದಿದೆ.

ಈ ಹಿಂದೆ ವಿದ್ಯುತ್ ದೀಪದ ಬಿಲ್ ಕೂಡ 1.19 ಕೋಟಿ ಸೆಸ್ಕ್‌ಗೆ ಬಾಕಿ ಇತ್ತು. ಇದರಿಂದ ಕೂಡ ಬೀದಿ ದೀಪಗಳನ್ನು ಬೆಳಗಿಸಲು ಸಾಧ್ಯವಾಗಿರಲಿಲ್ಲ. ಅದರಂತೆ ಸೆಸ್ಕ್‌ಗೆ ಪಾವತಿಸಬೇಕಿದ್ದ 1.19 ಕೋಟಿ ರೂ.ಗಳನ್ನು ಮುಡಾ ವತಿಯಿಂದ ನೀಡಲಾಗಿದೆ. ಬೀದಿ ದೀಪಗಳ ನಿರ್ವಹಣೆಗೆ ಒಂದು ವರ್ಷದವರೆಗೆ ಗುತ್ತಿಗೆ ನೀಡಲಾಗಿದೆ. ಮುಂದಿನ ದಿನಗಳಲ್ಲಿ ವಿದ್ಯುತ್ ಬಿಲ್ ಪಾವತಿ ಹಾಗೂ ನಿರ್ವಹಣೆಯನ್ನು ನಗರಪಾಲಿಕೆ ಮಾಡಲಿದೆ.

ಈ ಹಿಂದೆ ವರ್ತುಲ ರಸ್ತೆಯ ಸುತ್ತಾ ವಿವಿಧ ಸ್ಥಳಗಳಲ್ಲಿ ವಿದ್ಯುತ್ ಕೇಬಲ್, ಕಂಬ, ಬಲ್ಬ್ ಗಳ ಕಳವು ಪ್ರಕರಣಗಳು ವರದಿಯಾಗಿದ್ದವು. ಈ ಹಿನ್ನೆಲೆಯಲ್ಲಿ ಸುರಕ್ಷತೆಗೆ ಆದ್ಯತೆ ನೀಡಲಾಗಿದ್ದು, ವರ್ತುಲ ರಸ್ತೆುಂ ಪ್ರತಿ 2 ಕಿ.ಮೀ ವ್ಯಾಪ್ತಿಯಲ್ಲಿ ಸಿಸಿಟಿವಿ ಅಳವಡಿಸಲು ಚಿಂತನೆ ನಡೆಸಲಾಗಿದೆ.

ಎಲ್‌ಇಡಿ ದೀಪಗಳ ಅಳವಡಿಕೆಗೆ ಕಳೆದ ಕೆಲವು ತಿಂಗಳಿನಿಂದ ಸಂಸದ ಪ್ರತಾಪ್ ಸಿಂಹ ಯೋಜನೆ ರೂಪಿಸಿದ್ದರು. ಡಿಸೆಂಬರ್ ಒಳಗೆ ವಿದ್ಯುತ್ ದೀಪ ಅಳವಡಿಸುವ ಭರವಸೆಯನ್ನೂ ನೀಡಿದ್ದರು. ಅದರಂತೆ ಗುರುವಾರ (ಡಿ.1) ರಾತ್ರಿ ನೂತನ ವ್ಯವಸ್ಥೆಗೆ ಪ್ರತಾಪ್ ಸಿಂಹ ಚಾಲನೆ ನೀಡಿದರು.

12 ಕೋಟಿ ರೂ. ವೆಚ್ಚ

45 ಕಿ.ಮೀ. ಸುತ್ತಳತೆ

86 ಕಿ.ಮೀ. ಕೇಬಲ್

4,556ಎಲ್‌ಇಡಿ ಬಲ್ಬ್

20 ಹೈಮಾಸ್ಟ್ ದೀಪ

andolana

Recent Posts

ಮಂಡ್ಯ | ಪೊಲೀಸ್ ಠಾಣೆಯಿಂದ ತಪ್ಪಿಸಿಕೊಂಡು ಬಂದಿದ್ದ ಕೈದಿ ಜನರ ಕೈಗೆ ಸಿಕ್ಕಿಬಿದ್ದ

ಮಂಡ್ಯ : ಕೈಯ್ಯಲ್ಲಿ ಬೇಡಿ ಹಾಕಿ ಕೊಂಡಿರುವಾಗಲೇ ಠಾಣೆಯಿಂದ ತಪ್ಪಿಸಿಕೊಂಡು ಬಂದ ಕಳ್ಳನೊಬ್ಬ ಜನರ ಕೈಗೆ ಸಿಕ್ಕಿಬಿದ್ದಿರುವ ಘಟನೆ ಇಲ್ಲಿನ…

8 hours ago

ದಸರಾ ಗಜಪಡೆ ವೀಕ್ಷಣೆ ಟಿಕೆಟ್‌ ರದ್ದು

ಮೈಸೂರು: ಮೊನ್ನೆಯಷ್ಟೇ ಲಿಂಗಾಂಬುಧಿ ಉದ್ಯಾನ ಪ್ರವೇಶಕ್ಕೆ ಶುಲ್ಕ ನಿಗದಿಪಡಿಸಿ ಪರಿಸರವಾದಿಗಳ ಕೆಂಗಣ್ಣಿಗೆ ಗುರಿಯಾಗಿದ್ದ ಅರಣ್ಯ ಇಲಾಖೆ ಅಧಿಕಾರಿಗಳು ಅರಮನೆ ಅಂಗಳದಲ್ಲಿ…

9 hours ago

ನೇಪಾಳ ದುರಂತ | ಮೃತದೇಹದ ಮೇಲಿದ್ದ ಚಿನ್ನ ಕಳವು ; ಇಬ್ಬರು ಆರೋಪಿಗಳ ಬಂಧನ

ಎಚ್ಚೆತ್ತ ಪೊಲೀಸ್ ಆಡಳಿತ ; ಇಬ್ಬರು ಆರೋಪಿಗಳ ಬಂಧನ ಕಠ್ಮಂಡು : ನೇಪಾಳದಲ್ಲಿ ಸಂಭವಿಸಿರುವ ಭೀಕರ ಮಹಾಪೂರ ಹಾಗೂ ಭೂಕುಸಿತದಿಂದಾಗಿ…

9 hours ago

ಸೋನಿಯಾ ಗಾಂಧಿ ಆತ್ಮಚರಿತ್ರೆ ; ರಾಜಕೀಯ, ಸಾಹಿತ್ಯಿಕ ವಲಯದಲ್ಲಿ ಕೋಲಾಹಲ

ಹೊಸದಿಲ್ಲಿ : ಯುಪಿಎ ಒಕ್ಕೂಟದ ಹಿರಿಯ ನಾಯಕಿ ಹಾಗೂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ…

10 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ಈ ಬಾರಿ ಮೆರವಣಿಗೆಗೆ ಸೇನೆಗೆ ಆಹ್ವಾನ ಎಂದ ಸಿಎಂ ಡಿಕೆಶಿ

ಮೈಸೂರು: ಈ ಬಾರಿಯ ಮೈಸೂರು ದಸರಾ ಮೆರವಣಿಗೆಗೆ ಸೇನೆ ಹಾಗೂ ವಾಯುಸೇನೆಯನ್ನು ಆಹ್ವಾನಿಸಲು ನಿರ್ಧರಿಸಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್‌…

15 hours ago

ಮೈಕ್ರೋ ಫೈನಾನ್ಸ್‌ ಕಿರುಕುಳ: ವ್ಯಕ್ತಿ ಆತ್ಮಹತ್ಯೆ

ಹುಣಸೂರು: ತಾಲೂಕಿನ ನಂಜಾಪುರ ಗ್ರಾಮದಲ್ಲಿ ಖಾಸಗಿ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ನಂಜಾಪುರದಲ್ಲಿ…

18 hours ago