ಜಿಲ್ಲೆಗಳು

ದೀಪಾಲಂಕಾರ ಪ್ರಿಯರಿಗೆ ಗುಡ್ ನ್ಯೂಸ್

೫ ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡುವ ಸಾಧ್ಯತೆ; ಜಯವಿಭವ ಸ್ವಾಮಿ ಮಾಹಿತಿ

ಮೈಸೂರು: ದೀಪಾಲಂಕಾರಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾಲಂಕಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ದೊರಕುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಪ್ರವಾಸಿಗರಿಗೆ ದೀಪಾಲಂಕಾರವನ್ನು ವೀಕ್ಷಣೆ ಮಾಡಲು ಸಂಜೆ ೬.೩೦ ರಿಂದ ರಾತ್ರಿ ೧೦.೩೦ ವರೆಗೆ ಸಮಯವನ್ನು ವಿಸ್ತರಿಸಲಾಗಿದೆ. ಪ್ರವಾಸಿಗರು ದೀಪಾಲಂಕಾರದ ಮೆರುಗನ್ನು ಸವಿಯಲು ಅನುವು ಮಾಡಿಕೊಡಲಾಗಿದೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ದಸರಾ ಉತ್ಸವ ಉಪ ಸಮಿತಿಯು ಈಗಾಗಲೇ ೫.೨ ಕೋಟಿ ರೂ. ವೆಚ್ಚದಲ್ಲಿ ನಗರಡೆಲ್ಲೆಡೆ ದೀಪಾಲಂಕಾರ ಮಾಡಿದ್ದು, ಈಗ ಮತ್ತೆ ೪೦ ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿಯಾಗಿ ೪ ಕಿ.ಮೀ ರಸ್ತೆ, ೭ ಪ್ರತಿಕೃತಿಗಳು, ಹಾಗೂ ೧೩ ವೃತ್ತಗಳನ್ನು ದೀಪಾಲಂಕಾರ ಮಾಡಲು ಇಲಾಖೆಯು ಮುಂದಾಗಿದೆ. ಈ ಬಾರಿ ದೀಪಾಲಂಕಾರವು ವಿಶೇಷವಾಗಿದ್ದು, ಅಧಿಕಾರಿಗಳು, ಸ್ಥಳೀಯ ಗುತ್ತಿಗೆದಾರರೂ ಸೇರಿದಂತೆ ಸುಮಾರು ೩೦೦ಕ್ಕೂ ಹೆಚ್ಚು ಜನರು ಹಗಲಿರುಳು ಶ್ರಮಿಸಿದ್ದಾರೆ. ವ್ಯವಸ್ಥಿತವಾಗಿ ಚಾಮರಾಜ ಒಡೆಯರ್ ಹಾಗೂ ಏಕಲವ್ಯ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅವರ ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಲಾಗಿದೆ. ಇಷ್ಟೇ ಅಲ್ಲದೆ ಚಾಮುಂಡಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿರುವ ೧೬೦ ಬೀದಿ ದೀಪದ ಕಂಬಗಳಿಗೆ ಹಾಗೂ ವೀವ್ ಪಾಯಿಂಟ್‌ಗೆ ದೀಪಾಲಂಕಾರ ಮಾಡಲಾಗಿದೆ ಎಂದರು.

ನಗರದಲ್ಲಿ ಕೆಲವೂ ಕಡೆ ಶಿಫ್ಟ್ ಹೊಲ್ಡಿಂಗ್‌ನಿಂದಾಗಿ ಪೂರ್ಣ ಪ್ರಮಾಣದ ದೀಪಾಲಂಕಾರ ಸರಿಯಾದ ಸಮಯದಲ್ಲಿ ಆಗಿಲ್ಲ. ಅದಲ್ಲದೇ ಮಹಾರಾಜ ಪ್ರತಿಮೆಯ ಪೋಷಾಕುಗಳು ಪ್ರವಾಸಿಗರಿಗೆ ಕಾಣಲೆಂದು ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಿದ್ದೇವೆ. ಇದರಿಂದ ನಗರದಲ್ಲಿ ಕೆಲಹೊತ್ತು ದೀಪಾಲಂಕಾರದಲ್ಲಿ ವ್ಯತ್ಯವಾಗುತ್ತಿದೆ ಎಂದು ತಿಳಿಸಿದರು.

ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ.ರಮೇಶ್ ಮಾತನಾಡಿ, ದೀಪಾಲಂಕಾರವನ್ನು ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಸಮಿತಿಯೊಂದಿಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಜಿಲ್ಲೆಯ ಪತ್ರಕರ್ತರಿಗೆ ದೀಪಾಲಂಕಾರವನ್ನೂ ವೀಕ್ಷಿಸಿಲು ಸೆಸ್ಕ್ ನಿಂದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸೆಸ್ಕ್‌ನ ಡಿಟಿ ಮಂಜಪ್ಪ, ದೀಪಾಲಂಕಾರ ಉಪ ಸಮಿತಿ ಉಪಾಧ್ಯಕ್ಷರಾದ ಪುನೀತ್, ಮೇಣು, ಮಾರ್ಗದರ್ಶಕರಾದ ವಿಕ್ರಾಂತ್ ದೇವೇಗೌಡ, ಸೆಸ್ಕ್ ಇಂಜಿನಿಯರ್‌ಹಾಜರಿದ್ದರು.

andolanait

Recent Posts

ತಾಪಮಾನ ಇಳಿಕೆ : ಬೆಂಗಳೂರಲ್ಲಿ ಚಳಿ ಹೆಚ್ಚಳ

ಬೆಂಗಳೂರು : ಬೆಂಗಳೂರಿನಲ್ಲಿ ಕನಿಷ್ಠ 15 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಟ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ವರೆಗೆ ಇರುತ್ತದೆ…

5 hours ago

ಸಿಎ ಸೈಟ್‌ ಕಟ್ಟಡ ನಿರ್ಮಾಣ ಕಾಲಮಿತಿ ; 3 ವರ್ಷದಿಂದ 5 ವರ್ಷ ಹೆಚ್ಚಳದ ಭರವಸೆ

ಬೆಳಗಾವಿ : ಸರ್ಕಾರದಿಂದ ಪಡೆದ ಸಿಎ ನಿವೇಶನಗಳಲ್ಲಿ ಕಟ್ಟಡ ನಿರ್ಮಾಣ ಮಾಡಲು ಈಗಿರುವ ಮೂರು ವರ್ಷಗಳ ಮಿತಿಯನ್ನು ಐದು ವರ್ಷಗಳಿಗೆ…

5 hours ago

ಮೈಸೂರು : ಆನ್‌ಲೈನ್‌ನಲ್ಲಿ ವೈದ್ಯರೊಬ್ಬರಿಗೆ 82 ಲಕ್ಷ ರೂ. ವಂಚನೆ

ಮೈಸೂರು : ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರ(ಟ್ರಾಯ್) ಹಾಗೂ ಮುಂಬೈನ ಬಾಂಧ್ರಾ ಪೊಲೀಸ್ ಅಧಿಕಾರಿ ಸೋಗಿನಲ್ಲಿ ನಗರದ ವೈದ್ಯರೊಬ್ಬರಿಗೆ…

5 hours ago

SC/ST ದೌರ್ಜನ್ಯ ತಡೆ : ನಾಗರಿಕ ಹಕ್ಕು ಜಾರಿ ನೂತನ ಠಾಣೆ ಮೈಸೂರಲ್ಲಿ ಕಾರ್ಯರಂಭ

ಮೈಸೂರು : ಜಾತಿ ನಿಂದನೆ, ಅಸ್ಪೃಶ್ಯತೆ ಆಚರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ದೂರು ದಾಖಲು ಹಾಗೂ ತನಿಖೆ ನಡೆಸುವ ಉದ್ದೇಶದಿಂದ ಆರಂಭಗೊಂಡಿರುವ…

6 hours ago

ಕೆಪಿಎ-ಮಹಿಳಾ-ಮಕ್ಕಳ ಅಭಿವೃದ್ಧಿ ಸಂಸ್ಥೆ ನಡುವೆ ಒಡಂಬಡಿಕೆ

ಮೈಸೂರು : ಕರ್ನಾಟಕ ಪೊಲೀಸ್ ಅಕಾಡೆಮಿ ಮತ್ತು ಸಾವಿತ್ರಿಬಾಯಿ ಫುಲೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಂಸ್ಥೆಯ ನಡುವೆ ಒಡಂಬಡಿಕೆಗೆ…

6 hours ago

ಮೈಸೂರಲ್ಲಿ ಎಸ್.ಎಲ್.ಬೈರಪ್ಪ ಸ್ಮಾರಕ ನಿರ್ಮಾಣ : ಸಿಎಂ ಘೋಷಣೆ

ಬೆಳಗಾವಿ (ಸುವರ್ಣಸೌಧ) : ಇತ್ತೀಚೆಗೆ ನಿಧನರಾದ ಸಾಹಿತಿ ಎಸ್.ಎಲ್.ಭೈರಪ್ಪ ಅವರ ಸ್ಮಾರಕವನ್ನು ಮೈಸೂರಿನಲ್ಲಿ ನಿರ್ಮಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…

6 hours ago