೫ ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡುವ ಸಾಧ್ಯತೆ; ಜಯವಿಭವ ಸ್ವಾಮಿ ಮಾಹಿತಿ
ಮೈಸೂರು: ದೀಪಾಲಂಕಾರಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸೆಸ್ಕ್ನ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದರು.
ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾಲಂಕಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ದೊರಕುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಪ್ರವಾಸಿಗರಿಗೆ ದೀಪಾಲಂಕಾರವನ್ನು ವೀಕ್ಷಣೆ ಮಾಡಲು ಸಂಜೆ ೬.೩೦ ರಿಂದ ರಾತ್ರಿ ೧೦.೩೦ ವರೆಗೆ ಸಮಯವನ್ನು ವಿಸ್ತರಿಸಲಾಗಿದೆ. ಪ್ರವಾಸಿಗರು ದೀಪಾಲಂಕಾರದ ಮೆರುಗನ್ನು ಸವಿಯಲು ಅನುವು ಮಾಡಿಕೊಡಲಾಗಿದೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.
ದಸರಾ ಉತ್ಸವ ಉಪ ಸಮಿತಿಯು ಈಗಾಗಲೇ ೫.೨ ಕೋಟಿ ರೂ. ವೆಚ್ಚದಲ್ಲಿ ನಗರಡೆಲ್ಲೆಡೆ ದೀಪಾಲಂಕಾರ ಮಾಡಿದ್ದು, ಈಗ ಮತ್ತೆ ೪೦ ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿಯಾಗಿ ೪ ಕಿ.ಮೀ ರಸ್ತೆ, ೭ ಪ್ರತಿಕೃತಿಗಳು, ಹಾಗೂ ೧೩ ವೃತ್ತಗಳನ್ನು ದೀಪಾಲಂಕಾರ ಮಾಡಲು ಇಲಾಖೆಯು ಮುಂದಾಗಿದೆ. ಈ ಬಾರಿ ದೀಪಾಲಂಕಾರವು ವಿಶೇಷವಾಗಿದ್ದು, ಅಧಿಕಾರಿಗಳು, ಸ್ಥಳೀಯ ಗುತ್ತಿಗೆದಾರರೂ ಸೇರಿದಂತೆ ಸುಮಾರು ೩೦೦ಕ್ಕೂ ಹೆಚ್ಚು ಜನರು ಹಗಲಿರುಳು ಶ್ರಮಿಸಿದ್ದಾರೆ. ವ್ಯವಸ್ಥಿತವಾಗಿ ಚಾಮರಾಜ ಒಡೆಯರ್ ಹಾಗೂ ಏಕಲವ್ಯ ವೃತ್ತದಲ್ಲಿ ಪುನೀತ್ ರಾಜ್ಕುಮಾರ್ ಅವರ ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಲಾಗಿದೆ. ಇಷ್ಟೇ ಅಲ್ಲದೆ ಚಾಮುಂಡಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿರುವ ೧೬೦ ಬೀದಿ ದೀಪದ ಕಂಬಗಳಿಗೆ ಹಾಗೂ ವೀವ್ ಪಾಯಿಂಟ್ಗೆ ದೀಪಾಲಂಕಾರ ಮಾಡಲಾಗಿದೆ ಎಂದರು.
ನಗರದಲ್ಲಿ ಕೆಲವೂ ಕಡೆ ಶಿಫ್ಟ್ ಹೊಲ್ಡಿಂಗ್ನಿಂದಾಗಿ ಪೂರ್ಣ ಪ್ರಮಾಣದ ದೀಪಾಲಂಕಾರ ಸರಿಯಾದ ಸಮಯದಲ್ಲಿ ಆಗಿಲ್ಲ. ಅದಲ್ಲದೇ ಮಹಾರಾಜ ಪ್ರತಿಮೆಯ ಪೋಷಾಕುಗಳು ಪ್ರವಾಸಿಗರಿಗೆ ಕಾಣಲೆಂದು ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಿದ್ದೇವೆ. ಇದರಿಂದ ನಗರದಲ್ಲಿ ಕೆಲಹೊತ್ತು ದೀಪಾಲಂಕಾರದಲ್ಲಿ ವ್ಯತ್ಯವಾಗುತ್ತಿದೆ ಎಂದು ತಿಳಿಸಿದರು.
ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ.ರಮೇಶ್ ಮಾತನಾಡಿ, ದೀಪಾಲಂಕಾರವನ್ನು ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಸಮಿತಿಯೊಂದಿಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಜಿಲ್ಲೆಯ ಪತ್ರಕರ್ತರಿಗೆ ದೀಪಾಲಂಕಾರವನ್ನೂ ವೀಕ್ಷಿಸಿಲು ಸೆಸ್ಕ್ ನಿಂದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.
ಸೆಸ್ಕ್ನ ಡಿಟಿ ಮಂಜಪ್ಪ, ದೀಪಾಲಂಕಾರ ಉಪ ಸಮಿತಿ ಉಪಾಧ್ಯಕ್ಷರಾದ ಪುನೀತ್, ಮೇಣು, ಮಾರ್ಗದರ್ಶಕರಾದ ವಿಕ್ರಾಂತ್ ದೇವೇಗೌಡ, ಸೆಸ್ಕ್ ಇಂಜಿನಿಯರ್ಹಾಜರಿದ್ದರು.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪ್ರತಿ ಗ್ರಾಮಗಳಿಗೂ ಕೆಎಸ್ಆರ್ಟಿಸಿ ಸೌಲಭ್ಯ ಕಲ್ಪಿಸಲು ತಾಲೂಕು ಕೇಂದ್ರದಲ್ಲಿ…
ಶ್ರೀರಂಗಪಟ್ಟಣ: ವಿದ್ಯುತ್ ಸ್ಪರ್ಶದಿಂದ ಕರ್ತವ್ಯ ನಿರತ ಲೈನ್ಮ್ಯಾನ್ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಹೆಬ್ಬಾಡಿ ಗ್ರಾಮದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಹಲವೆಡೆ ಇಂದು ಧಾರಾಕಾರ ಮಳೆಯಾಗಿದ್ದು, ಭಾರೀ ಅವಾಂತರ ಸೃಷ್ಟಿ ಮಾಡಿದೆ. ಚಿಕ್ಕಮಗಳೂರು, ಶಿವಮೊಗ್ಗ ಸೇರಿದಂತೆ ರಾಜ್ಯದ ಹಲವೆಡೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಾರ್ಟಳ್ಳಿ, ಕೌದಳ್ಳಿ, ಶೆಟ್ಟಳ್ಳಿ, ಕುರಟ್ಟಿ ಹೊಸೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ…
ಮೈಸೂರು: ಅರಮನೆಗಳ ನಗರಿ ಮೈಸೂರಿನಲ್ಲಿ ಅವೈಜ್ಞಾನಿಕವಾಗಿ ಟ್ರಾಫಿಕ್ ಸಿಗ್ನಲ್ ಅಳವಡಿಸಲಾಗಿದೆ ಎಂದು ಸಾರ್ವಜನಿಕರು ಕಿಡಿಕಾರುತ್ತಿರುವ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಮಹದೇವಪ್ಪ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ದಿನಗಣನೆ ಶುರುವಾಗಿರುವ ಹಿನ್ನೆಲೆಯಲ್ಲಿ ಸಿಎಂ ಮಮತಾ ಬ್ಯಾನರ್ಜಿ ವಿರುದ್ಧ ಕೇಂದ್ರ ಗೃಹ ಸಚಿವ…