ಜಿಲ್ಲೆಗಳು

ದೀಪಾಲಂಕಾರ ಪ್ರಿಯರಿಗೆ ಗುಡ್ ನ್ಯೂಸ್

೫ ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡುವ ಸಾಧ್ಯತೆ; ಜಯವಿಭವ ಸ್ವಾಮಿ ಮಾಹಿತಿ

ಮೈಸೂರು: ದೀಪಾಲಂಕಾರಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾಲಂಕಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ದೊರಕುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಪ್ರವಾಸಿಗರಿಗೆ ದೀಪಾಲಂಕಾರವನ್ನು ವೀಕ್ಷಣೆ ಮಾಡಲು ಸಂಜೆ ೬.೩೦ ರಿಂದ ರಾತ್ರಿ ೧೦.೩೦ ವರೆಗೆ ಸಮಯವನ್ನು ವಿಸ್ತರಿಸಲಾಗಿದೆ. ಪ್ರವಾಸಿಗರು ದೀಪಾಲಂಕಾರದ ಮೆರುಗನ್ನು ಸವಿಯಲು ಅನುವು ಮಾಡಿಕೊಡಲಾಗಿದೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ದಸರಾ ಉತ್ಸವ ಉಪ ಸಮಿತಿಯು ಈಗಾಗಲೇ ೫.೨ ಕೋಟಿ ರೂ. ವೆಚ್ಚದಲ್ಲಿ ನಗರಡೆಲ್ಲೆಡೆ ದೀಪಾಲಂಕಾರ ಮಾಡಿದ್ದು, ಈಗ ಮತ್ತೆ ೪೦ ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿಯಾಗಿ ೪ ಕಿ.ಮೀ ರಸ್ತೆ, ೭ ಪ್ರತಿಕೃತಿಗಳು, ಹಾಗೂ ೧೩ ವೃತ್ತಗಳನ್ನು ದೀಪಾಲಂಕಾರ ಮಾಡಲು ಇಲಾಖೆಯು ಮುಂದಾಗಿದೆ. ಈ ಬಾರಿ ದೀಪಾಲಂಕಾರವು ವಿಶೇಷವಾಗಿದ್ದು, ಅಧಿಕಾರಿಗಳು, ಸ್ಥಳೀಯ ಗುತ್ತಿಗೆದಾರರೂ ಸೇರಿದಂತೆ ಸುಮಾರು ೩೦೦ಕ್ಕೂ ಹೆಚ್ಚು ಜನರು ಹಗಲಿರುಳು ಶ್ರಮಿಸಿದ್ದಾರೆ. ವ್ಯವಸ್ಥಿತವಾಗಿ ಚಾಮರಾಜ ಒಡೆಯರ್ ಹಾಗೂ ಏಕಲವ್ಯ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅವರ ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಲಾಗಿದೆ. ಇಷ್ಟೇ ಅಲ್ಲದೆ ಚಾಮುಂಡಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿರುವ ೧೬೦ ಬೀದಿ ದೀಪದ ಕಂಬಗಳಿಗೆ ಹಾಗೂ ವೀವ್ ಪಾಯಿಂಟ್‌ಗೆ ದೀಪಾಲಂಕಾರ ಮಾಡಲಾಗಿದೆ ಎಂದರು.

ನಗರದಲ್ಲಿ ಕೆಲವೂ ಕಡೆ ಶಿಫ್ಟ್ ಹೊಲ್ಡಿಂಗ್‌ನಿಂದಾಗಿ ಪೂರ್ಣ ಪ್ರಮಾಣದ ದೀಪಾಲಂಕಾರ ಸರಿಯಾದ ಸಮಯದಲ್ಲಿ ಆಗಿಲ್ಲ. ಅದಲ್ಲದೇ ಮಹಾರಾಜ ಪ್ರತಿಮೆಯ ಪೋಷಾಕುಗಳು ಪ್ರವಾಸಿಗರಿಗೆ ಕಾಣಲೆಂದು ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಿದ್ದೇವೆ. ಇದರಿಂದ ನಗರದಲ್ಲಿ ಕೆಲಹೊತ್ತು ದೀಪಾಲಂಕಾರದಲ್ಲಿ ವ್ಯತ್ಯವಾಗುತ್ತಿದೆ ಎಂದು ತಿಳಿಸಿದರು.

ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ.ರಮೇಶ್ ಮಾತನಾಡಿ, ದೀಪಾಲಂಕಾರವನ್ನು ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಸಮಿತಿಯೊಂದಿಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಜಿಲ್ಲೆಯ ಪತ್ರಕರ್ತರಿಗೆ ದೀಪಾಲಂಕಾರವನ್ನೂ ವೀಕ್ಷಿಸಿಲು ಸೆಸ್ಕ್ ನಿಂದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸೆಸ್ಕ್‌ನ ಡಿಟಿ ಮಂಜಪ್ಪ, ದೀಪಾಲಂಕಾರ ಉಪ ಸಮಿತಿ ಉಪಾಧ್ಯಕ್ಷರಾದ ಪುನೀತ್, ಮೇಣು, ಮಾರ್ಗದರ್ಶಕರಾದ ವಿಕ್ರಾಂತ್ ದೇವೇಗೌಡ, ಸೆಸ್ಕ್ ಇಂಜಿನಿಯರ್‌ಹಾಜರಿದ್ದರು.

andolanait

Recent Posts

ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್‌ ಮನೆ ಮೇಲೆ ಇ.ಡಿ ದಾಳಿ

ತಿರುವನಂತಪುರ: ಸಿಎಂಆರ್‌ಎಲ್‌ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ತೀವ್ರಗೊಳಿಸಿರುವ ಜಾರಿ ನಿರ್ದೇಶನಾಲಯ ಇಂದು ಕೇರಳದ ಮಾಜಿ ಸಿಎಂ…

27 mins ago

ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಸಲ್ಲಿಸುವ ಸಾಧ್ಯತೆಗಳು ದಟ್ಟವಾಗಿವೆ. ಮೇ.29ರಂದು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ನಡೆಯುವ…

1 hour ago

ಕಪಿಲಾ ತೀರದಲ್ಲಿ ಮುಂದುವರಿದ ಬಿಸಿ ನೀರಿನ ಸುಲಿಗೆ

ಎಸ್.ಎಸ್.ಭಟ್ ನಂಜನಗೂಡು: ಅಧಿಕಾರಿಗಳ ನೋಟಿಸ್‌ಗೂ ಕ್ಯಾರೆ ಎನ್ನದ ಶ್ರೀಕಂಠೇಶ್ವರ ದೇವಾಲಯದ ಸಿಬ್ಬಂದಿ ನಂಜನಗೂಡು: ಇಲ್ಲಿನ ಪ್ರಸಿದ್ಧ ಶ್ರೀಕಂಠೇಶ್ವರ ದೇವಾಲಯದ ಕಪಿಲಾ…

5 hours ago

ಪಂಜುಗಂಗೊಳ್ಳಿ ಅವರ ವಾರದ ಅಂಕಣ: ಆಸಿಡ್ ದಾಳಿಯ ಸಂತ್ರಸ್ತೆಯರನ್ನು ಸಂತೈಸುವ ‘ದಿ ನೆಸ್ಟ್ ಸಲೂನ್’

ಬ್ಯೂಟಿ ಪಾರ್ಲರ್‌ಗಳನ್ನು ತೆರೆದು ಅದರಿಂದ ಬದುಕು ನಡೆಸಲು ತರಬೇತಿ ೨೦೧೪ರಲ್ಲಿ ದೆಹಲಿಯ ಅಂಶು ರಜಪೂತ್ ೧೫ ವರ್ಷದವಳಾಗಿದ್ದಾಗ ಎಂದಿನಂತೆ ತನ್ನ…

5 hours ago

ಜಿರಳೆಗಳು ಎದ್ದಿವೆ, ವ್ಯವಸ್ಥೆಯ ಗಟಾರ ತೊಳೆಯುವವರು ಯಾರು?

ಎಸ್.ಸಿ. ದಿನೇಶ್ ಕುಮಾರ್, ಹಿರಿಯ ಪತ್ರಕರ್ತರು ಕಾಕ್ರೋಚ್ ಜನತಾ ಪಾರ್ಟಿ ನಮ್ಮ ದೇಶದ ಯುವಜನರ ಹತಾಶೆ, ಸಿಟ್ಟು, ಆಕ್ರೋಶಕ್ಕೆ  ಹಿಡಿದ…

5 hours ago

ಅಕಾಲಿಕ ಮಳೆ; ಮಾವು ಇಳುವರಿ ಕುಂಠಿತ

ಚಿರಂಜೀವಿ ಸಿ. ಹುಲ್ಲಹಳ್ಳಿ ಬೆಳೆಗಾರ ಕಂಗಾಲು; ನಷ್ಟಕ್ಕೆ ಪರಿಹಾರ ಕಲ್ಪಿಸಲು ರೈತರ ಒತ್ತಾಯ ಮೈಸೂರು: ಮಳೆ ಕೊರತೆ ಮತ್ತು ಹವಾಮಾನ ವೈಪರೀತ್ಯದಿಂದಾಗಿ…

5 hours ago