ಜಿಲ್ಲೆಗಳು

ದೀಪಾಲಂಕಾರ ಪ್ರಿಯರಿಗೆ ಗುಡ್ ನ್ಯೂಸ್

೫ ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ ಮಾಡುವ ಸಾಧ್ಯತೆ; ಜಯವಿಭವ ಸ್ವಾಮಿ ಮಾಹಿತಿ

ಮೈಸೂರು: ದೀಪಾಲಂಕಾರಕ್ಕೆ ಪ್ರವಾಸಿಗರಿಂದ ಉತ್ತಮ ಪ್ರತಿಕ್ರಿಯೆ ಬರುತ್ತಿದ್ದು, ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಸೆಸ್ಕ್‌ನ ವ್ಯವಸ್ಥಾಪಕ ನಿರ್ದೇಶಕ ಜಯವಿಭವ ಸ್ವಾಮಿ ತಿಳಿಸಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದೀಪಾಲಂಕಾರಕ್ಕೆ ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಚಾರ ದೊರಕುತ್ತಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಪ್ರವಾಸಿಗರಿಗೆ ದೀಪಾಲಂಕಾರವನ್ನು ವೀಕ್ಷಣೆ ಮಾಡಲು ಸಂಜೆ ೬.೩೦ ರಿಂದ ರಾತ್ರಿ ೧೦.೩೦ ವರೆಗೆ ಸಮಯವನ್ನು ವಿಸ್ತರಿಸಲಾಗಿದೆ. ಪ್ರವಾಸಿಗರು ದೀಪಾಲಂಕಾರದ ಮೆರುಗನ್ನು ಸವಿಯಲು ಅನುವು ಮಾಡಿಕೊಡಲಾಗಿದೆ ಹಾಗೂ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ತಿಳಿಸಿದರು.

ದಸರಾ ಉತ್ಸವ ಉಪ ಸಮಿತಿಯು ಈಗಾಗಲೇ ೫.೨ ಕೋಟಿ ರೂ. ವೆಚ್ಚದಲ್ಲಿ ನಗರಡೆಲ್ಲೆಡೆ ದೀಪಾಲಂಕಾರ ಮಾಡಿದ್ದು, ಈಗ ಮತ್ತೆ ೪೦ ಲಕ್ಷ ರೂ. ವೆಚ್ಚದಲ್ಲಿ ಹೆಚ್ಚುವರಿಯಾಗಿ ೪ ಕಿ.ಮೀ ರಸ್ತೆ, ೭ ಪ್ರತಿಕೃತಿಗಳು, ಹಾಗೂ ೧೩ ವೃತ್ತಗಳನ್ನು ದೀಪಾಲಂಕಾರ ಮಾಡಲು ಇಲಾಖೆಯು ಮುಂದಾಗಿದೆ. ಈ ಬಾರಿ ದೀಪಾಲಂಕಾರವು ವಿಶೇಷವಾಗಿದ್ದು, ಅಧಿಕಾರಿಗಳು, ಸ್ಥಳೀಯ ಗುತ್ತಿಗೆದಾರರೂ ಸೇರಿದಂತೆ ಸುಮಾರು ೩೦೦ಕ್ಕೂ ಹೆಚ್ಚು ಜನರು ಹಗಲಿರುಳು ಶ್ರಮಿಸಿದ್ದಾರೆ. ವ್ಯವಸ್ಥಿತವಾಗಿ ಚಾಮರಾಜ ಒಡೆಯರ್ ಹಾಗೂ ಏಕಲವ್ಯ ವೃತ್ತದಲ್ಲಿ ಪುನೀತ್ ರಾಜ್‌ಕುಮಾರ್ ಅವರ ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಲಾಗಿದೆ. ಇಷ್ಟೇ ಅಲ್ಲದೆ ಚಾಮುಂಡಿ ಬೆಟ್ಟಕ್ಕೆ ಹೋಗುವ ದಾರಿಯಲ್ಲಿರುವ ೧೬೦ ಬೀದಿ ದೀಪದ ಕಂಬಗಳಿಗೆ ಹಾಗೂ ವೀವ್ ಪಾಯಿಂಟ್‌ಗೆ ದೀಪಾಲಂಕಾರ ಮಾಡಲಾಗಿದೆ ಎಂದರು.

ನಗರದಲ್ಲಿ ಕೆಲವೂ ಕಡೆ ಶಿಫ್ಟ್ ಹೊಲ್ಡಿಂಗ್‌ನಿಂದಾಗಿ ಪೂರ್ಣ ಪ್ರಮಾಣದ ದೀಪಾಲಂಕಾರ ಸರಿಯಾದ ಸಮಯದಲ್ಲಿ ಆಗಿಲ್ಲ. ಅದಲ್ಲದೇ ಮಹಾರಾಜ ಪ್ರತಿಮೆಯ ಪೋಷಾಕುಗಳು ಪ್ರವಾಸಿಗರಿಗೆ ಕಾಣಲೆಂದು ೩ಡಿ ದೀಪಾಲಂಕಾರವನ್ನು ಸಿದ್ಧಪಡಿಸಿದ್ದೇವೆ. ಇದರಿಂದ ನಗರದಲ್ಲಿ ಕೆಲಹೊತ್ತು ದೀಪಾಲಂಕಾರದಲ್ಲಿ ವ್ಯತ್ಯವಾಗುತ್ತಿದೆ ಎಂದು ತಿಳಿಸಿದರು.

ದೀಪಾಲಂಕಾರ ಉಪ ಸಮಿತಿಯ ಅಧ್ಯಕ್ಷ ಟಿ.ರಮೇಶ್ ಮಾತನಾಡಿ, ದೀಪಾಲಂಕಾರವನ್ನು ಇನ್ನೂ ೫ ದಿನಗಳ ಕಾಲ ವಿಸ್ತರಣೆ ಮಾಡಲು ಸಮಿತಿಯೊಂದಿಗೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಜಿಲ್ಲೆಯ ಪತ್ರಕರ್ತರಿಗೆ ದೀಪಾಲಂಕಾರವನ್ನೂ ವೀಕ್ಷಿಸಿಲು ಸೆಸ್ಕ್ ನಿಂದ ವ್ಯವಸ್ಥೆ ಮಾಡಲಾಗುತ್ತದೆ ಎಂದು ತಿಳಿಸಿದರು.

ಸೆಸ್ಕ್‌ನ ಡಿಟಿ ಮಂಜಪ್ಪ, ದೀಪಾಲಂಕಾರ ಉಪ ಸಮಿತಿ ಉಪಾಧ್ಯಕ್ಷರಾದ ಪುನೀತ್, ಮೇಣು, ಮಾರ್ಗದರ್ಶಕರಾದ ವಿಕ್ರಾಂತ್ ದೇವೇಗೌಡ, ಸೆಸ್ಕ್ ಇಂಜಿನಿಯರ್‌ಹಾಜರಿದ್ದರು.

andolanait

Recent Posts

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

8 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

8 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

8 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

8 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

8 hours ago

ಪಿರಿಯಾಪಟ್ಟಣ: ಗರಿಗೆದರಿದ ತಂಬಾಕು ಕೃಷಿ ಚಟುವಟಿಕೆ

ನವೀನ್‌ಕುಮಾರ್ ತಂಬಾಕು ಹದಗೊಳಿಸುವ ಕಾರ್ಯ ಚುರುಕು; ಉತ್ತಮ ಬೆಲೆ ನಿರೀಕ್ಷೆಯಲ್ಲಿ ರೈತರು ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ತಂಬಾಕು ಕೃಷಿ ಚಟುವಟಿಕೆಗಳು ಗರಿಗೆದರಿವೆ.…

8 hours ago