ಜಿಲ್ಲೆಗಳು

ದೀಪದ ಬೆಳಕಿನಲ್ಲಿ ದಸರಾ ಆನೆಗಳ ದರ್ಬಾರ್

ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ ಆರಂಭವಾಗಿದೆ. ಆನೆಗಳಿಗೆ ತರಬೇತಿ ನೀಡುವ ಸಲುವಾಗಿೆುೀಂ ಜಂಬೂ ಸವಾರಿ ಹೊರಡುವ ಮಾರ್ಗದಲ್ಲಿ ನವರಾತ್ರಿಗೆ ಮೂರು ದಿನ ಮುನ್ನವೇ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ರಾತ್ರಿ ದೀಪದ ಬೆಳಕಿಗೂ ಜಗ್ಗದೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ರಾಜಮಾರ್ಗದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿಯನ್ನು ಹೊರಿಸಲಾಗಿತ್ತು.
ಈ ಬಾರಿ ಅಂಬಾರಿಗೆ ಅ.೫ರಂದು ಸಂಜೆ ೫.೪೦ಕ್ಕೆ ಪುಷ್ಪಾರ್ಚನೆಗೆ ಸಮಯ ನಿಗದಿಪಡಿಸಿದ ಕಾರಣ ಜಂಬೂ ಸವಾರಿ ಬನ್ನಿಮಂಟಪ ತಲುಪಲು ರಾತ್ರಿಯಾಗಲಿದೆ. ಮೆರವಣಿಗೆ ದೀಪಾಲಂಕಾರದ ನಡುವೆ ಸಾಗುವ ಅನಿವಾರ್ಯತೆ ಇರುವ ಕಾರಣದಿಂದ ಗಜಪಡೆ ಅದಕ್ಕೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅರಣ್ಯ ಇಲಾಖೆ ನವರಾತ್ರಿ ಆರಂಭವಾಗುವ ಮೂರು ದಿನ ಮೊದಲೇ ದೀಪಾಲಂಕಾರದ ವ್ಯಸ್ಥೆ ಮಾಡುವಂತೆ ಕೋರಿತ್ತು.
ಅರಣ್ಯ ಇಲಾಖೆಯ ಮನವಿಗೆ ಸ್ಪಂದಿಸಿದ ಸೆಸ್ಕ್ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಅರಮನೆ ದ್ವಾರದಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್‌ಎಂಸಿ ವೃತ್ತ ಜಂಬೂ ಬಜಾರ್, ಹೈವೇ ವೃತ್ತದ ಮೂಲಕ ಬನ್ನಿ ಮಂಟಪದ ಕವಾಯತು ಮೈದಾನದವರೆಗೆ ಐದು ಕಿಮೀ ರಸ್ತೆಗೆ ಶುಕ್ರವಾರ ಸಂಜೆಯಿಂದಲೇ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ೭ ಗಂಟೆಗೆ ದೀಪ ಝಗಮಗಿಸಿದ್ದು, ಈ ಬೆಳಕಿನಲ್ಲಿ ಗಜಪಡೆಗಳು ತಾಲೀಮು ನಡೆಸಿದವು.

andolanait

Recent Posts

ಮುಡಾ ಮಾಜಿ ಆಯುಕ್ತ ದಿನೇಶ್‌ ಕುಮಾರ್‌ ಲೋಕಾ ಪೊಲೀಸ್‌ ಕಸ್ಟಡಿಗೆ : ಕೋರ್ಟ್‌ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (ಮುಡಾ) ನಡೆದಿದೆ ಎನ್ನಲಾದ ಹಗರಣದ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಮಾಜಿ ಆಯುಕ್ತ ದಿನೇಶ್‌…

4 hours ago

ಅನಾರೋಗ್ಯ ಹಿನ್ನಲೆ ದುಬಾರೆ ಸಾಕಾನೆ ʻತಕ್ಷʼ ಸಾವು

ಮಡಿಕೇರಿ : ದುಬಾರೆ ಶಿಬಿರದ ಸಾಕಾನೆ ತಕ್ಷ ಅನಾರೋಗ್ಯದಿಂದ ಸೋಮವಾರ ರಾತ್ರಿ ಮೃತಪಟ್ಟಿದೆ. ಡಿ.೮ರಂದು ರಾತ್ರಿ ೯.೩೦ರ ಸಮಯದಲ್ಲಿ ತಕ್ಷ…

6 hours ago

ಮೈಸೂರು | ಕ್ಷುಲ್ಲಕ ಕಾರಣಕ್ಕೆ ಸ್ನೇಹಿತನಿಗೇ ಚಾಕು ಇರಿತ

ಮೈಸೂರು : ಕೇಳಿದ ತಕ್ಷಣ ಹಣ ಕೊಡಲಿಲ್ಲ ಎಂಬ ಕಾರಣಕ್ಕಾಗಿ ಸ್ನೇಹಿತನ ಮೇಲೆ ಯುವಕನೊಬ್ಬ ಚಾಕುವಿನಿಂದ ಇರಿದಿರುವ ಘಟನೆ ನಗರದಲ್ಲಿ…

7 hours ago

ಮಹಿಳಾ ಉದ್ಯೋಗಿಗೆ ಕಿರುಕುಳ : ಕಾರ್ಖಾನೆ ಮಾಲೀಕನ ವಿರುದ್ದ ದೂರು

ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ…

8 hours ago

ಚಾಮುಂಡೇಶ್ವರಿ ದರ್ಶನ : ಸೇವಾ ಶುಲ್ಕ ಏರಿಕೆಗೆ ಖಂಡನೆ

ಮೈಸೂರು : ಚಾಮುಂಡಿಬೆಟ್ಟದ ಶ್ರೀ ಚಾಮುಂಡೇಶ್ವರಿ ದೇವಾಲಯದಲ್ಲಿ ದೇವಿಯ ದರ್ಶನ ಹಾಗೂ ಸಮೂಹ ದೇವಾಲಯಗಳ ಸೇವೆಗಳ ಶುಲ್ಕಗಳನ್ನು ಏರಿಸಿರುವ ರಾಜ್ಯ…

8 hours ago

ಮೂರು ತಿಂಗಳಲ್ಲಿ ಪಿಎಸ್‌ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್‌

ಬೆಳಗಾವಿ : ರಾಜ್ಯದಲ್ಲಿ 545 ಪಿಎಸ್‌ಐ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಈಗಾಗಲೇ ಅಭ್ಯರ್ಥಿಗಳಿಗೆ ತರಬೇತಿ ನೀಡಲಾಗುತ್ತಿದೆ. ಮೂರು ತಿಂಗಳ…

8 hours ago