ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ ಆರಂಭವಾಗಿದೆ. ಆನೆಗಳಿಗೆ ತರಬೇತಿ ನೀಡುವ ಸಲುವಾಗಿೆುೀಂ ಜಂಬೂ ಸವಾರಿ ಹೊರಡುವ ಮಾರ್ಗದಲ್ಲಿ ನವರಾತ್ರಿಗೆ ಮೂರು ದಿನ ಮುನ್ನವೇ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ರಾತ್ರಿ ದೀಪದ ಬೆಳಕಿಗೂ ಜಗ್ಗದೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ರಾಜಮಾರ್ಗದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿಯನ್ನು ಹೊರಿಸಲಾಗಿತ್ತು.
ಅರಣ್ಯ ಇಲಾಖೆಯ ಮನವಿಗೆ ಸ್ಪಂದಿಸಿದ ಸೆಸ್ಕ್ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಅರಮನೆ ದ್ವಾರದಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್ಎಂಸಿ ವೃತ್ತ ಜಂಬೂ ಬಜಾರ್, ಹೈವೇ ವೃತ್ತದ ಮೂಲಕ ಬನ್ನಿ ಮಂಟಪದ ಕವಾಯತು ಮೈದಾನದವರೆಗೆ ಐದು ಕಿಮೀ ರಸ್ತೆಗೆ ಶುಕ್ರವಾರ ಸಂಜೆಯಿಂದಲೇ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ೭ ಗಂಟೆಗೆ ದೀಪ ಝಗಮಗಿಸಿದ್ದು, ಈ ಬೆಳಕಿನಲ್ಲಿ ಗಜಪಡೆಗಳು ತಾಲೀಮು ನಡೆಸಿದವು.
ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…
ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…
ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…
ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್ವಾಶ್ ಮಾಡಲಾಗಿದೆ ಎಂಬ…
ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…
ಜಾರಿ ನಿರ್ದೇಶನಾಲಯದ ದಾಳಿಗೆ ರಾಜಕೀಯ ಕಾರಣವಲ್ಲ, 3-4 ಸಾವಿರ ಕೋಟಿ ರೂ. ಅಕ್ರಮ ನಡೆದಿದೆ ಎಂದು ಹೇಳಿದ್ದೇ ಕಾಂಗ್ರೆಸ್ನವರು: ಪ್ರತಿಪಕ್ಷ…