ಜಿಲ್ಲೆಗಳು

ದೀಪದ ಬೆಳಕಿನಲ್ಲಿ ದಸರಾ ಆನೆಗಳ ದರ್ಬಾರ್

ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ ಆರಂಭವಾಗಿದೆ. ಆನೆಗಳಿಗೆ ತರಬೇತಿ ನೀಡುವ ಸಲುವಾಗಿೆುೀಂ ಜಂಬೂ ಸವಾರಿ ಹೊರಡುವ ಮಾರ್ಗದಲ್ಲಿ ನವರಾತ್ರಿಗೆ ಮೂರು ದಿನ ಮುನ್ನವೇ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ರಾತ್ರಿ ದೀಪದ ಬೆಳಕಿಗೂ ಜಗ್ಗದೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ರಾಜಮಾರ್ಗದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿಯನ್ನು ಹೊರಿಸಲಾಗಿತ್ತು.
ಈ ಬಾರಿ ಅಂಬಾರಿಗೆ ಅ.೫ರಂದು ಸಂಜೆ ೫.೪೦ಕ್ಕೆ ಪುಷ್ಪಾರ್ಚನೆಗೆ ಸಮಯ ನಿಗದಿಪಡಿಸಿದ ಕಾರಣ ಜಂಬೂ ಸವಾರಿ ಬನ್ನಿಮಂಟಪ ತಲುಪಲು ರಾತ್ರಿಯಾಗಲಿದೆ. ಮೆರವಣಿಗೆ ದೀಪಾಲಂಕಾರದ ನಡುವೆ ಸಾಗುವ ಅನಿವಾರ್ಯತೆ ಇರುವ ಕಾರಣದಿಂದ ಗಜಪಡೆ ಅದಕ್ಕೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅರಣ್ಯ ಇಲಾಖೆ ನವರಾತ್ರಿ ಆರಂಭವಾಗುವ ಮೂರು ದಿನ ಮೊದಲೇ ದೀಪಾಲಂಕಾರದ ವ್ಯಸ್ಥೆ ಮಾಡುವಂತೆ ಕೋರಿತ್ತು.
ಅರಣ್ಯ ಇಲಾಖೆಯ ಮನವಿಗೆ ಸ್ಪಂದಿಸಿದ ಸೆಸ್ಕ್ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಅರಮನೆ ದ್ವಾರದಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್‌ಎಂಸಿ ವೃತ್ತ ಜಂಬೂ ಬಜಾರ್, ಹೈವೇ ವೃತ್ತದ ಮೂಲಕ ಬನ್ನಿ ಮಂಟಪದ ಕವಾಯತು ಮೈದಾನದವರೆಗೆ ಐದು ಕಿಮೀ ರಸ್ತೆಗೆ ಶುಕ್ರವಾರ ಸಂಜೆಯಿಂದಲೇ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ೭ ಗಂಟೆಗೆ ದೀಪ ಝಗಮಗಿಸಿದ್ದು, ಈ ಬೆಳಕಿನಲ್ಲಿ ಗಜಪಡೆಗಳು ತಾಲೀಮು ನಡೆಸಿದವು.

andolanait

Recent Posts

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ…

33 mins ago

‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ ಹೆಜ್ಜೆ : ಪೋಸ್ಟರ್ ಬಿಡುಗಡೆ ಮಾಡಿದ ಗೃಹ ಸಚಿವ

ಮೈಸೂರು : ಡ್ರಗ್ಸ್ ಮುಕ್ತ ಮೈಸೂರು ಮಾಡಲು ಮುಂದಾಗಿರುವ ಮೈಸೂರು ನಗರ ಪೊಲೀಸರು ‘ವಿಮುಕ್ತಿ’ ಮಾದಕ ವಸ್ತು ಮುಕ್ತ ಮೈಸೂರಿನತ್ತ…

1 hour ago

ರಂಗನತಿಟ್ಟು ಬಳಿ NH-275 ಹೆದ್ದಾರಿ : ವನ್ಯಜೀವಿ ಸುರಕ್ಷತೆಗೆ ನಿರ್ದೇಶನ

ಮಂಡ್ಯ : ಮೈಸೂರು ಬೈಪಾಸ್ ಮಾಡುವ ಗುರಿಯನ್ನು ಹೊಂದಿರುವ ಎನ್‌ಎಚ್ 275ರ ವಿಸ್ತೃತ ಮಾರ್ಗವಾದ ಬೆಂಗಳೂರು-ಕುಶಾಲನಗರ ಹೆದ್ದಾರಿಯು ರಂಗನತಿಟ್ಟು ಪಕ್ಷಿಧಾಮದ…

1 hour ago

ಕಿಡಿಗೇಡಿಗಳಿಂದ ಬೆಂಕಿ : ಐದಾರು ಎಕರೆ ಭೂ ಪ್ರದೇಶಕ್ಕೆ ಹಾನಿ

ಹಲಗೂರು : ಪ್ರತ್ಯೇಕ ಎರಡು ಕಡೆಗಳಲ್ಲಿ ಆಕಸ್ಮಿಕವಾಗಿ ಬೆಂಕಿ ಬಿದ್ದು ಐದಾರು ಎಕರೆ ಭೂ ಪ್ರದೇಶದಲ್ಲಿ ಸಣ್ಣಪುಟ್ಟ ಗಿಡಗಳು ಸುಟ್ಟು…

2 hours ago

ಮೈಸೂರು ಮೃಗಾಲಯದ ಜೀಬ್ರಾ ʼಪ್ರಾಚಿʼ ಸಾವು

ಮೈಸೂರು : ಶ್ರೀ  ಚಾಮರಾಜೇಂದ್ರ ಮೃಗಾಲಯದ ಹೆಣ್ಣು ಜೀಬ್ರಾ ‘ಪ್ರಾಚಿ’ ಅನಾರೋಗ್ಯದಿಂದ ಶನಿವಾರ ಬೆಳಿಗ್ಗೆ 11ರ ಸುಮಾರಿಗೆ ಸಾವನ್ನಪ್ಪಿದೆ. ಅದಕ್ಕೆ…

2 hours ago

ಭಾರತ-ಯುಎಸ್ ವ್ಯಾಪಾರ ಒಪ್ಪಂದ ಅಧಿಕೃತ ; ಶೇ.18ಕ್ಕೆ ಸುಂಕ ಇಳಿಕೆ

ವಾಷಿಂಗ್ಟನ್ : ಭಾರತ ಮತ್ತು ಅಮೆರಿಕ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಚೌಕಟ್ಟನ್ನು ತಲುಪಿವೆ ಎಂದು ಘೋಷಿಸಿವೆ. ಇದರ ಅಡಿಯಲ್ಲಿ ಭಾರತ…

3 hours ago