ಜಿಲ್ಲೆಗಳು

ದೀಪದ ಬೆಳಕಿನಲ್ಲಿ ದಸರಾ ಆನೆಗಳ ದರ್ಬಾರ್

ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು

ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ ಆರಂಭವಾಗಿದೆ. ಆನೆಗಳಿಗೆ ತರಬೇತಿ ನೀಡುವ ಸಲುವಾಗಿೆುೀಂ ಜಂಬೂ ಸವಾರಿ ಹೊರಡುವ ಮಾರ್ಗದಲ್ಲಿ ನವರಾತ್ರಿಗೆ ಮೂರು ದಿನ ಮುನ್ನವೇ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ರಾತ್ರಿ ದೀಪದ ಬೆಳಕಿಗೂ ಜಗ್ಗದೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ರಾಜಮಾರ್ಗದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿಯನ್ನು ಹೊರಿಸಲಾಗಿತ್ತು.
ಈ ಬಾರಿ ಅಂಬಾರಿಗೆ ಅ.೫ರಂದು ಸಂಜೆ ೫.೪೦ಕ್ಕೆ ಪುಷ್ಪಾರ್ಚನೆಗೆ ಸಮಯ ನಿಗದಿಪಡಿಸಿದ ಕಾರಣ ಜಂಬೂ ಸವಾರಿ ಬನ್ನಿಮಂಟಪ ತಲುಪಲು ರಾತ್ರಿಯಾಗಲಿದೆ. ಮೆರವಣಿಗೆ ದೀಪಾಲಂಕಾರದ ನಡುವೆ ಸಾಗುವ ಅನಿವಾರ್ಯತೆ ಇರುವ ಕಾರಣದಿಂದ ಗಜಪಡೆ ಅದಕ್ಕೆ ಹೊಂದಿಕೊಳ್ಳಲು ಅನುಕೂಲವಾಗುವಂತೆ ಅರಣ್ಯ ಇಲಾಖೆ ನವರಾತ್ರಿ ಆರಂಭವಾಗುವ ಮೂರು ದಿನ ಮೊದಲೇ ದೀಪಾಲಂಕಾರದ ವ್ಯಸ್ಥೆ ಮಾಡುವಂತೆ ಕೋರಿತ್ತು.
ಅರಣ್ಯ ಇಲಾಖೆಯ ಮನವಿಗೆ ಸ್ಪಂದಿಸಿದ ಸೆಸ್ಕ್ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಅರಮನೆ ದ್ವಾರದಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್‌ಎಂಸಿ ವೃತ್ತ ಜಂಬೂ ಬಜಾರ್, ಹೈವೇ ವೃತ್ತದ ಮೂಲಕ ಬನ್ನಿ ಮಂಟಪದ ಕವಾಯತು ಮೈದಾನದವರೆಗೆ ಐದು ಕಿಮೀ ರಸ್ತೆಗೆ ಶುಕ್ರವಾರ ಸಂಜೆಯಿಂದಲೇ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ೭ ಗಂಟೆಗೆ ದೀಪ ಝಗಮಗಿಸಿದ್ದು, ಈ ಬೆಳಕಿನಲ್ಲಿ ಗಜಪಡೆಗಳು ತಾಲೀಮು ನಡೆಸಿದವು.

andolanait

Recent Posts

ಮೈಸೂರು | ಮಳೆ ಅನಾಹುತ ಎದುರಿಸಲು ಚೆಸ್ಕಾಂ ಸನ್ನದ್ಧ

ಮೈಸೂರು : ಮಳೆಯ ಅನಾಹುತಗಳನ್ನು ಸಮರ್ಥವಾಗಿ ಎದುರಿಸಲು ಚೆಸ್ಕಾಂ ಕೂಡ ಸಿದ್ಧತೆ ಮಾಡಕೊಂಡಿದೆ. ಮೈಸೂರು ನಗರದ ಎಂಟು ಸಬ್ ಡಿವಿಸನ್‌ನಲ್ಲಿ…

3 hours ago

ಮತ್ತೆ ಗ್ರಾಹಕರಿಗೆ ಶಾಕ್ ; ಪೆಟ್ರೋಲ್, ಡೀಸೆಲ್ ದರ 95 ಪೈಸೆ ಹೆಚ್ಚಳ

ಹೊಸದಿಲ್ಲಿ : ಇರಾನ್ ಮೇಲಿನ ಯುದ್ಧದ ನಡುವೆಯೇ ಇಂಧನ ದರಗಳನ್ನು ಒಂದು ವಾರಕ್ಕೂ ಕಡಿಮೆ ಅವಧಿಯಲ್ಲಿ ಎರಡನೇ ಬಾರಿ ಕೇಂದ್ರ…

4 hours ago

2008ರಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ : ಡಿ.ಕೆ.ಶಿವಕುಮಾರ್‌

ಸಾರ್ಥಕ ಸೇವೆಯ ಸಮರ್ಪಣೆ ಸಮಾವೇಶದಲ್ಲಿ ಡಿಸಿಎಂ ವಿಶ್ವಾಸ ತುಮಕೂರು: 2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ.…

4 hours ago

ಹಕ್ಕು ಪತ್ರ ವಿತರಣೆಯಲ್ಲಿ ದಾಖಲೆ ನಿರ್ಮಾಣ ಮಾಡಿದ ಕಂದಾಯ ಇಲಾಖೆ

ತುಮಕೂರು : ರಾಜ್ಯ ಸರ್ಕಾರದ ಮೂರು ವರ್ಷಗಳ ಸಾಧನೆ-ಸಾರ್ಥಕ ಸೇವೆಗಳ ಸಮರ್ಪಣಾ ಸಮಾವೇಶದಲ್ಲಿ ಏಕಕಾಲಕ್ಕೆ ಕಂದಾಯ ಇಲಾಖೆಯಿಂದ ಅತ್ಯಧಿಕ ಹಕ್ಕು…

4 hours ago

ಸಂಶೋಧನೆಗೆ ಸಂಕಟ | ಶಿಷ್ಯವೇತನಕ್ಕೆ ಆಗ್ರಹಿಸಿ ಮೈ.ವಿ.ವಿ ಸಂಶೋಧಕರ ಪ್ರತಿಭಟನೆ

ಮೈಸೂರು : ಮೈಸೂರು ವಿಶ್ವವಿದ್ಯಾನಿಲಯದ ವ್ಯಾಪ್ತಿಯ ಸಂಶೋಧಕರುಗಳಿಗೆ ಶಿಷ್ಯವೇತನ ನೀಡಬೇಕೆಂದು ಒತ್ತಾಯಿಸಿ ಶಿಷ್ಯವೇತನರಹಿತ ಸಂಶೋಧಕರ ಬಳಗದ ವತಿಯಿಂದ ಮೈಸೂರು ವಿ.ವಿ…

4 hours ago

ಪ್ರಶ್ನೆ ಪತ್ರಿಕೆ ಸೋರಿಕೆ | ನೀಟ್‌ ರದ್ದು, ವಿದ್ಯಾರ್ಥಿಗಳ ಆತಹತ್ಯೆಗೆ ಮೋದಿ ಕಾರಣ ; ಸಿಎಂ ಆರೋಪ

ತುಮಕೂರು : ನೀಟ್ ಪರೀಕ್ಷೆ ರದ್ದಾಗಿ 22 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಜೊತೆ ಚೆಲ್ಲಾಟ ಆಡಿ, ಹಲವು ವಿದ್ಯಾರ್ಥಿಗಳ ಆತಹತ್ಯೆಗೆ…

4 hours ago