ಗಜಪಡೆಗೆ ದೀಪಾಲಂಕಾರದಲ್ಲಿ ಹೆಜ್ಜೆ ಹಾಕಲು ತಾಲೀಮು
ಮೈಸೂರು: ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ಜಂಬೂ ಸವಾರಿಗೆ ದಿನಗಣನೆ ಆರಂಭವಾಗಿದೆ. ಈ ಬಾರಿ ಜಂಬೂ ಸವಾರಿಗೆ ಸಂಜೆ ೫.೪೦ಕ್ಕೆ ಚಾಲನೆ ನೀಡಲಾಗುತ್ತದೆ. ಈ ಹಿನ್ನೆಲೆಯಲ್ಲಿ ದೀಪಾಲಂಕಾರದಲ್ಲಿ ಗಜಪಡೆಗಳು ಹೆಜ್ಜೆ ಹಾಕಲು ಶುಕ್ರವಾರದಿಂದ ತರಬೇತಿ ಆರಂಭವಾಗಿದೆ. ಆನೆಗಳಿಗೆ ತರಬೇತಿ ನೀಡುವ ಸಲುವಾಗಿೆುೀಂ ಜಂಬೂ ಸವಾರಿ ಹೊರಡುವ ಮಾರ್ಗದಲ್ಲಿ ನವರಾತ್ರಿಗೆ ಮೂರು ದಿನ ಮುನ್ನವೇ ದೀಪಾಲಂಕಾರದ ವ್ಯವಸ್ಥೆ ಮಾಡಲಾಗಿದ್ದು, ಶುಕ್ರವಾರ ರಾತ್ರಿ ದೀಪದ ಬೆಳಕಿಗೂ ಜಗ್ಗದೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆ ರಾಜಮಾರ್ಗದಲ್ಲಿ ಗಾಂಭೀರ್ಯದಿಂದ ಹೆಜ್ಜೆ ಹಾಕಿದವು. ಗೋಪಾಲಸ್ವಾಮಿ ಆನೆಗೆ ಮರದ ಅಂಬಾರಿಯನ್ನು ಹೊರಿಸಲಾಗಿತ್ತು.
ಅರಣ್ಯ ಇಲಾಖೆಯ ಮನವಿಗೆ ಸ್ಪಂದಿಸಿದ ಸೆಸ್ಕ್ ಜಿಲ್ಲಾಡಳಿತದ ಸೂಚನೆಯ ಮೇರೆಗೆ ಅರಮನೆ ದ್ವಾರದಿಂದ ಕೆ.ಆರ್.ವೃತ್ತ, ಸಯ್ಯಾಜಿರಾವ್ ರಸ್ತೆ, ಆಯುರ್ವೇದ ವೃತ್ತ, ಆರ್ಎಂಸಿ ವೃತ್ತ ಜಂಬೂ ಬಜಾರ್, ಹೈವೇ ವೃತ್ತದ ಮೂಲಕ ಬನ್ನಿ ಮಂಟಪದ ಕವಾಯತು ಮೈದಾನದವರೆಗೆ ಐದು ಕಿಮೀ ರಸ್ತೆಗೆ ಶುಕ್ರವಾರ ಸಂಜೆಯಿಂದಲೇ ದೀಪಾಲಂಕಾರ ಮಾಡಲಾಗಿತ್ತು. ಸಂಜೆ ೭ ಗಂಟೆಗೆ ದೀಪ ಝಗಮಗಿಸಿದ್ದು, ಈ ಬೆಳಕಿನಲ್ಲಿ ಗಜಪಡೆಗಳು ತಾಲೀಮು ನಡೆಸಿದವು.
ಬಿಡದಿ : ಬಿಡದಿ ಟೌನ್ಶಿಪ್ ವಿಚಾರದಲ್ಲಿ ಗದ್ದಲ–ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು…
ಬೆಂಗಳೂರು: ತಮ್ಮ ಪುತ್ರಿಗಾಗಿ ಅಧಿಕಾರದ ದುರುಪಯೋಗಪಡಿಸಿಕೊಂಡು ನಕಲಿ ಜಾತಿ ಪ್ರಮಾಣ ಸಲ್ಲಿಸಿದ ಆರೋಪದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗ( ಕೆಪಿಎಸ್…
ನವದೆಹಲಿ: ಜೆಡಿಎಸ್ ನಾಯಕ ಹಾಗೂ ಮಾಜಿ ಸಚಿವ ಎಚ್.ಡಿ. ರೇವಣ್ಣ ಅವರಿಗೆ ಮತ್ತೊಮ್ಮೆ ಕಾನೂನು ಸಂಕಷ್ಟ ಎದುರಾಗಿದ್ದು, ಸುಪ್ರೀಂಕೋರ್ಟ್ನಿಂದ ನೋಟಿಸ್…
ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…
ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…
ಸಿ.ಎಂ.ನರಸಿಂಹಮೂರ್ತಿ ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…