ಜಿಲ್ಲೆಗಳು

ಡಿಸೆಂಬರ್ ಮೊದಲ ವಾರದೊಳಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ: ಸಿದ್ದರಾಮಯ್ಯ

ಮೈಸೂರು: ನವೆಂಬರ್ ಅಂತ್ಯ ಅಥವಾ ಡಿಸೆಂಬರ್ ಮೊದಲ ವಾರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲನೇ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ಮೈಸೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿ, ಬಿಜೆಪಿ ನೇತೃತ್ವದ ರಾಜ್ಯಸರ್ಕಾರದ ದುರಾಡಳಿತ,ಭ್ರಷ್ಟಾಚಾರ,ವೈಫಲ್ಯಗಳನ್ನು ಜನರ ಮುಂದೆ ಇಡಲು ಡಿ.ಕೆ.ಶಿವಕುಮಾರ್ ಮತ್ತು ನನ್ನ ನೇತೃತ್ವದಲ್ಲಿ ಎರಡು ತಂಡದಲ್ಲಿ ರಾಜ್ಯದಾದ್ಯಂತ ಪ್ರವಾಸ ಆರಂಭಿಸಲಾಗುವುದು. ಯಾತ್ರೆ ಆರಂಭವಾಗುವ ಕುರಿತು ದಿನಾಂಕ ನಿಗದಿಯಾಗಿಲ್ಲ ಎಂದು ತಿಳಿಸಿದರು. ಯಾತ್ರೆಗೆ ಸಿದ್ಧಪಡಿಸುತ್ತಿರುವ ಬಸ್‌ನ ಕೆಲಸ ಮುಗಿದಿಲ್ಲ. ಪ್ರಾಯೋಗಿಕವಾಗಿ ನೋಡೋಣವೆಂದು ಕೋಲಾರಕ್ಕೆ ಹೋಗಿ ಬಂದಿದ್ದೇವು. ಯಾವಾಗ ಯಾತ್ರೆ ಪ್ರಾರಂಭವಾಗಲಿದೆ ಎನ್ನುವುದು ಹೇಳುತ್ತೇವೆ.ರಾಹುಕಾಲ,ಗುಳಿಕಾಲ ಎಂಬುದು ಇಲ್ಲ. ಎಲ್ಲ ದಿನಗಳು ಉತ್ತಮವಾಗಿದೆ ಎಂದು ನುಡಿದರು. ಕಾಂಗ್ರೆಸ್ ಪರವಾಗಿ ರಾಜ್ಯದಲ್ಲಿ ಅಲೆ ಉಂಟಾಗಿದೆ. ಚುನಾವಣೆಗೂ ಮುನ್ನ ಅಭ್ಯರ್ಥಿಗಳ ಹೆಸರನ್ನು ಅಂತಿಮಗೊಳಿಸಿ ಡಿಸೆಂಬರ್ ಮೊದಲ ವಾರದೊಳಗೆ ಪ್ರಕಟಿಸುತ್ತೇವೆ ಎಂದರು.

ಬಲವಂತ ಮತಾಂತರಕ್ಕೆ ವಿರೋಧ: ಬಲವಂತದ ಮತಾಂತರ,ಆಮಿಷವೊಡ್ಡಿ ಮತಾಂತರ ಮಾಡುವುದಕ್ಕೆ ನಮ್ಮದೂ ವಿರೋಧವಿದೆ. ಯಾವುದೇ ವ್ಯಕ್ತಿ ಸ್ವಯಂಪ್ರೇರಣೆಯಿಂದ ಯಾವ ಧರ್ಮವನ್ನಾದರೂ ಅನುಸರಿಸಬಹುದು.ಆದರೆ,ಬಲವಂತವಾಗಿ ಮತಾಂತರ ಮಾಡಬಾರದು. ಸುಪ್ರೀಂಕೋರ್ಟ್ ಹೇಳಿರುವುದನ್ನು ನಾನೂ ಹೇಳಿದ್ದೇನೆ ಎಂದು ತಿಳಿಸಿದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಸೇರಿ ಯಾರ್ಯಾರೋ ಕೊಡುವ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಲ್ಲ. ಜನರ ಸಮಸ್ಯೆಗಳ ಬಗ್ಗೆ ಏನಾದರೂ ಇದ್ದರೆ ಪ್ರಶ್ನೆಗಳನ್ನು ಕೇಳಬಹುದು. ಬೇರೆಯವರ ಮಾತಿಗೆ ಉತ್ತರ ಕೊಡುವ ಅಗತ್ಯವಿಲ್ಲ ಎಂದು ಕಿಡಿಕಾರಿದರು. ಚುನಾವಣೆಯಲ್ಲಿ ಎಂಟು ಬಾರಿ ಜಯಗಳಿಸಿದ್ದೇನೆ. ಸೋಲು-ಗೆಲುವನ್ನು ತೀರ್ಮಾನ ಮಾಡುವುದು ಮತದಾರರು ಹೊರತು ನಾಯಕರಲ್ಲ ಎಂದು ತಿರುಗೇಟು ನೀಡಿದರು. ಪಿಎಸ್‌ಐ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ. ಬಿಜೆಪಿಯವರು ಮೂರು ವರ್ಷಗಳ ಕಾಲ ಸುಮ್ಮನಿದ್ದು ಈಗ ನಮ್ಮ ಅವಧಿಯಲ್ಲೂ ಆಗಿತ್ತೆಂದು ಹೇಳುತ್ತಾರೆ. ನಮ್ಮ ಕಾಲದಲ್ಲೂ ಆಗಿದ್ದರೆ ಅದನ್ನು ಸೇರಿಸಿ ತನಿಖೆ ಮಾಡಿಸಲು ಅಭ್ಯಂತರವಿಲ್ಲ ಎಂದರು. ಜಿಪಂ ಮಾಜಿ ಅಧ್ಯಕ್ಷ ಕೆ.ಮರೀಗೌಡ, ಮುಖಂಡರಾದ ಡಿ.ರವಿಶಂಕರ್, ಕೃಷ್ಣಕುಮಾರ್ ಸಾಗರ್,ಕೋಟೆಹುಂಡಿ ಮಹದೇವು,ಟಿ.ಬಿ.ಚಿಕ್ಕಣ್ಣ, ಕೆ.ಹರೀಶ್‌ಗೌಡ ಮೊದಲಾದವರು ಹಾಜರಿದ್ದರು.

andolana

Recent Posts

ಮೇಕೆದಾಟು ಯೋಜನೆಗೆ ಶೀಘ್ರದಲ್ಲೇ ಕೇಂದ್ರದಿಂದ ಅನುಮತಿ ಸಿಗುವ ಸಾಧ್ಯತೆ: ಸಚಿವ ರಾಮಲಿಂಗಾರೆಡ್ಡಿ

ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…

5 hours ago

ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ ಮುನ್ಸೂಚನೆ

ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…

5 hours ago

ಅಪ್ರಾಪ್ತರನ್ನು ಬಿಡುಗಡೆ ಮಾಡಿ, ಕ್ರಿಮಿನಲ್‌ಗಳ ವಿರುದ್ಧ ತನಿಖೆ ನಡೆಸಿ: ಸುಪ್ರೀಂಕೋರ್ಟ್‌

ನವದೆಹಲಿ: ಜಂತರ್‌ ಮಂತರ್‌ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…

5 hours ago

ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ಸ್‌ ನೀರು ಬಿಡಲು CWRC ಆದೇಶ: ಮಂಡ್ಯದಲ್ಲಿ ಭುಗಿಲೆದ್ದ ಆಕ್ರೋಶ

ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್‌ನಂತೆ 15…

6 hours ago

ಓದುಗರ ಪತ್ರ: ಭ್ರಷ್ಟಾಚಾರ ಬಗ್ಗು ಬಡಿಯಲು ಸಿಎಂ ಮುಂದಾಗುವರೇ?

ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…

15 hours ago

ಓದುಗರ ಪತ್ರ: ಸದ್ದು ಮಾಡದ ತುಪ್ಪ, ಬೆಣ್ಣೆ ಬೆಲೆ ಏರಿಕೆ!

ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…

16 hours ago