ಜಿಲ್ಲೆಗಳು

ಹುಲಿಮರಿಗಳ ಭೀತಿ; ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಲು ಸೂಚನೆ

ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು ಹುಲಿ ಮರಿಗಳ ಪೈಕಿ ಒಂದು ಗಂಡು ಹುಲಿ ಮರಿ ಮೃತಪಟ್ಟಿದ್ದು ಇನ್ನೆರಡು ಹುಲಿಗಳು ಕಾಡಿನಲ್ಲಿಯೇ ಪತ್ತೆಯಾಗಿದ್ದವು.
ಕಳೆದ ಎರಡು ದಿನಗಳಿಂದ ಹುಲಿಮರಿಗಳು ಕಾಡಿನಿಂದ ಹೊರ ಬಂದಿದ್ದು ಕಾಡಿನಲ್ಲಿ ಕಾಣಿಸಿಲ್ಲ, ಹೀಗಾಗಿ ಸಾರ್ವಜನಿಕರು ಎಚ್ಚರವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಲ್ಲೂಕಿನ ತಾರಕ, ಸತ್ತಿಗೆ ಹುಂಡಿ, ಹುಣಸೆಕುಪ್ಪೆ, ಪೆಂಜಹಳ್ಳಿ, ಕೊತ್ತನಹಳ್ಳಿ, ಹಿರೇಹಳ್ಳಿ, ಅಂಕನಾಥಪುರ, ವಾಚನಾಯಕನಹಳ್ಳಿ, ನಾಗನಹಳ್ಳಿ, ಶೀರನಹುಂಡಿ, ಅಂತರಸಂತೆ,ತಾರಕ ನಾಲೆ ಹಾಗೂ ತಾರಕ ನದಿಯ ಅಕ್ಕ-ಪಕ್ಕದ ಜಮೀನುಗಳಲ್ಲಿ, ಮರಿ ಹುಲಿಗಳೆರಡು ಓಡಾಡುತ್ತಿರುವ ಸಂಶಯವಿರುವುದರಿಂದ ಸಾರ್ವಜನಿಕರು ಜಮೀನುಗಳಿಗೆ ನೀರು ಹಾಯಿಸಲು ಮತ್ತು ಇತರೆ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ರಾತ್ರಿ ಸಮಯದಲ್ಲಿ ಹಾಗೂ ಬೆಳಗಿನ ಜಾವದಲ್ಲಿ ಏಕಾಂಗಿಯಾಗಿ ತೆರಳದೇ ಜಾಗರೂಕತೆ ವಹಿಸುವುದು ಹಾಗೂ ದನ ಜಾನುವಾರುಗಳನ್ನು ತಾರಕ ನದಿಯ  ಇಕ್ಕೆಲಗಳಲ್ಲಿ ಕಟ್ಟಿಹಾಕಿ ಮೇಯಿಸದೆ ಮುತುವರ್ಜಿ ವಹಿಸಬೇಕೆಂದು ಮತ್ತು ಮರಿ ಹುಲಿಯ ಚಲನವಲಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.

andolanait

Recent Posts

ನಾಳೆ ಎರಡೂವರೆ ಗಂಟೆ ಪ್ರವಾಸಿಗರಿಗಿಲ್ಲ ತಾಜ್‌ ಮಹಲ್‌ ಪ್ರವೇಶ: ಕಾರಣ ಏನ್‌ ಗೊತ್ತಾ.?

ಉತ್ತರ ಪ್ರದೇಶ: ಫೆಬ್ರವರಿ.10ರಂದು ಎರಡೂವರೆ ಗಂಟೆಗಳ ಕಾಲ ಪ್ರವಾಸಿಗರಿಗೆ ತಾಜ್‌ಮಹಲ್‌ ಪ್ರವೇಶ ನಿಷೇಧಿಸಲಾಗಿದೆ. ಭಾರತೀಯ ಪುರಾತತ್ವ ಸಮೀಕ್ಷೆ ಪ್ರಕಾರ ಸೀಶೆಲ್ಸ್‌…

16 mins ago

ಖಾಲಿ ಟ್ರಂಕ್‌ ಹಿಡಿದು ಸಂಸದ ತೇಜಸ್ವಿ ಸೂರ್ಯ ಪ್ರತಿಭಟನೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರ ಶೇಕಡಾ.5ರಷ್ಟು ಏರಿಕೆ ಮಾಡಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಸಂಸದ ತೇಜಸ್ವಿ…

46 mins ago

ತಿರುಪತಿ ಲಡ್ಡುಗೆ ಕಲಬೆರಕೆ ತುಪ್ಪ: ಸಿಬಿಐ ತನಿಖೆಯಲ್ಲಿ ಶಾಕಿಂಗ್‌ ಮಾಹಿತಿ ಬಹಿರಂಗ

ತಿರುಪತಿ: ವಿಶ್ವದ ಶ್ರೀಮಂತ ದೇವಾಲಯ ಎಂದೇ ಹೇಳಲಾಗುವ ತಿರುಪಯಯಿ ತಿರುಮಲ ಶ್ರೀ ವೆಂಕಟೇಶ್ವರ ದೇಗುಲದ ಲಡ್ಡು ಪ್ರಸಾದದಲ್ಲಿ ಕಲಬೆರಕೆ ತುಪ್ಪ…

2 hours ago

ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವು

ಬೆಂಗಳೂರು: ಸರಗಳ್ಳರಿಂದ ಬಿಡಿಸಿಕೊಳ್ಳುವಾಗ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ…

2 hours ago

ಮೈಸೂರು: ಹಳೆಯ ವಸ್ತು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ

ಮೈಸೂರು: ಹಳೆಯ ವಸ್ತುಗಳನ್ನು ಸಂಗ್ರಹಿಸಿದ್ದ ಗೋದಾಮಿನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಮೈಸೂರಿನ ಎನ್.ಆರ್.‌ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಮೈಸೂರು-ಬೆಂಗಳೂರು ರಸ್ತೆಯ…

3 hours ago

ವಿಬಿ ಜಿ ರಾಮ್ ಜಿ ಗೊಂದಲ ನಿವಾರಣೆ ಕೇಂದ್ರದ ಹೊಣೆ

ವಿಬಿ- ಜಿ ರಾಮ್ ಜಿ (ವಿಕಸಿತ್ ಭಾರತ್- ಗ್ಯಾರಂಟಿ ಫಾರ್ ರೋಜ್‌ಗಾರ್ ಮತ್ತು ಅಜೀವಿಕ ಮಿಷನ್ (ಗ್ರಾಮೀಣ್)- ೨೦೨೫) ಕಾಯ್ದೆಯು…

11 hours ago