ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು ಹುಲಿ ಮರಿಗಳ ಪೈಕಿ ಒಂದು ಗಂಡು ಹುಲಿ ಮರಿ ಮೃತಪಟ್ಟಿದ್ದು ಇನ್ನೆರಡು ಹುಲಿಗಳು ಕಾಡಿನಲ್ಲಿಯೇ ಪತ್ತೆಯಾಗಿದ್ದವು.
ಕಳೆದ ಎರಡು ದಿನಗಳಿಂದ ಹುಲಿಮರಿಗಳು ಕಾಡಿನಿಂದ ಹೊರ ಬಂದಿದ್ದು ಕಾಡಿನಲ್ಲಿ ಕಾಣಿಸಿಲ್ಲ, ಹೀಗಾಗಿ ಸಾರ್ವಜನಿಕರು ಎಚ್ಚರವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಲ್ಲೂಕಿನ ತಾರಕ, ಸತ್ತಿಗೆ ಹುಂಡಿ, ಹುಣಸೆಕುಪ್ಪೆ, ಪೆಂಜಹಳ್ಳಿ, ಕೊತ್ತನಹಳ್ಳಿ, ಹಿರೇಹಳ್ಳಿ, ಅಂಕನಾಥಪುರ, ವಾಚನಾಯಕನಹಳ್ಳಿ, ನಾಗನಹಳ್ಳಿ, ಶೀರನಹುಂಡಿ, ಅಂತರಸಂತೆ,ತಾರಕ ನಾಲೆ ಹಾಗೂ ತಾರಕ ನದಿಯ ಅಕ್ಕ-ಪಕ್ಕದ ಜಮೀನುಗಳಲ್ಲಿ, ಮರಿ ಹುಲಿಗಳೆರಡು ಓಡಾಡುತ್ತಿರುವ ಸಂಶಯವಿರುವುದರಿಂದ ಸಾರ್ವಜನಿಕರು ಜಮೀನುಗಳಿಗೆ ನೀರು ಹಾಯಿಸಲು ಮತ್ತು ಇತರೆ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ರಾತ್ರಿ ಸಮಯದಲ್ಲಿ ಹಾಗೂ ಬೆಳಗಿನ ಜಾವದಲ್ಲಿ ಏಕಾಂಗಿಯಾಗಿ ತೆರಳದೇ ಜಾಗರೂಕತೆ ವಹಿಸುವುದು ಹಾಗೂ ದನ ಜಾನುವಾರುಗಳನ್ನು ತಾರಕ ನದಿಯ ಇಕ್ಕೆಲಗಳಲ್ಲಿ ಕಟ್ಟಿಹಾಕಿ ಮೇಯಿಸದೆ ಮುತುವರ್ಜಿ ವಹಿಸಬೇಕೆಂದು ಮತ್ತು ಮರಿ ಹುಲಿಯ ಚಲನವಲಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.
ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್ ಅಹ್ಮಮದ್ ಖಾನ್ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.…
ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…
ಮಡಿಕೇರಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏಪ್ರಿಲ್.17ರಂದು ಕೊಡಗು ಜಿಲ್ಲೆಗೆ ಭೇಟಿ ನೀಡುವ ಸಾಧ್ಯತೆ ಇದ್ದು, ಅಗತ್ಯ ತಯಾರಿ ಮಾಡಿಕೊಳ್ಳುವಂತೆ ಸಂಬಂಧಪಟ್ಟ…
ಟೆಹರಾನ್: ಮಧ್ಯಪ್ರಾಚ್ಯದಲ್ಲಿ ಯುದ್ಧದ ಜ್ವಾಲೆ ಮತ್ತಷ್ಟು ಭೀಕರ ಸ್ವರೂಪ ಪಡೆದುಕೊಂಡಿದೆ. ಇಸ್ರೇಲ್ ಈಗ ಇರಾನ್ ನಾಗರಿಕರಿಗೆ ಅತ್ಯಂತ ಗಂಭೀರವಾದ ಎಚ್ಚರಿಕೆಯನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಬೆಂಗಳೂರು: ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ…
ಬೆಂಗಳೂರು: ಏಪ್ರಿಲ್.9ರಂದು ಬಾಗಲಕೋಟೆ, ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮತದಾನದ ದಿನದಂದು ಆ ಭಾಗದ ಸರ್ಕಾರಿ ಕಚೇರಿಗಳಿಗೆ…