ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು ಹುಲಿ ಮರಿಗಳ ಪೈಕಿ ಒಂದು ಗಂಡು ಹುಲಿ ಮರಿ ಮೃತಪಟ್ಟಿದ್ದು ಇನ್ನೆರಡು ಹುಲಿಗಳು ಕಾಡಿನಲ್ಲಿಯೇ ಪತ್ತೆಯಾಗಿದ್ದವು.
ಕಳೆದ ಎರಡು ದಿನಗಳಿಂದ ಹುಲಿಮರಿಗಳು ಕಾಡಿನಿಂದ ಹೊರ ಬಂದಿದ್ದು ಕಾಡಿನಲ್ಲಿ ಕಾಣಿಸಿಲ್ಲ, ಹೀಗಾಗಿ ಸಾರ್ವಜನಿಕರು ಎಚ್ಚರವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಲ್ಲೂಕಿನ ತಾರಕ, ಸತ್ತಿಗೆ ಹುಂಡಿ, ಹುಣಸೆಕುಪ್ಪೆ, ಪೆಂಜಹಳ್ಳಿ, ಕೊತ್ತನಹಳ್ಳಿ, ಹಿರೇಹಳ್ಳಿ, ಅಂಕನಾಥಪುರ, ವಾಚನಾಯಕನಹಳ್ಳಿ, ನಾಗನಹಳ್ಳಿ, ಶೀರನಹುಂಡಿ, ಅಂತರಸಂತೆ,ತಾರಕ ನಾಲೆ ಹಾಗೂ ತಾರಕ ನದಿಯ ಅಕ್ಕ-ಪಕ್ಕದ ಜಮೀನುಗಳಲ್ಲಿ, ಮರಿ ಹುಲಿಗಳೆರಡು ಓಡಾಡುತ್ತಿರುವ ಸಂಶಯವಿರುವುದರಿಂದ ಸಾರ್ವಜನಿಕರು ಜಮೀನುಗಳಿಗೆ ನೀರು ಹಾಯಿಸಲು ಮತ್ತು ಇತರೆ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ರಾತ್ರಿ ಸಮಯದಲ್ಲಿ ಹಾಗೂ ಬೆಳಗಿನ ಜಾವದಲ್ಲಿ ಏಕಾಂಗಿಯಾಗಿ ತೆರಳದೇ ಜಾಗರೂಕತೆ ವಹಿಸುವುದು ಹಾಗೂ ದನ ಜಾನುವಾರುಗಳನ್ನು ತಾರಕ ನದಿಯ ಇಕ್ಕೆಲಗಳಲ್ಲಿ ಕಟ್ಟಿಹಾಕಿ ಮೇಯಿಸದೆ ಮುತುವರ್ಜಿ ವಹಿಸಬೇಕೆಂದು ಮತ್ತು ಮರಿ ಹುಲಿಯ ಚಲನವಲಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.
ಮಂಡ್ಯ: ಆಸ್ತಿಗಾಗಿ ತಂದೆಯನ್ನೇ ಪಾಪಿ ಮಗನೋರ್ವ ಕೊಲೆ ಮಾಡಿರುವ ಘಟನೆ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ದಳವಾಯಿಕೋಡಿಯಲ್ಲಿ ನಡೆದಿದೆ. ಗ್ರಾಮದ…
ಹಾಸನ: ನಿವೃತ್ತ ಯೋಧರೊಬ್ಬರು ಪಿಸ್ತೂಲ್ನಿಂದ ತಲೆಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದಲ್ಲಿ ನಡೆದಿದೆ. ಹಾಸನ ಜಿಲ್ಲೆ ಬೇಲೂರು…
ಮೈಸೂರು: ಈ ದೇಶದಲ್ಲಿ ಬಂಡವಾಳಶಾಹಿಗಳಾಗಲೀ, ಸಕ್ಕರೆ ಕಾರ್ಖಾನೆ ಮಾಲೀಕರಾಗಲೀ ಅಥವಾ ಉದ್ಯಮಿಗಳು ಸೇರಿ ಯಾರೂ ಸಹ ಆತ್ಮಹತ್ಯೆ ಮಾಡಿಕೊಂಡಿಲ್ಲ. ಆದರೇ,…
ಬೆಂಗಳೂರು: ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಭೈರತಿ ಬಸವರಾಜ್ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ…
ನವದೆಹಲಿ: ರಾಜಧಾನಿ ಬೆಂಗಳೂರು ಹಾಗೂ ರಾಜ್ಯದ ಕರಾವಳಿ ಪ್ರದೇಶಗಳ ನಡುವೆ ಪ್ರಯಾಣವನ್ನು ಮತ್ತಷ್ಟು ಸುಲಭಗೊಳಿಸುವ ನಿಟ್ಟಿನಲ್ಲಿ ವಂದೇ ಭಾರತ್ ಎಕ್ಸ್…
ಹಾಸನ: ಅಪ್ರಾಪ್ತ ಬಾಲಕಿಯೊಬ್ಬಳಿಗೆ ಚಾಕೋಲೇಟ್ ನೀಡಿ ಆಕೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದ ಹಿನ್ನೆಲೆಯಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ ಘಟನೆ…