ಜಿಲ್ಲೆಗಳು

ಹುಲಿಮರಿಗಳ ಭೀತಿ; ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಲು ಸೂಚನೆ

ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು ಹುಲಿ ಮರಿಗಳ ಪೈಕಿ ಒಂದು ಗಂಡು ಹುಲಿ ಮರಿ ಮೃತಪಟ್ಟಿದ್ದು ಇನ್ನೆರಡು ಹುಲಿಗಳು ಕಾಡಿನಲ್ಲಿಯೇ ಪತ್ತೆಯಾಗಿದ್ದವು.
ಕಳೆದ ಎರಡು ದಿನಗಳಿಂದ ಹುಲಿಮರಿಗಳು ಕಾಡಿನಿಂದ ಹೊರ ಬಂದಿದ್ದು ಕಾಡಿನಲ್ಲಿ ಕಾಣಿಸಿಲ್ಲ, ಹೀಗಾಗಿ ಸಾರ್ವಜನಿಕರು ಎಚ್ಚರವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಲ್ಲೂಕಿನ ತಾರಕ, ಸತ್ತಿಗೆ ಹುಂಡಿ, ಹುಣಸೆಕುಪ್ಪೆ, ಪೆಂಜಹಳ್ಳಿ, ಕೊತ್ತನಹಳ್ಳಿ, ಹಿರೇಹಳ್ಳಿ, ಅಂಕನಾಥಪುರ, ವಾಚನಾಯಕನಹಳ್ಳಿ, ನಾಗನಹಳ್ಳಿ, ಶೀರನಹುಂಡಿ, ಅಂತರಸಂತೆ,ತಾರಕ ನಾಲೆ ಹಾಗೂ ತಾರಕ ನದಿಯ ಅಕ್ಕ-ಪಕ್ಕದ ಜಮೀನುಗಳಲ್ಲಿ, ಮರಿ ಹುಲಿಗಳೆರಡು ಓಡಾಡುತ್ತಿರುವ ಸಂಶಯವಿರುವುದರಿಂದ ಸಾರ್ವಜನಿಕರು ಜಮೀನುಗಳಿಗೆ ನೀರು ಹಾಯಿಸಲು ಮತ್ತು ಇತರೆ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ರಾತ್ರಿ ಸಮಯದಲ್ಲಿ ಹಾಗೂ ಬೆಳಗಿನ ಜಾವದಲ್ಲಿ ಏಕಾಂಗಿಯಾಗಿ ತೆರಳದೇ ಜಾಗರೂಕತೆ ವಹಿಸುವುದು ಹಾಗೂ ದನ ಜಾನುವಾರುಗಳನ್ನು ತಾರಕ ನದಿಯ  ಇಕ್ಕೆಲಗಳಲ್ಲಿ ಕಟ್ಟಿಹಾಕಿ ಮೇಯಿಸದೆ ಮುತುವರ್ಜಿ ವಹಿಸಬೇಕೆಂದು ಮತ್ತು ಮರಿ ಹುಲಿಯ ಚಲನವಲಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.

andolanait

Recent Posts

ಪರ್ಯಾಯ ವ್ಯವಸ್ಥೆ ಕಲ್ಪಿಸಿ ಫುಟ್‌ಪಾತ್ ವ್ಯಾಪಾರಿಗಳನ್ನು ತೆರವುಗೊಳಿಸಿ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯ ಸರ್ಕಾರದ ಸೂಚನೆಯ ಮೇರೆಗೆ ಮೈಸೂರು ಸೇರಿದಂತೆ ರಾಜ್ಯದ ಎಲ್ಲಾ ಮಹಾನಗರ ಪಾಲಿಕೆಗಳ ಆಡಳಿತ ಇದೀಗ…

4 hours ago

ಆರ್‌.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ: ಸಂವಹನ ಕೊರತೆಯಿಂದ ಪಟ್ಟಕ್ಕೆ ಕುತ್ತು

ರಾಮಕೃಷ್ಣ ಹೆಗಡೆ, ದೇವೇಗೌಡರನ್ನು ನಿರ್ಲಕ್ಷಿಸಿ ಅಧಿಕಾರ ಕಳೆದುಕೊಂಡ ಎಸ್.ಆರ್.ಬೊಮ್ಮಾಯಿ ರಾಜಕಾರಣದಲ್ಲಿ ಸಂವಹನ ಬಹಳ ಮುಖ್ಯ.ಅದರಲ್ಲೂ ಮುಖ್ಯಮಂತ್ರಿ ಹುದ್ದೆಗೇರುವ ನಾಯಕರಿಗೆ ಸಂವಹನ…

4 hours ago

ಚಾಮರಾಜೇಶ್ವರ ರಥೋತ್ಸವಕ್ಕೆ ದ್ವಿಶತಮಾನದ ನವೋತ್ಸಾಹ

ಸಿ.ಎಂ.ನರಸಿಂಹಮೂರ್ತಿ  ಚಾಮರಾಜನಗರ ವನಸಿರಿ ಪ್ರಕೃತಿ ಮಾತೆಯ ತವರೂರು. ವನ್ಯ ಸಂಪತ್ತಿನ ತಾಣ. ಅಪ್ರತಿಮ ನೈಸರ್ಗಿಕ ಸಂಪತ್ತು ಹಾಗೂ ಶ್ರೀಮಂತ ಸಾಂಸ್ಕ…

4 hours ago

ಕೆ.ಆರ್.ಪೇಟೆ: ಶೇ.19ರಷ್ಟು ಮಳೆ ಕೊರತೆ

ಆರ್.ಶ್ರೀನಿವಾಸ್ ತಾಲ್ಲೂಕಿನಲ್ಲಿ ೩೭,೬೭೧ ಹೆಕ್ಟೇರ್ ಪೈಕಿ ೬,೨೯೦ ಹೆ.ನಲ್ಲಿ ಮಾತ್ರ ಬಿತ್ತನೆ ಕಾರ್ಯ ಕೆ.ಆರ್.ಪೇಟೆ: ತಾಲ್ಲೂಕಿನಲ್ಲಿ ಪ್ರಸಕ್ತ ಸಾಲಿನ ಜ.೧ರಿಂದ…

4 hours ago

ಯುಜಿ, ಎಬಿ ಕೇಬಲ್ ಅಳವಡಿಕೆಯೊಂದೇ ಪರಿಹಾರ

ನವೀನ್ ಡಿಸೋಜ ಕೊಡಗಿನಲ್ಲಿ ಮಳೆಗಾಲದಲ್ಲಿ ಎದುರಾಗುವ ವಿದ್ಯುತ್ ಸಮಸ್ಯೆ; ಶಾಶ್ವತ ಪರಿಹಾರಕ್ಕೆ ಬೇಕಿದೆ ಬಹುದೊಡ್ಡ ಮೊತ್ತ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ…

4 hours ago

ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಹಣ ವಸೂಲಿ ದಂಧೆ?

ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಕರ್ನಾಟಕ-ಕೇರಳ ಗಡಿಭಾಗದಲ್ಲಿರುವ ಬಂಡೀಪುರ ಸಮೀಪದ ಮೂಲೆಹೊಳೆ ಚೆಕ್‌ಪೋಸ್ಟ್‌ನಲ್ಲಿ ಸರಕು ಸಾಗಣೆ ವಾಹನಗಳಿಂದ ಅಕ್ರಮವಾಗಿ ಹಣ ವಸೂಲಿ…

5 hours ago