ಎಚ್.ಡಿ.ಕೋಟೆ: ಒಂದು ವರ್ಷದ ಎರಡು ಹುಲಿಮರಿಗಳು ಕಾಡಿನಿಂದ ಹೊರಕ್ಕೆ ಬಂದಿದ್ದು, ಅರಣ್ಯದಂಚಿನ ಜನರು ಎಚ್ಚರಿಕೆ ವಹಿಸಬೇಕೆಂದು ವಲಯ ಅರಣ್ಯಾಧಿಕಾರಿ ಸಿದ್ದರಾಜು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತಾಲ್ಲೂಕಿನ ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ವ್ಯಾಪ್ತಿಯ ಅಂತರಸಂತೆ ವನ್ಯಜೀವಿ ವಲಯದಲ್ಲಿ ತಾಯಿ ಮೃತಪಟ್ಟು ಅನಾಥವಾಗಿದ್ದ ಮೂರು ಹುಲಿ ಮರಿಗಳ ಪೈಕಿ ಒಂದು ಗಂಡು ಹುಲಿ ಮರಿ ಮೃತಪಟ್ಟಿದ್ದು ಇನ್ನೆರಡು ಹುಲಿಗಳು ಕಾಡಿನಲ್ಲಿಯೇ ಪತ್ತೆಯಾಗಿದ್ದವು.
ಕಳೆದ ಎರಡು ದಿನಗಳಿಂದ ಹುಲಿಮರಿಗಳು ಕಾಡಿನಿಂದ ಹೊರ ಬಂದಿದ್ದು ಕಾಡಿನಲ್ಲಿ ಕಾಣಿಸಿಲ್ಲ, ಹೀಗಾಗಿ ಸಾರ್ವಜನಿಕರು ಎಚ್ಚರವಹಿಸುವಂತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಲ್ಲೂಕಿನ ತಾರಕ, ಸತ್ತಿಗೆ ಹುಂಡಿ, ಹುಣಸೆಕುಪ್ಪೆ, ಪೆಂಜಹಳ್ಳಿ, ಕೊತ್ತನಹಳ್ಳಿ, ಹಿರೇಹಳ್ಳಿ, ಅಂಕನಾಥಪುರ, ವಾಚನಾಯಕನಹಳ್ಳಿ, ನಾಗನಹಳ್ಳಿ, ಶೀರನಹುಂಡಿ, ಅಂತರಸಂತೆ,ತಾರಕ ನಾಲೆ ಹಾಗೂ ತಾರಕ ನದಿಯ ಅಕ್ಕ-ಪಕ್ಕದ ಜಮೀನುಗಳಲ್ಲಿ, ಮರಿ ಹುಲಿಗಳೆರಡು ಓಡಾಡುತ್ತಿರುವ ಸಂಶಯವಿರುವುದರಿಂದ ಸಾರ್ವಜನಿಕರು ಜಮೀನುಗಳಿಗೆ ನೀರು ಹಾಯಿಸಲು ಮತ್ತು ಇತರೆ ಕೃಷಿ ಚಟುವಟಿಕೆಗಳನ್ನು ನಿರ್ವಹಿಸಲು ರಾತ್ರಿ ಸಮಯದಲ್ಲಿ ಹಾಗೂ ಬೆಳಗಿನ ಜಾವದಲ್ಲಿ ಏಕಾಂಗಿಯಾಗಿ ತೆರಳದೇ ಜಾಗರೂಕತೆ ವಹಿಸುವುದು ಹಾಗೂ ದನ ಜಾನುವಾರುಗಳನ್ನು ತಾರಕ ನದಿಯ ಇಕ್ಕೆಲಗಳಲ್ಲಿ ಕಟ್ಟಿಹಾಕಿ ಮೇಯಿಸದೆ ಮುತುವರ್ಜಿ ವಹಿಸಬೇಕೆಂದು ಮತ್ತು ಮರಿ ಹುಲಿಯ ಚಲನವಲಗಳು ಕಂಡುಬಂದಲ್ಲಿ ಕೂಡಲೇ ಅರಣ್ಯ ಇಲಾಖೆಗೆ ಮಾಹಿತಿಯನ್ನು ಒದಗಿಸಬೇಕೆಂದು ಕೋರಿದ್ದಾರೆ.
ಬೆಂಗಳೂರು : ಸರ್ಕಾರಿ ಸೇವೆಯಲ್ಲಿದ್ದುಕೊಂಡು ನಿಯಮಗಳನ್ನು ಉಲ್ಲಂಘಿಸಿ ಆರ್ಎಸ್ಎಸ್ ಪಥಸಂಚಲನದಲ್ಲಿ ಭಾಗಿಯಾಗಿದ್ದ ಯಾದಗಿರಿ ಜಿಲ್ಲೆಯ ಇಬ್ಬರು ಸರ್ಕಾರಿ ಶಾಲಾ ಶಿಕ್ಷಕರನ್ನು…
ಶಾಸಕ ಜಿ.ಡಿ. ಹರೀಶ್ ಗೌಡರ ಮನವಿಗೆ ಸರ್ಕಾರದ ಸ್ಪಂದನೆ ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ…
89 ತಾಲ್ಲೂಕುಗಳಲ್ಲಿ ತೀವ್ರ, 12 ತಾಲ್ಲೂಕುಗಳಲ್ಲಿ ತುಸು ಕಡಿಮೆ ಶೇ. 31ರಷ್ಟು ಮಳೆ ಕೊರತೆ ಶೇ.71ರಷ್ಟು ಬೆಳೆಗಳಿಗೆ ಹಾನಿ ಬೆಂಗಳೂರು…
ಮೈಸೂರು : ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ ಅವರು ಗುರುವಾರ ಮೈಸೂರು ನಗರದ ಮಹಿಳಾ ಪೊಲೀಸ್…
ಮೈಸೂರು : ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರಿಗೆ ಆಗಮಿಸಲಿದ್ದಾರೆ. ಬೆಳಿಗ್ಗೆ 10;30ಕ್ಕೆ ಹೆಲಿಕಾಪ್ಟರ್ನಲ್ಲಿ…
ನವದೆಹಲಿ : ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ಆರೋಪ ಎದುರಿಸುತ್ತಿರುವ ಸಚಿವ ಬಿ. ನಾಗೇಂದ್ರ ವಿರುದ್ಧ ಯಾವುದೇ ಸಾಕ್ಷ್ಯಗಳಿಲ್ಲ ಎಂದು ಮುಖ್ಯಮಂತ್ರಿ…