ಕೊಳ್ಳೆಗಾಲ : ಮಾಂತ್ರಿಕನಿಗೆ ಮಾರಾಟ ಮಾಡಲು ಜೀವಂತ ಗೂಬೆಯನ್ನು ಸಾಗಿಸುತ್ತಿದ್ದ ವೇಳೆಯಲ್ಲಿ ಮಾಲು ಸಮೇತ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಘಟನೆ ತಾಲ್ಲೂಕಿನ ಜಾಗೇರಿ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ನಡೆದಿದೆ.
ಗೂಬೆವೊಂದನ್ನು ಹಿಡಿದು ಬೈಕ್ ಮೂಲಕ ಸಾಗಿಸುತ್ತಿದ್ದ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಾಲ್ಲೂಕಿನ ಹೊನೇನ್ನಹಳ್ಳಿ ಗ್ರಾಮದ ಪುಟ್ಟರಾಜು ಹಾಗೂ ಯಡಹಳ್ಳಿ ಗ್ರಾಮದ ಹರೀಶ್ ಎಂಬುವವರನ್ನು ಬಂಧಿಸಿ ತನಿಖೆಗೆ ಒಳಪಡಿಸಿದಾಗ ಮಾಂತ್ರಿಕರೊಬ್ಬರಿಗೆ ಮಾರಾಟ ಮಾಡಲು ಕೊಂಡ್ಯೋತ್ತಿರುವುದಾಗಿ ಆರೋಪಿಗಳು ತಿಳಿಸಿದ್ದಾರೆ. ಈ ಸಂಬಂಧ ಎಫ್.ಎಂ.ಎಸ್ ಕಚೇರಿ ಪ್ರಕರಣ ದಾಖಲಿಸಿಕೊಂಡು ಬಂಧಿತರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಸಾಗಾಣೆ ಮಾಡಲು ಬಳಸಿದ್ದ ಬೈಕ್ ಮತ್ತು ಜೀವಂತ ಗೂಬೆಯನ್ನು ಜಪ್ತಿ ಮಾಡಲಾಗಿದೆ.
ದಾಳಿಯಲ್ಲಿ ಅರಣ್ಯ ಸಂಚಾರಿ (ಎಫ್.ಎಂ.ಎಸ್.) ದಳದ ಸಬ್ ಇನ್ಸ್ಪೆಕ್ಟರ್ ವಿಜಯ್ ರಾಜ್, ಸಿಬ್ಬಂದಿಗಳಾದ ಮುಖ್ಯಪೇದೆಗಳಾದ ತಖೀಉಲ್ಲಾ, ರಾಮಚಂದ್ರ, ಸ್ವಾಮಿ, ಬಸವರಾಜು, ಚಾಲಕ ಪ್ರಭಾಕರ್ ಇದ್ದರೂ.