ಜಿಲ್ಲೆಗಳು

ಸ್ವಯಂ ಉದ್ಯೋಗ ಸಾಲಕ್ಕಾಗಿ ಮೊದಲ ದಿನವೇ ನೂರಾರು ಬ್ರಾಹ್ಮಣರಿಂದ ಅರ್ಜಿ ಸಲ್ಲಿಕೆ

1 ಲಕ್ಷ ರೂ ಸ್ವಯಂ ಉದ್ಯೋಗ ಸಾಲಕ್ಕಾಗಿ ಮೊದಲ ದಿನವೇ ನೂರಾರು ಬ್ರಾಹ್ಮಣರಿಂದ ಅರ್ಜಿಸಲ್ಲಿಕೆ

ಅರ್ಥಿಕವಾಗಿ ಹಿಂದುಳಿದ ಸಾಮಾನ್ಯ ವರ್ಗಕ್ಕೆ ಶೇ.10ರಷ್ಟು ಮೀಸಲಾತಿ ಮೋದಿ ಕೊಡುಗೆ : ಕೆ.ಎಂ. ನಿಶಾಂತ್

ಮೈಸೂರು : ನಗರದ ವಿಪ್ರಸಹಾಯವಾಣಿ ಹಾಗು ಕೆ.ಎಂ. ನಿಶಾಂತ್ ರವರ ಜನ ಸೇವಾ ಕೇಂದ್ರದ ವತಿಯಿಂದ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಘೋಷಿಸಿರುವ ‘ಪುರುಷೋತ್ತ ಸ್ವಯಂ ಉದ್ಯೋಗ ಸಾಲ’ ಯೋಜನೆಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಗೆ ನಗರದ ರಾಮಾನುಜ ರಸ್ತೆಯಲ್ಲಿರುವ ಜನ ಸೇವಾ ಕೇಂದ್ರದಲ್ಲಿ ಚಾಲನೆ ನೀಡಲಾಯಿತು. ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಎಂ ಆರ್ ಬಾಲಕೃಷ್ಣ ಅರ್ಜಿದಾರರಿಂದ ಅರ್ಜಿ ಸ್ವೀಕರಿಸುವ ಮೂಲಕ ಈ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಮಾತನಾಡಿದ ಜನ ಸೇವಾ ಕೇಂದ್ರದ ಸಂಸ್ಥಾಪಕ ಕೆ.ಎಂ. ನಿಶಾಂತ್ ರವರು ಆರ್ಥಿಕವಾಗಿ ಹಿಂದುಳಿದ ನಿರುದ್ಯೋಗಿ ಬ್ರಾಹ್ಮಣರನ್ನು ಆರ್ಥಿಕವಾಗಿ ಪುನಶ್ಚೇತನ ಗೊಳಿಸಿ, ಸ್ವಯಂ ಉದ್ಯೋಗಸ್ಥರನ್ನಾಗಿ ಮಾಡುವ ಉದ್ದೇಶದಿಂದ ಈ ಯೋಜನೆ ಜಾರಿಗೊಂಡಿದೆ. ಹಲವಾರು ವರ್ಷಗಳಿಂದ ಬ್ರಾಹ್ಮಣರಿಗೆ ಸರ್ಕಾರದ ಯಾವುದೇ ಯೋಜನೆಗಳು ಇಲ್ಲದಿದ್ದ ಕಾರಣ ಯೋಜನೆಗೆ ಬೇಕಿರುವ ದಾಖಲೆಗಳು, ಪ್ರಕ್ರಿಯೆಗಳ ಬಗ್ಗೆ ಹಲವರಿಗೆ ಅರಿವಿಲ್ಲ ಮತ್ತು ಯೋಜನೆಯ ಮಾಹಿತಿ ಸಾಕಷ್ಟು ಜನರಿಗೆ ತಲುಪಿಲ್ಲ ಹಾಗಾಗಿ ವಿಪ್ರ ಸಹಾಯವಾಣಿ ಹಾಗು ನಮ್ಮ ಜನ ಸೇವಾ ಕೇಂದ್ರದ ಮೂಲಕ ಫಲಾನುಭವಿಗಳನ್ನು ಗುರುತಿಸಿ ಯೋಜನೆಯ ಬಗ್ಗೆ ಮಾಹಿತಿ ನೀಡಿ, ಬೇಕಿರುವ ಎಲ್ಲಾ ದಾಖಲೆಗಳನ್ನು ಸಿದ್ದಪಡಿಸಲು ಸಹಕಾರ ನೀಡುತ್ತಿದ್ದೇವೆ. ಈಗಾಗಲೆ ನೂರಾರು ವಿಪ್ರ ವಿದ್ಯಾರ್ಥಿಗಳಿಗೆ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ನೀಡುವ ವಿದ್ಯಾರ್ಥಿವೇತನ ಹಾಗು ಸಹಾಯ ಧನವನ್ನು ಕೊಡಿಸಲಾಗಿದೆ, ಈ ಯೋಜ‌ನೆಗೂ ಉತ್ತಮ ಪ್ರತಿಕ್ರಿಯ ದೊರಕಿದ್ದು ಮೊದಲ ದಿನವಾದ ಇಂದು ಸುಮಾರು 160 ಜನರಗೆ ಅರ್ಜಿ ವಿತರಿಸಲಾಗಿದೆ ಮುಂದಿನ ಒಂದು ತಿಂಗಳ ಒಳಗಾಗಿ 500 ಜನ ಹಿಂದುಳಿದ ಬ್ರಾಹ್ಮಣಗೆ ಈ ಯೋಜನೆಯ ಮೂಲಕ ಸಾಲ ಒದುಗಿಸಿ ಅವರನ್ನು ಸ್ವಯಂ ಉದ್ಯೋಗಸ್ಥರನ್ನಾಗಿಸುವ ಗುರಿಯನ್ನು ಹೊಂದಿದ್ದೇವೆ. ಸಾಮಾನ್ಯ ವರ್ಗದ ಆರ್ಥಿಕವಾಗಿ ಹಿಂದುಳಿದವರಿಗೆ ಕೇಂದ್ರ ಸರ್ಕಾರ ಶೇಕಡ 10ರಷ್ಟು ಮೀಸಲಾತಿ ನೀಡಿರುವುದರಿಂದಾಗಿ ಇಂತಹ ಯೋಜನೆಗಳು ಬ್ರಹ್ಮಣ ಸಮುದಾಯಕ್ಕೆ ದೊರಕುತ್ತಿದೆ ಹಾಗಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರವರಿಗೆ ಸಮುದಾಯ ಕೃತಜ್ಞವಾಗಿದೆ ಎಂದು ತಿಳಿಸಿದರು. ನಂತರ ಮಾತನಾಡಿದ ವಿಪ್ರ ಸಹಾಯ ವಾಣಿಯ ಅಧ್ಯಕ್ಷರಾದ ವಿಕ್ರಂ ಅಯ್ಯಂಗಾರ್  ಬ್ರಾಹ್ಮಣರು ಉಪಜಾತಿಗಳ ಮೇಲೆ ಹೆಚ್ಚು ಅಭಿಮಾನ ಹೊಂದಿರುವ ಪರಿಣಾಮ ಜನಗಣತಿ ವೇಳೆ ಬ್ರಾಹ್ಮಣ ಎಂದು ಜಾತಿ ನಮೂದಿಸುತ್ತಿಲ್ಲ .

ಇದರಿಂದ ರಾಜ್ಯದಲ್ಲಿ ಕೇವಲ 17ಲಕ್ಷ ಬ್ರಾಹ್ಮಣರಿದ್ದಾರೆ ಎಂದು ಸರ್ಕಾರದ ದಾಖಲೆಗಳಲ್ಲಿ ದಾಖಲಾಗಿವೆ. ಇದರಿಂದ ನಿರೀಕ್ಷಿತ ಪ್ರತಿನಿದ್ಯ ಸಮುದಾಯಕ್ಕೆ ಸಿಗುತ್ತಿಲ್ಲ. ಹೀಗಾಗಿ 45ಕ್ಕೂ ಹೆಚ್ಚು ಉಪ ಜಾತಿಗಳು ಒಗ್ಗಟ್ಟಾಗಿ ತಾವು ಬ್ರಾಹ್ಮಣರು ಎಂದು ದಾಖಲಿಸಬೇಕು ಆಗಮಾತ್ರ ಈ ರೀತಿಯ ಯೋಜನೆಗಳನ್ನು, ಹಾಗು ಹೆಚ್ಚಿನ ಅನುದಾನವನ್ನು ಸಮುದಾಯ ಪಡೆಯಲು ಸಾಧ್ಯ ಎಂದರು. ಹಾಗೂ ಈ ಯೋಜನೆಯ ಮೂಲಕ 1ಲಕ್ಷ ರೂ ಸಬ್ಸಿಡಿ ಸಾಲ ದೊರಕುತ್ತಿದ್ದು 20 ಸಾವಿರ ರೂಗಳನ್ನು ಸಬ್ಸಿಡಿ ರೂಪದಲ್ಲಿ ನೀಡಲಾಗುವುದು. ಉಳಿದ 80 ಸಾವಿರವನ್ನು ಸಾಲದ ರೂಪದಲ್ಲಿ ಕೆನರಾ ಬ್ಯಾಂಕ್ ನ ಮೂಲಕ ಕೊಡಿಸಲಾಗುತ್ತದೆ, ಅರ್ಜಿ ಸಲ್ಲಿಸಲು ಇ ಡಬ್ಲು ಎಸ್ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‌ಪೋರ್ಟ್ ಅಳತೆಯ ಭಾವ ಚಿತ್ರ, ಕೆನರಾ ಬ್ಯಾಂಕ್ ನ ಪಾಸ್ ಪುಸ್ತಕ, ಪ್ಯಾನ್ ಕಾರ್ಡ್ ಹಾಗು ಪ್ರಾಜೆಕ್ಟ್ ರಿಪೋರ್ಟ್ ಅನ್ನು ಕಡ್ಡಾಯವಾಗಿ ನೀಡಬೇಕಾಗುತ್ತದೆ, ಅರ್ಜಿಯೊಂದಿಗೆ ಈ ಮೇಲಿನ ಎಲ್ಲಾ ಧಾಖಲೆಗಳನ್ನು ಲಗತ್ತಿಸಿ ಕಚೇರಿಯಲ್ಲಿ ಸಲ್ಲಿಸ ಬಹುದು ಹಾಗು ಹೆಚ್ಚಿನ ಮಾಹಿತಿಗಾಗಿ ನಗರದ ರಾಮಾನುಜ ರಸ್ತೆಯಲ್ಲಿರುವ ಜನ ಸೇವಾ ಕೇಂದ್ರವನ್ನು ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದರು.

ಈ ಕಾರ್ಯಕ್ರಮದಲ್ಲಿ ವಿಪ್ರ ಸಹಾಯ ವಾಣಿಯ ವಿಕ್ರಂ ಅಯ್ಯಂಗಾರ್, ಬಿಜೆಪಿ ಯುವ ಮೋರ್ಚಾ ಉಪಾಧ್ಯಕ್ಷ ಕೆ.ಎಂ. ನಿಶಾಂತ್, ಬ್ರಾಹ್ಮಣ ಅಭಿವೃದ್ಧಿ ಮಂಡಳಿಯ ನಿರ್ದೇಶಕ ಎಂ.ಆರ್ ಬಾಲಕೃಷ್ಣ, ಸಿ.ವಿ. ಪಾರ್ಥಸಾರಥಿ, ಕೆ.ಪಿ. ಮಧುಸೂದನ್, ಸತೀಶ್, ಸಂಪತ್, ಮದ್ವೇಶ್ ಮನ್ನಾರಿ, ಜಗದೀಶ್, ಎಂ.ಎನ್. ಧನುಷ್, ನವೀನ್, ವಿಜಯ್ ಕುಮಾರ್, ನಾಗೇಂದ್ರ ಹಾಗು ಹಲವು ಫಲಾನುಭವಿಗಳು ಉಪಸ್ಥಿತರಿದ್ದರು.

andolanait

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಸತ್ಯದ ಆರಾಧಕ ಮೌನವನ್ನು ಅವಲಂಬಿಸುವುದು ಅವಶ್ಯಕ

ನಾನು ಶಾಕಾಹಾರಿ ಮಂಡಲಿಯ ಕಾರ್ಯಕಾರಿ ಸಮಿತಿಯ ಸದಸ್ಯನಾಗಿ ಆರಿಸಲ್ಪಟ್ಟೆನು. ಆದರ ಪ್ರತಿ ಯೊಂದು ಸಭೆಗೂ ನಾನು ತಪ್ಪದೆ ಹಾಜರಾಗುತ್ತಿದ್ದೆ. ಆದರೆ…

12 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಆಗಸ್ಟ್‌ 22 ಶನಿವಾರ  

12 hours ago

ಧಾವಂತ ಬದುಕಿಗೆ ಹೊಸ ಚೈತನ್ಯ ನೀಡುವ ಅರವಟ್ಟಿಗೆ

ಸಾಮಾಜಿಕ ಕಳವಳಿಯ ನೆಲೆಯಲ್ಲಿ ಮೂಡಿರುವ ಕಥಾ ಸಂಕಲನ ಹೆಚ್.ಎಸ್.ಸಿದ್ದಮಲ್ಲಿಕಾರ್ಜುನಸ್ವಾಮಿ, ಹುಂಡೀಪುರ ಸಾಹಿತಿ ಕೊತ್ತಲವಾಡಿ ಶಿವಕುಮಾರ್ ಅವರ ಹೊಸ ಕೃತಿ ‘ಅರವಟ್ಟಿಗೆ’…

14 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಗಾಂಧೀಜಿ ಆತ್ಮಕತೆಯ ಶತಮಾನೋತ್ಸವಕ್ಕೆ ಆಂದೋಲನ ಕೈಜೋಡಿಸಿರುವುದು ಐತಿಹಾಸಿಕ

ಪ್ರೊ. ಜಿ. ಬಿ. ಶಿವರಾಜು, ಟ್ರಸ್ಟಿ, ಕಸ್ತೂರ ಬಾ ಗಾಂಧಿ ಆಶ್ರಮ ಗಾಂಧೀಜಿ ಆತ್ಮಕತೆ ‘ಸತ್ಯದೊಡನೆ ನನ್ನ ಅನ್ವೇಷಣೆ’ಗೆ ೧೦೦…

14 hours ago

ಸಾರ್ವಜನಿಕ ಸ್ಥಳದಲ್ಲಿ ಜಾತಿ ನಿಂದನೆಯಾದರೆ ಮಾತ್ರ ಎಸ್‌ಸಿ,ಎಸ್‌ಟಿ ಕಾಯ್ದೆ ಅನ್ವಯ ; ಸುಪ್ರೀಂ ಕೋರ್ಟ್‌

ಹೊಸದಿಲ್ಲಿ : ಸಾರ್ವಜನಿಕರ ಸಮ್ಮುಖದಲ್ಲಿ ಅಥವಾ ಸಾರ್ವಜನಿಕರ ವೀಕ್ಷಣೆಗೆ ಒಳಪಡುವ ಸ್ಥಳದಲ್ಲಿ ಜಾತಿ ನಿಂದನೆ ನಡೆದಿರುವುದು ಸಾಬೀತಾಗದಿದ್ದರೆ, ಅದನ್ನು ಪರಿಶಿಷ್ಟ…

1 day ago

ಆರೋಪದಿಂದ ಮುಕ್ತನಾಗಿ ಹೊರಬರುತ್ತೇನೆ : ಸಚಿವ ನಾಗೇಂದ್ರ ವಿಶ್ವಾಸ

ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…

1 day ago