ಜಿಲ್ಲೆಗಳು

ಸಿಎಂ ಕಾರ್ಯಕ್ರಮದಲ್ಲಿನ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಲ್ಲಿ ಸೋಲಿನ ಭಯ: ನಿಶಾಂತ್ ವ್ಯಂಗ್ಯ

ಹನೂರು : ಕ್ಷೇತ್ರದಲ್ಲಿ ಬಿಜೆಪಿ ಸಂಘಟನೆ ಹಾಗೂ ಮುಖ್ಯಮಂತ್ರಿ ಕಾರ್ಯಕ್ರಮದಲ್ಲಿ ಆಗಮಿಸಿದ ಜನಸ್ತೋಮವನ್ನು ನೋಡಿ ಸ್ಥಳೀಯ ಶಾಸಕರಿಗೆ ಸೋಲಿನ ಭಯ ಕಾಣುತ್ತಿದೆ ಎಂದು ಬಿಜೆಪಿ ಮುಖಂಡ ನಿಶಾಂತ್ ವ್ಯಂಗ್ಯವಾಡಿದರು.

ಪಟ್ಟಣದ ನಿಶಾಂತ್ ರವರ ಮಹಾ ಮನೆಯಲ್ಲಿ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು ನನ್ನ ಸ್ನೇಹಿತ ತನ್ನ ಖಾಸಗಿ ಜಮೀನಿನಲ್ಲಿ ನನ್ನ ಹಾಗೂ ಬಿಜೆಪಿ ಪಕ್ಷದ ಪೋಸ್ಟರ್ ಅಳವಡಿಸಿರುವುದಕ್ಕೆ ಕಾಂಗ್ರೆಸ್ ಶಾಸಕರು ಹಾಗೂ ಕಾರ್ಯಕರ್ತರು ವಿರೋಧ ವ್ಯಕ್ತಪಡಿಸಿರುವುದು ಸರಿ ಇಲ್ಲ, ಇವರು ಶಾಸಕರಾಗಿ 12 ವರ್ಷಗಳಿಂದ ಮಾಡದೇ ಇರುವ ಅಭಿವೃದ್ಧಿ ಕಾರ್ಯಗಳನ್ನು ಬಿಜೆಪಿ ಸರ್ಕಾರ ಮೂರು ವರ್ಷದ ಅವಧಿಯಲ್ಲಿ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದೆ.ಇದಲ್ಲದೆ ಕೇವಲ ಒಂದು ವರ್ಷದ ಅವಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ ಸೋಮಣ್ಣನವರ ನೇತೃತ್ವದಲ್ಲಿ ಇಡೀ ಜಿಲ್ಲೆ ಸಮಗ್ರ ಅಭಿವೃದ್ಧಿ ಆಗುತ್ತಿರುವುದನ್ನು ನೋಡಿ ಶಾಸಕರಿಗೆ ಭಯ ಉಂಟಾಗಿದೆ. ಇದು ನಮಗೆ ಹಾಗೂ ನಮ್ಮ ಬಿಜೆಪಿ ಕಾರ್ಯಕರ್ತರಿಗೆ ಸಂತೋಷವನ್ನುಂಟು ಮಾಡಿದೆ. ಅಂದರೆ ನಮ್ಮ ಬಿಜೆಪಿ ಸಂಘಟನೆ ಹಾಗೂ ಬಿಜೆಪಿ ಶಕ್ತಿ ಯಾವ ರೀತಿ ಇದೆ ಎಂಬುದನ್ನು ಇದರಲ್ಲಿ ತಿಳಿದುಕೊಳ್ಳಬೇಕು, ಎಂದು ತಿಳಿಸಿದರು.

andolanait

Recent Posts

‘ಹೆರಿಟೇಜ್ ಟೂರಿಸಂ ಅಭಿವೃದ್ಧಿಗೆ ಯೋಜನೆ’

ಟಾಂಗಾ ಸವಾರಿ ವಲಯ ನಿರ್ಮಾಣಕ್ಕೆ ೨.೭೧ ಕೋಟಿ ರೂ. ಮಂಜೂರು ಕೇಂದ್ರದ ಸ್ವದೇಶ ದರ್ಶನ ಯೋಜನೆಯಡಿ ಗ್ರೀನ್ ಟೂರ್‌ಗೆ ಆದ್ಯತೆ …

3 hours ago

ಜನವರಿ.3ರಿಂದ ನೈಸರ್ಗಿಕ ಕೃಷಿ ಕಾರ್ಯಾಗಾರ

ಹಾಸನ ಜಿಲ್ಲೆ ಹಳೇಬೀಡಿನ ಪುಷ್ಪಗಿರಿ ಮಠದಲ್ಲಿ ಆಯೋಜನೆ: ಡಾ.ಅನಂತರಾವ್ ಮಂಡ್ಯ: ಕರ್ನಾಟಕ ರಾಜ್ಯ ರೈತಸಂಘ ಮತ್ತು ಹಸಿರು ಸೇನೆ ವತಿಯಿಂದ…

3 hours ago

ಅಂಬೇಡ್ಕರ್ ಜೀವಜಲವನ್ನು ಹರಿಯುವಂತೆ ಮಾಡುವುದು ನಮ್ಮ ಕೆಲಸವಾಗಿದೆ

ಕೋಟಿಗಾನಹಳ್ಳಿ ರಾಮಯ್ಯ ಇದು ಕದಡಿದ ನೀರಿನಂತಹ ಕಾಲ. ಈ ಮಬ್ಬಿನ ವಾತಾವರಣದಲ್ಲಿ ಬಹುರೂಪಿ ರಂಗಾಯಣದಲ್ಲಿ ‘ಬಹುರೂಪಿ ಅಂಬೇಡ್ಕರ್’ ಎಂಬ ಆಶಯ…

3 hours ago

ತಾಯಿ ನಂಜನಗೂಡಿನ ನಂಜಿ, ಮಗ ನಿಕೋಲಸ್ ವಿಶ್ವವಿಖ್ಯಾತ ಕ್ಯಾಮೆರಾಮ್ಯಾನ್

ಸ್ಟ್ಯಾನ್ಲಿ ‘ನನ್ನಮ್ಮ ರೋಸ್ಮಂಡ್ ವಾನಿಂಗನ್ ಆಂಗ್ಲ ಮಹಿಳೆಯಾಗಿದ್ದರೂ, ಅವಳು ನಂಜನಗೂಡಿನ ನಂಜಿಯಾಗಿದ್ದಳು. ಬಿಸಿಲ್ ಮಂಟಿ ಗ್ರಾಮಸ್ಥರು ಆಕೆಗೆ ಇಟ್ಟಿದ್ದ ಹೆಸರಾಗಿತ್ತದು.…

3 hours ago

ಉಪಟಳ ನೀಡುತ್ತಿದ್ದ ಚಿರತೆ ಸೆರೆ : ನಿಟ್ಟುಸಿರು ಬಿಟ್ಟ ಜನತೆ

ಕೆ.ಆರ್.ಪೇಟೆ : ತಾಲ್ಲೂಕಿನ ಬೂಕನಕೆರೆ ಹೋಬಳಿಯ ಮುದುಗೆರೆ ಗ್ರಾಮದ ಬಳಿ ರೈತರ ಸಾಕು ಪ್ರಾಣಿಗಳನ್ನು ತಿಂದು ಹಾಕುತ್ತಾ ರೈತರಿಗೆ ನಿತ್ಯ…

13 hours ago