ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ವಾಹನದ ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಸಮೀಪ ಜರುಗಿದೆ.
ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ ( 26) ಎಂಬುವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯಾಗಿದ್ದಾರೆ.
ಪಟ್ಟಣದ ಜಡೇಸ್ವಾಮಿ ಎಂಬವರಿಗೆ ಸೇರಿದ ಲಾರಿ ಮಂಡ್ಯದ ಸಕ್ಕರೆ ಕಾರ್ಖಾನೆಯಿಂದ ಸಕ್ಕರೆ ತುಂಬಿಕೊಂಡು ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಕೇಶಿಫ್ ರಸ್ತೆ ಕಾಮಗಾರಿಗೆ ಬಳಸುತ್ತಿದ್ದ ಟಿಪ್ಪರ್ ನ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟಿಪ್ಪರ್ ಹಾಗೂ ಲಾರಿ ಜಖಂ ಗೊಂಡಿದ್ದು ಟಿಪ್ಪರ್ ವಾಹನದ ಎಡಬದಿಯಲ್ಲಿ ಕುಳಿತಿದ್ದ ಕ್ಲೀನರ್ ಎರಡು ವಾಹನದ ಮಧ್ಯೆ ಸಿಲುಕಿಕೊಂಡಿದ್ದಾನೆ. ನಂತರ ಸಾರ್ವಜನಿಕರು ಸಹಕಾರದಿಂದ ವಾಹನದಿಂದ ರಕ್ಷಿಸಿದ್ದಾರೆ. ಆದರೂ ಸಹ ಕ್ಲೀನರ್ ನ ಎಡ ಕೈ ಕಟ್ಟಾಗಿದ್ದು ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ವಿಧಾನಸಭೆ ಚುನಾವಣೆಯ ನಂತರ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನ ರಾಜಕೀಯದಲ್ಲಿ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಭಾರತೀಯ…
ಹಾಡುಪಾಡು ರಾಮು ಅನುವಾದಿಸಿ ದೇವನೂರ ಮಹಾದೇವ ಸಂಪಾದಿಸಿದ 'ಮಹಾಭಾರತದಿಂದ ಒಂದಿಷ್ಟು ಮೇರುಕೃತಿ' ಬರುವ ಭಾನುವಾರ ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈ ಪುಸ್ತಕಕ್ಕೆ…
ಬಲಿಷ್ಟ ಮಹಿಳೆ, ಸಮೃದ್ದ ಕುಟುಂಬ, ಬಲಿಷ್ಠ ರಾಷ್ಟ್ರ ಎಂಬ ಮಾತು ವಿಯಾಟ್ಟಾಮಿನಲ್ಲಿ ಅಕ್ಷರಶಃ ಸತ್ಯ. ಇತಿಹಾಸದಿಂದ ಇಂದಿನವರೆಗೂ ಅಲ್ಲಿನ ಮಹಿಳೆಯರು…
• ಕುಸುಮ ಆಯರಹಳ್ಳಿ ವೀಕೆಂಡಿನಲ್ಲಿ ಊರಿಗೆ ಬಂದು ಅವನನ್ನು ಮಾತಾಡಿಸಿಕೊಂಡು ಹೋಗುವ ಪ್ರೊಫೆಸರ್ ಧರ್ಮರಾಜ್ಗೆ ಊರಲ್ಲಿ ಜನವೇ ಕಾಣದಿದ್ದುದು ಅಚ್ಚರಿಯಾಯ್ತು.…
ಹೊಸದಿಲ್ಲಿ : ಮಧ್ಯಪ್ರಾಚ್ಯ ಬಿಕ್ಕಟ್ಟು ಆರಂಭವಾದ ಬಳಿಕ ಕಳೆದ 3 ತಿಂಗಳ ಅವಧಿಯಲ್ಲಿ 2 ನೇ ಬಾರಿಗೆ ಗೃಹಬಳಕೆ ಎಲ್…