ಹನೂರು : ರಸ್ತೆ ಬದಿಯಲ್ಲಿ ನಿಂತಿದ್ದ ಲಾರಿಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ ಟಿಪ್ಪರ್ ವಾಹನದ ಕ್ಲೀನರ್ ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲು ಮಾಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಹುಲಸುಗುಡ್ಡೆ ಸಮೀಪ ಜರುಗಿದೆ.
ಧಾರವಾಡದ ಸೆಳವಾಡಿ ಗ್ರಾಮದ ಮೂಲದ ಶ್ರೀಶೈಲ್ ( 26) ಎಂಬುವರು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ವ್ಯಕ್ತಿಯಾಗಿದ್ದಾರೆ.
ಪಟ್ಟಣದ ಜಡೇಸ್ವಾಮಿ ಎಂಬವರಿಗೆ ಸೇರಿದ ಲಾರಿ ಮಂಡ್ಯದ ಸಕ್ಕರೆ ಕಾರ್ಖಾನೆಯಿಂದ ಸಕ್ಕರೆ ತುಂಬಿಕೊಂಡು ಬರುತ್ತಿದ್ದ ವೇಳೆ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದಾರೆ. ಈ ವೇಳೆ ಕೇಶಿಫ್ ರಸ್ತೆ ಕಾಮಗಾರಿಗೆ ಬಳಸುತ್ತಿದ್ದ ಟಿಪ್ಪರ್ ನ ಚಾಲಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದ್ದಾನೆ. ಪರಿಣಾಮ ಟಿಪ್ಪರ್ ಹಾಗೂ ಲಾರಿ ಜಖಂ ಗೊಂಡಿದ್ದು ಟಿಪ್ಪರ್ ವಾಹನದ ಎಡಬದಿಯಲ್ಲಿ ಕುಳಿತಿದ್ದ ಕ್ಲೀನರ್ ಎರಡು ವಾಹನದ ಮಧ್ಯೆ ಸಿಲುಕಿಕೊಂಡಿದ್ದಾನೆ. ನಂತರ ಸಾರ್ವಜನಿಕರು ಸಹಕಾರದಿಂದ ವಾಹನದಿಂದ ರಕ್ಷಿಸಿದ್ದಾರೆ. ಆದರೂ ಸಹ ಕ್ಲೀನರ್ ನ ಎಡ ಕೈ ಕಟ್ಟಾಗಿದ್ದು ತೀವ್ರ ಗಾಯಗೊಂಡಿದ್ದಾರೆ. ತಕ್ಷಣ ಗಾಯಾಳುವನ್ನು ಹೋಲಿ ಕ್ರಾಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…