ಜಿಲ್ಲೆಗಳು

ಕಳೆದು ಹೋಗಿದ್ದ ಚಿನ್ನದ ಸರ ಹಿಂದಿರುಗಿಸಿ; ಮಾನವೀಯತೆ ಮೆರೆದ ಮಹಿಳೆ

ಚಾಮರಾಜನಗರ: ಮದುವೆ ಮನೆಯಲ್ಲಿ ಕಳೆದುಕೊಂಡಿದ್ದ 42 ಗ್ರಾಂ ಚಿನ್ನದ ಸರವನ್ನು ರಾಮಸಮುದ್ರ ಬಡಾವಣೆಯ ನಿರ್ಮಲಾ ನಾಗರಾಜು ಎಂಬ ಮಹಿಳೆ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ನಗರದ ರಾಮಸಮುದ್ರ ಬಡಾವಣೆಯ ನಿವಾಸಿ ಆರೋಗ್ಯ ಇಲಾಖೆಯ ರವಿ ಮತ್ತು ಯು.ಬಿ. ಮಹದೇವಮ್ಮ ಅವರ ಪುತ್ರಿ ಡಾ. ಅನ್ನಪೂರ್ಣ ಮತ್ತು ಡಾ. ಗುರುಪ್ರಸಾದ್ ಅವರ ವಿವಾಹದ ಸಂದರ್ಭದಲ್ಲಿ ರಾಮಸಮುದ್ರದವರೇ ಆದ ಬ್ರಿಜೇಶ್ ಕುಮಾರ್ ( ಬಾಂಬೆ) ಪತ್ನಿ ಭಾನುಮತಿ ಅವರ, 42 ಗ್ರಾಂ ತೂಕದ ಸುಮಾರು ೨.೩೦ ಲಕ್ಷ ಮೌಲ್ಯದ ಚಿನ್ನದ ಸರವನ್ನು ಜನಜಂಗುಳಿ ನಡುವೆ ಕಳೆದುಕೊಂಡಿದ್ದರು.

ಚಿನ್ನದ ಸರ ಕಳೆದುಕೊಂಡ ಮಹಿಳೆ ಭಾನುಮತಿ ಆತಂಕಕ್ಕೆ ಒಳಗಾಗಿ ಕಣ್ಣೀರು ಸುರಿಸುತ್ತಾ ಕಳೆದುಕೊಂಡ ಚಿನ್ನದ ಸರದ ಹುಡುಕಾಟ ನಡೆಸಿದ್ದರು. ಈ ವೇಳೆ ಹುಡುಕಾಟ ಗಮನಿಸಿದ ರಾಮಸಮುದ್ರದ ಗೃಹಿಣಿ ನಿರ್ಮಲಾ ನಾಗರಾಜು ಅವರು ಚಿನ್ನದ ಸರ ನನಗೆ ಸಿಕ್ಕಿದೆ ಎಂದು ಭಾನುಮತಿ ಅವರಿಗೆ ಹಿಂದಿರುಗಿಸಿದರು. ಮದುವೆ ಮನೆಯಲ್ಲಿದ್ದವರು ನಿರ್ಮಲಾ ಅವರ ಪ್ರಾಮಾಣಿಕತೆಯನ್ನು ಮೆಚ್ಚಿದ್ದಾರೆ.

andolanait

Recent Posts

ಮೈಸೂರು | ಗುಂಡೇಟಿನಿಂದ ಚಿರತೆ ಸಾವು ; ತನಿಖೆಗೆ ಈಶ್ವರ ಖಂಡ್ರೆ ಆದೇಶ

ಮೈಸೂರು : ಹುಣಸೂರು ವಿಭಾಗದ ಪಿರಿಯಾಪಟ್ಟಣ ವ್ಯಾಪ್ತಿಯ ಗುಳ್ಳೆದಹಳ್ಳ ರಾಜ್ಯ ಅರಣ್ಯದಿಂದ 2 ಕಿ.ಮೀ ದೂರದಲ್ಲಿರುವ ಕೊಪ್ಪ ವಿಭಾಗದಲ್ಲಿ ಗುಂಡೇಟಿನಿಂದ…

2 hours ago

ಶೀಘ್ರದಲ್ಲೇ ದ್ವಿತೀಯ ಪಿಯುಸಿ ಫಲಿತಾಂಶ : ಡಿಜಿಲಾಕರ್‌ನಲ್ಲೂ ಲಭ್ಯ

ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…

3 hours ago

ಏ.7ರಿಂದ ಮೂರು ದಿನ ಮಳೆ, ಮೈಸೂರಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…

3 hours ago

ಟ್ರಂಪ್ ಅಂತಿಮ ಗಡುವು ; ಪ್ರತಿದಾಳಿ ಎಚ್ಚರಿಕೆ ನೀಡಿದ ಇರಾನ್‌

ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…

4 hours ago

ಕಸ್ಟಡಿ ಸಾವು | 9 ಮಂದಿ ಪೊಲೀಸರಿಗೆ ಮರಣದಂಡನೆ ; ಮಧುರೈ ಕೋರ್ಟ್‌ ಮಹತ್ವದ ತೀರ್ಪು

ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…

4 hours ago

ಇಂಡಿಯಾ ಸ್ಕಿಲ್ಸ್ 2025-26 ರಾಷ್ಟ್ರೀಯ ಸ್ಪರ್ಧೆ : ಕರ್ನಾಟಕಕ್ಕೆ 3ನೇ ಸ್ಥಾನ

ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…

4 hours ago