ಜಿಲ್ಲೆಗಳು

ಕಳೆದು ಹೋಗಿದ್ದ ಚಿನ್ನದ ಸರ ಹಿಂದಿರುಗಿಸಿ; ಮಾನವೀಯತೆ ಮೆರೆದ ಮಹಿಳೆ

ಚಾಮರಾಜನಗರ: ಮದುವೆ ಮನೆಯಲ್ಲಿ ಕಳೆದುಕೊಂಡಿದ್ದ 42 ಗ್ರಾಂ ಚಿನ್ನದ ಸರವನ್ನು ರಾಮಸಮುದ್ರ ಬಡಾವಣೆಯ ನಿರ್ಮಲಾ ನಾಗರಾಜು ಎಂಬ ಮಹಿಳೆ ಮಾಲೀಕರಿಗೆ ಹಿಂದಿರುಗಿಸಿ ಮಾನವೀಯತೆ ಮೆರೆದಿದ್ದಾರೆ.

ನಗರದ ರಾಮಸಮುದ್ರ ಬಡಾವಣೆಯ ನಿವಾಸಿ ಆರೋಗ್ಯ ಇಲಾಖೆಯ ರವಿ ಮತ್ತು ಯು.ಬಿ. ಮಹದೇವಮ್ಮ ಅವರ ಪುತ್ರಿ ಡಾ. ಅನ್ನಪೂರ್ಣ ಮತ್ತು ಡಾ. ಗುರುಪ್ರಸಾದ್ ಅವರ ವಿವಾಹದ ಸಂದರ್ಭದಲ್ಲಿ ರಾಮಸಮುದ್ರದವರೇ ಆದ ಬ್ರಿಜೇಶ್ ಕುಮಾರ್ ( ಬಾಂಬೆ) ಪತ್ನಿ ಭಾನುಮತಿ ಅವರ, 42 ಗ್ರಾಂ ತೂಕದ ಸುಮಾರು ೨.೩೦ ಲಕ್ಷ ಮೌಲ್ಯದ ಚಿನ್ನದ ಸರವನ್ನು ಜನಜಂಗುಳಿ ನಡುವೆ ಕಳೆದುಕೊಂಡಿದ್ದರು.

ಚಿನ್ನದ ಸರ ಕಳೆದುಕೊಂಡ ಮಹಿಳೆ ಭಾನುಮತಿ ಆತಂಕಕ್ಕೆ ಒಳಗಾಗಿ ಕಣ್ಣೀರು ಸುರಿಸುತ್ತಾ ಕಳೆದುಕೊಂಡ ಚಿನ್ನದ ಸರದ ಹುಡುಕಾಟ ನಡೆಸಿದ್ದರು. ಈ ವೇಳೆ ಹುಡುಕಾಟ ಗಮನಿಸಿದ ರಾಮಸಮುದ್ರದ ಗೃಹಿಣಿ ನಿರ್ಮಲಾ ನಾಗರಾಜು ಅವರು ಚಿನ್ನದ ಸರ ನನಗೆ ಸಿಕ್ಕಿದೆ ಎಂದು ಭಾನುಮತಿ ಅವರಿಗೆ ಹಿಂದಿರುಗಿಸಿದರು. ಮದುವೆ ಮನೆಯಲ್ಲಿದ್ದವರು ನಿರ್ಮಲಾ ಅವರ ಪ್ರಾಮಾಣಿಕತೆಯನ್ನು ಮೆಚ್ಚಿದ್ದಾರೆ.

andolanait

Recent Posts

ಶಿಕ್ಷಣ ವ್ಯವಸ್ಥೆ ಸುಧಾರಣೆಗೆ ಸರ್ಕಾರ ಮಣಿಸಿದ ಜೆನ್ ಝೀ ಚಳವಳಿ

ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…

9 hours ago

ಸಂಪುಟ ವಿಸ್ತರಣೆ ವಿಳಂಬ; ಡಿಕೆಶಿ ಅಸಮಾಧಾನ

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…

9 hours ago

ಕೃಷಿಗೆ ನೀರಿಲ್ಲ ಎಂಬ ಆದೇಶದಿಂದ ರೈತರು ಕಂಗಾಲು

ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…

9 hours ago

ರಸ್ತೆ ಬದಿ ಅಗೆದು ಹಾಗೆಯೇ ಬಿಟ್ಟ ಗುತ್ತಿಗೆದಾರರು

ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್‌ಎನ್‌ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್‌ಎನ್‌ಎಲ್‌ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…

9 hours ago

ಎಕ್ಸ್ ಬಿಟ್ಟು ಇನ್‌ಸ್ಟಾ ಹಿಡಿದ ರಾಜಕಾರಣ : ಮೋದಿಗೆ ಜೆನ್-ಝೀ ಕಾಟ

ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್‌ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್‌ಗಳು ಈಗ ಇನ್‌ಸ್ಟಾಗ್ರಾಂ…

22 hours ago