ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಚಂದ್ರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಂದು ಸಂಜೆ ೪.೩೦ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಡಾ.ಅರ್ಪಿತಾ ಸಿಂಹ, ಮಹಾಪೌರ ಶಿವಕುಮಾರ್, ನಗರಪಾಲಿಕೆ ಸದಸ್ಯ ಎಂ.ಡಿ.ಆಗರಾಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಟಕ ನಿರ್ದೇಶಕ ರಾಜಪ್ಪ, ವಯೋಲಿನ್ ಕಲಾವಿದರಾದ ಎಚ್.ಕೆ.ನರಸಿಂಹ ಮೂರ್ತಿ, ಎಚ್.ಎಸ್.ತಾಂಡವಮೂರ್ತಿ, ಡೋಲು ವಿದ್ವಾನ್ ಎಸ್.ಪುಟ್ಟರಾಜು, ವೀಣಾ ವಾದಕಿ ಎಸ್.ರಾಜಲಕ್ಷ್ಮೀ, ಮೃದಂಗ ವಿದ್ವಾನ್ ವಿ.ಆರ್.ರಾಜಗೋಪಾಲ್, ಪಿಟೀಲು ವಾದಕ ಡಿ.ನಾರಾಯಣ, ಕ್ಲಾರಿಯೋ ನೆಟ್ ವಾದಕ ಡಾ.ಸಿ.ಪಿ.ಕೃಷ್ಣಮೂರ್ತಿ ಅವರುಗಳನ್ನು ಸನ್ಮಾನಿಸಲಾಗುವುದು.
ಬಳಿಕ ಆಕಾಶವಾಣಿ ಕಲಾವಿದರಾದ ಎಂ.ಎ.ಕೃಷ್ಣಮೂರ್ತಿ ಮತ್ತು ಜಯಲಕ್ಷ್ಮೀ ಕುಟುಂಬ ವರ್ಗದ ಎಂ.ಕೆ.ವಾಸವಿ ಹಾಗೂ ಕೆ.ಎಂ.ಅರ್ಪಿತ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ತಿ.ನರಸೀಪುರ ತಾಲ್ಲೂಕು ಕಿರಗಸೂರು ಗ್ರಾಮದ ನಾಟಕ ನಿರ್ದೇಶಕ ರಾಜಪ್ಪ ಮತ್ತು ವೃಂದದವರು ರಂಗಗೀತೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಟ್ರಸ್ಟ್ನ ಅಧ್ಯಕ್ಷ ಎ.ಕಾಂತರಾಜು, ಖಜಾಂಚಿ ಬಿ.ಆರ್.ಜ್ಯೋತಿ, ನಿರ್ದೇಶಕರುಗಳಾದ ಕೆ.ಮಂಜುನಾಥ್, ಎ.ಸುಗುಣ ಕಾಂತರಾಜು, ಎಂ.ಎಸ್.ಲಕ್ಷ್ಮೀಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…