ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಚಂದ್ರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಂದು ಸಂಜೆ ೪.೩೦ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಡಾ.ಅರ್ಪಿತಾ ಸಿಂಹ, ಮಹಾಪೌರ ಶಿವಕುಮಾರ್, ನಗರಪಾಲಿಕೆ ಸದಸ್ಯ ಎಂ.ಡಿ.ಆಗರಾಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಟಕ ನಿರ್ದೇಶಕ ರಾಜಪ್ಪ, ವಯೋಲಿನ್ ಕಲಾವಿದರಾದ ಎಚ್.ಕೆ.ನರಸಿಂಹ ಮೂರ್ತಿ, ಎಚ್.ಎಸ್.ತಾಂಡವಮೂರ್ತಿ, ಡೋಲು ವಿದ್ವಾನ್ ಎಸ್.ಪುಟ್ಟರಾಜು, ವೀಣಾ ವಾದಕಿ ಎಸ್.ರಾಜಲಕ್ಷ್ಮೀ, ಮೃದಂಗ ವಿದ್ವಾನ್ ವಿ.ಆರ್.ರಾಜಗೋಪಾಲ್, ಪಿಟೀಲು ವಾದಕ ಡಿ.ನಾರಾಯಣ, ಕ್ಲಾರಿಯೋ ನೆಟ್ ವಾದಕ ಡಾ.ಸಿ.ಪಿ.ಕೃಷ್ಣಮೂರ್ತಿ ಅವರುಗಳನ್ನು ಸನ್ಮಾನಿಸಲಾಗುವುದು.
ಬಳಿಕ ಆಕಾಶವಾಣಿ ಕಲಾವಿದರಾದ ಎಂ.ಎ.ಕೃಷ್ಣಮೂರ್ತಿ ಮತ್ತು ಜಯಲಕ್ಷ್ಮೀ ಕುಟುಂಬ ವರ್ಗದ ಎಂ.ಕೆ.ವಾಸವಿ ಹಾಗೂ ಕೆ.ಎಂ.ಅರ್ಪಿತ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ತಿ.ನರಸೀಪುರ ತಾಲ್ಲೂಕು ಕಿರಗಸೂರು ಗ್ರಾಮದ ನಾಟಕ ನಿರ್ದೇಶಕ ರಾಜಪ್ಪ ಮತ್ತು ವೃಂದದವರು ರಂಗಗೀತೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಟ್ರಸ್ಟ್ನ ಅಧ್ಯಕ್ಷ ಎ.ಕಾಂತರಾಜು, ಖಜಾಂಚಿ ಬಿ.ಆರ್.ಜ್ಯೋತಿ, ನಿರ್ದೇಶಕರುಗಳಾದ ಕೆ.ಮಂಜುನಾಥ್, ಎ.ಸುಗುಣ ಕಾಂತರಾಜು, ಎಂ.ಎಸ್.ಲಕ್ಷ್ಮೀಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…
ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…
ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…
ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…
ಬೆಳಗಾವಿ : ದ್ವೇಷ ಭಾಷಣಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಕಟ್ಟು ನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದ್ದು, ಈ…
ಮೈಸೂರು : ಮೈಸೂರು ವಿಶ್ವವಿದ್ಯಾನಿಲಯಕ್ಕೆ ಫ್ರಾನ್ಸ್ ದೇಶದ ರಾಯಭಾರಿಗಳ ನಿಯೋಗ ಭೇಟಿ ನೀಡಿ ಫ್ರೆಂಚ್ ಭಾಷೆ ವಿಭಾಗವನ್ನು ಮರು ಆರಂಭಿಸುವ…