ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಚಂದ್ರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಂದು ಸಂಜೆ ೪.೩೦ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಡಾ.ಅರ್ಪಿತಾ ಸಿಂಹ, ಮಹಾಪೌರ ಶಿವಕುಮಾರ್, ನಗರಪಾಲಿಕೆ ಸದಸ್ಯ ಎಂ.ಡಿ.ಆಗರಾಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಟಕ ನಿರ್ದೇಶಕ ರಾಜಪ್ಪ, ವಯೋಲಿನ್ ಕಲಾವಿದರಾದ ಎಚ್.ಕೆ.ನರಸಿಂಹ ಮೂರ್ತಿ, ಎಚ್.ಎಸ್.ತಾಂಡವಮೂರ್ತಿ, ಡೋಲು ವಿದ್ವಾನ್ ಎಸ್.ಪುಟ್ಟರಾಜು, ವೀಣಾ ವಾದಕಿ ಎಸ್.ರಾಜಲಕ್ಷ್ಮೀ, ಮೃದಂಗ ವಿದ್ವಾನ್ ವಿ.ಆರ್.ರಾಜಗೋಪಾಲ್, ಪಿಟೀಲು ವಾದಕ ಡಿ.ನಾರಾಯಣ, ಕ್ಲಾರಿಯೋ ನೆಟ್ ವಾದಕ ಡಾ.ಸಿ.ಪಿ.ಕೃಷ್ಣಮೂರ್ತಿ ಅವರುಗಳನ್ನು ಸನ್ಮಾನಿಸಲಾಗುವುದು.
ಬಳಿಕ ಆಕಾಶವಾಣಿ ಕಲಾವಿದರಾದ ಎಂ.ಎ.ಕೃಷ್ಣಮೂರ್ತಿ ಮತ್ತು ಜಯಲಕ್ಷ್ಮೀ ಕುಟುಂಬ ವರ್ಗದ ಎಂ.ಕೆ.ವಾಸವಿ ಹಾಗೂ ಕೆ.ಎಂ.ಅರ್ಪಿತ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ತಿ.ನರಸೀಪುರ ತಾಲ್ಲೂಕು ಕಿರಗಸೂರು ಗ್ರಾಮದ ನಾಟಕ ನಿರ್ದೇಶಕ ರಾಜಪ್ಪ ಮತ್ತು ವೃಂದದವರು ರಂಗಗೀತೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಟ್ರಸ್ಟ್ನ ಅಧ್ಯಕ್ಷ ಎ.ಕಾಂತರಾಜು, ಖಜಾಂಚಿ ಬಿ.ಆರ್.ಜ್ಯೋತಿ, ನಿರ್ದೇಶಕರುಗಳಾದ ಕೆ.ಮಂಜುನಾಥ್, ಎ.ಸುಗುಣ ಕಾಂತರಾಜು, ಎಂ.ಎಸ್.ಲಕ್ಷ್ಮೀಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…
ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…
ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…
ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…
ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…
ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…