ಮೈಸೂರು: ನಗರದ ಎಂ.ಬಿ.ಅನಂತಸ್ವಾಮಿ ಸಾಂಸ್ಕೃತಿಕ ಮತ್ತು ಸೇವಾ ಟ್ರಸ್ಟ್ನ ಪ್ರಥಮ ವರ್ಷದ ವಾರ್ಷಿಕೋತ್ಸವ ಪ್ರಯುಕ್ತ ಡಿ.೧೨ರಂದು ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ನ ಕಾರ್ಯದರ್ಶಿ ಚಂದ್ರು ತಿಳಿಸಿದರು.
ಜಿಲ್ಲಾ ಪತ್ರಕರ್ತರ ಭವನದಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇರ್ವಿನ್ ರಸ್ತೆಯ ಪಂಚಮುಖಿ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಅಂದು ಸಂಜೆ ೪.೩೦ಕ್ಕೆ ನಡೆಯುವ ವಾರ್ಷಿಕೋತ್ಸವ ಸಮಾರಂಭದಲ್ಲಿ ಶಾಸಕರಾದ ಎಲ್.ನಾಗೇಂದ್ರ, ಜಿ.ಟಿ.ದೇವೇಗೌಡ, ಎಸ್.ಎ.ರಾಮದಾಸ್, ಡಾ.ಅರ್ಪಿತಾ ಸಿಂಹ, ಮಹಾಪೌರ ಶಿವಕುಮಾರ್, ನಗರಪಾಲಿಕೆ ಸದಸ್ಯ ಎಂ.ಡಿ.ಆಗರಾಜು ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಸುದರ್ಶನ್ ಅವರುಗಳು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
ಇದೇ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ನಾಟಕ ನಿರ್ದೇಶಕ ರಾಜಪ್ಪ, ವಯೋಲಿನ್ ಕಲಾವಿದರಾದ ಎಚ್.ಕೆ.ನರಸಿಂಹ ಮೂರ್ತಿ, ಎಚ್.ಎಸ್.ತಾಂಡವಮೂರ್ತಿ, ಡೋಲು ವಿದ್ವಾನ್ ಎಸ್.ಪುಟ್ಟರಾಜು, ವೀಣಾ ವಾದಕಿ ಎಸ್.ರಾಜಲಕ್ಷ್ಮೀ, ಮೃದಂಗ ವಿದ್ವಾನ್ ವಿ.ಆರ್.ರಾಜಗೋಪಾಲ್, ಪಿಟೀಲು ವಾದಕ ಡಿ.ನಾರಾಯಣ, ಕ್ಲಾರಿಯೋ ನೆಟ್ ವಾದಕ ಡಾ.ಸಿ.ಪಿ.ಕೃಷ್ಣಮೂರ್ತಿ ಅವರುಗಳನ್ನು ಸನ್ಮಾನಿಸಲಾಗುವುದು.
ಬಳಿಕ ಆಕಾಶವಾಣಿ ಕಲಾವಿದರಾದ ಎಂ.ಎ.ಕೃಷ್ಣಮೂರ್ತಿ ಮತ್ತು ಜಯಲಕ್ಷ್ಮೀ ಕುಟುಂಬ ವರ್ಗದ ಎಂ.ಕೆ.ವಾಸವಿ ಹಾಗೂ ಕೆ.ಎಂ.ಅರ್ಪಿತ ಸುಗಮ ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ತಿ.ನರಸೀಪುರ ತಾಲ್ಲೂಕು ಕಿರಗಸೂರು ಗ್ರಾಮದ ನಾಟಕ ನಿರ್ದೇಶಕ ರಾಜಪ್ಪ ಮತ್ತು ವೃಂದದವರು ರಂಗಗೀತೆ ಪ್ರಸ್ತುತ ಪಡಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಟ್ರಸ್ಟ್ನ ಅಧ್ಯಕ್ಷ ಎ.ಕಾಂತರಾಜು, ಖಜಾಂಚಿ ಬಿ.ಆರ್.ಜ್ಯೋತಿ, ನಿರ್ದೇಶಕರುಗಳಾದ ಕೆ.ಮಂಜುನಾಥ್, ಎ.ಸುಗುಣ ಕಾಂತರಾಜು, ಎಂ.ಎಸ್.ಲಕ್ಷ್ಮೀಕಾಂತ್ ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…