ಜಿಲ್ಲೆಗಳು

‘ತಾಕತ್ ಇದ್ದರೆ ಗೋಪುರ ಮಾದರಿ ತಂಗುದಾಣ ನೆಲಸಮಗೊಳಿಸಿ’

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ

ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ ಅವರಿಗೆ ತಾಕತ್ತು, ಧಮ್ ಇದ್ದಲ್ಲಿ ಊಟಿ ರಸ್ತೆಯಲ್ಲಿ ಗೋಪುರ ಮಾದರಿಯ ಬಸ್ ತಂಗುದಾಣವನ್ನು ನೆಲಸಮಗೊಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಸವಾಲು ಹಾಕಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಂಟು ವರ್ಷಗಳಲ್ಲಿ ಜನರಿಗೆ ಕೊಟ್ಟ ಮಾತನ್ನೂ ಉಳಿಸಿಕೊಳ್ಳದೆ ಸುಳ್ಳು ಹೇಳಿಕೊಂಡು ಕಾಲಾಹರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಪ್ರತಾಪ್ ಸಿಂಹ ಮೊದಲಿಗರು. ನಾಗನಹಳ್ಳಿ ಬಳಿ ಸ್ಯಾಟಲೈಟ್ ರೈಲ್ವೆ ಟರ್ಮಿನಲ್, ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ, ಉಂಡುವಾಡಿ ಕುಡಿಯುವ ನೀರಿನ ಯೋಜನೆ, ಕುಶಾಲನಗರಕ್ಕೆ ರೈಲು, ದಸರಾ ಒಳಗೆ ದಶಪಥ ರಸ್ತೆ ಬರಿ ಮಾತಿನಲ್ಲೇ ಇದೆ ಎಂದು ಟೀಕಿಸಿದರು.
ಶಾಸಕ ಎಸ್.ಎ.ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಈ ಇಬ್ಬರ ನಡುವಿನ ವಾರ್‌ನಲ್ಲಿ ಮೈಸೂರಿನ ಮರ್ಯಾದೆ ತೆಗೆಯುತ್ತಿದ್ದಾರೆ. ಬಸ್ ತಂಗುದಾಣಕ್ಕೆ ಅಡ್ಡಿಪಡಿಸಿ ದೊಡ್ಡ ವಿವಾದ ಮಾಡಿರುವ ಸಂಸದರೇ ನಿಮ್ಮ ಮನೆಯಿಂದ ದುಡ್ಡು ತಂದು ನಿರ್ಮಿಸಿದ್ದೀರಾ? ನಗರಾಭಿವೃದ್ಧಿ ಇಲಾಖೆ ನಿಯಮಗಳ ಪ್ರಕಾರ ಗೋಪುರ ಮಾದರಿಯ ಕಟ್ಟಡಗಳಿಗೆ ಅನುಮತಿ ಪಡೆಯಬೇಕಿಲ್ಲ. ಹೀಗಿದ್ದರೂ, ನಗರಪಾಲಿಕೆಯಿಂದ ಅನುಮತಿ ಪಡೆಯಬೇಕೆಂದು ಹೇಳಿರುವುದು ಹಾಸ್ಯಾಸ್ಪದ. ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಮಾತನಾಡುವುದನ್ನು ನಿಲ್ಲಿಸದಿದ್ದರೆ ಸಂಸದರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಪೊಲೀಸ್ ಠಾಣೆಗೂ ದೂರು ನೀಡಲಾಗುವುದು ಎಚ್ಚರಿಸಿದರು.
ಮೈಸೂರಿನಲ್ಲೂ ಬಿಜೆಪಿ ನೇಮಿಸಿರುವ ವ್ಯಕ್ತಿಗಳು ಮತದಾರರ ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ವರದಿ ಬಂದಿರುವುದರಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ದೂರು ನೀಡಲಾಗುವುದು.
ಪದವಿ ವೈದ್ಯಕೀಯ ಸಮಾಜ ಶಾಸ್ತ್ರದ ಪಠ್ಯದಲ್ಲಿ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಸ್ವಮೂತ್ರ ಕುಡಿದರೆ ಗುಣವಾಗಲಿದೆ ಅಂತ ಹೇಳಿರುವುದು ಅವೈಜ್ಞಾನಿಕ ಮತ್ತು ಮೂರ್ಖತನದಿಂದ ಕೂಡಿದೆ. ಆರ್‌ಎಸ್‌ಎಸ್ ಪ್ರೇರಿತ ವಿಚಾರಧಾರೆಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಒಂದು ವಾರದೊಳಗೆ ಮರು ಮುದ್ರಣ ಮಾಡಿ ಹಂಚಬೇಕು ಎಂದು ಒತ್ತಾಯಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಪಂ ವಾಜಿ ಅಧ್ಯಕ್ಷ ಬಿ.ಎಂ.ರಾಮು, ಸೇವಾದಳದ ಅಧ್ಯಕ್ಷ ಗಿರೀಶ್ ನಾುಂಕ್, ವಕ್ತಾರ ಕೆ.ಮಹೇಶ್ ಮತ್ತಿತರರು ಹಾಜರಿದ್ದರು.


ಪೊಲೀಸರನ್ನು ಮುಂದಿಟ್ಟುಕೊಂಡು ವೇದಿಕೆಯಲ್ಲಿ ಭಾಷಣ ಮಾಡುವರು ಪುಕ್ಕಲರು. ಚಕ್ರವರ್ತಿ ಸೂಲಿಬೆಲೆಯಂತಹ ಪುಕ್ಕಲರ ಬಗ್ಗೆ ಪ್ರತಿಕ್ರಿಯೆ ಕೊಡಬಾರದು. ಅಡ್ಡಂಡ ಕಾರ್ಯಪ್ಪ ಸಾಂಸ್ಕೃತಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

-ಎಂ.ಲಕ್ಷ್ಮಣ್

andolanait

Recent Posts

ಕೊಡಗಿನಲ್ಲಿ ರಶ್ಮಿಕಾ-ವಿಜಯ್‌ ಡಿನ್ನರ್‌ ಪಾರ್ಟಿ

ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…

45 mins ago

ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಜಯಮೃತ್ಯುಂಜಯ ಸ್ವಾಮೀಜಿ ವಿರುದ್ಧ ದೂರು

ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…

1 hour ago

ಏಪ್ರಿಲ್.‌9ರಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟ ಸಾಧ್ಯತೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…

2 hours ago

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ…

3 hours ago

ಏಪ್ರಿಲ್‌ನಿಂದ ವೇತನ ಪರಿಷ್ಕರಣೆಗೆ ಒಪ್ಪಿದರೂ ತಿರಸ್ಕಾರ: ಮತ್ತೆ ಪ್ರತಿಭಟನೆಗೆ ಮುಂದಾದ ಸಾರಿಗೆ ನೌಕರರು

ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…

3 hours ago

ಮೈಸೂರು: ಲೋಕೋಪಯೋಗಿ ಇಲಾಖೆ ಎಇಇ ರೇವನ್‌ ಕುಮಾರ್ ಮನೆ ಮೇಲೆ ಲೋಕಾಯುಕ್ತ ದಾಳಿ

ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್‌ ಕುಮಾರ್‌ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…

3 hours ago