ಜಿಲ್ಲೆಗಳು

‘ತಾಕತ್ ಇದ್ದರೆ ಗೋಪುರ ಮಾದರಿ ತಂಗುದಾಣ ನೆಲಸಮಗೊಳಿಸಿ’

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ

ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ ಅವರಿಗೆ ತಾಕತ್ತು, ಧಮ್ ಇದ್ದಲ್ಲಿ ಊಟಿ ರಸ್ತೆಯಲ್ಲಿ ಗೋಪುರ ಮಾದರಿಯ ಬಸ್ ತಂಗುದಾಣವನ್ನು ನೆಲಸಮಗೊಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಸವಾಲು ಹಾಕಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಂಟು ವರ್ಷಗಳಲ್ಲಿ ಜನರಿಗೆ ಕೊಟ್ಟ ಮಾತನ್ನೂ ಉಳಿಸಿಕೊಳ್ಳದೆ ಸುಳ್ಳು ಹೇಳಿಕೊಂಡು ಕಾಲಾಹರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಪ್ರತಾಪ್ ಸಿಂಹ ಮೊದಲಿಗರು. ನಾಗನಹಳ್ಳಿ ಬಳಿ ಸ್ಯಾಟಲೈಟ್ ರೈಲ್ವೆ ಟರ್ಮಿನಲ್, ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ, ಉಂಡುವಾಡಿ ಕುಡಿಯುವ ನೀರಿನ ಯೋಜನೆ, ಕುಶಾಲನಗರಕ್ಕೆ ರೈಲು, ದಸರಾ ಒಳಗೆ ದಶಪಥ ರಸ್ತೆ ಬರಿ ಮಾತಿನಲ್ಲೇ ಇದೆ ಎಂದು ಟೀಕಿಸಿದರು.
ಶಾಸಕ ಎಸ್.ಎ.ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಈ ಇಬ್ಬರ ನಡುವಿನ ವಾರ್‌ನಲ್ಲಿ ಮೈಸೂರಿನ ಮರ್ಯಾದೆ ತೆಗೆಯುತ್ತಿದ್ದಾರೆ. ಬಸ್ ತಂಗುದಾಣಕ್ಕೆ ಅಡ್ಡಿಪಡಿಸಿ ದೊಡ್ಡ ವಿವಾದ ಮಾಡಿರುವ ಸಂಸದರೇ ನಿಮ್ಮ ಮನೆಯಿಂದ ದುಡ್ಡು ತಂದು ನಿರ್ಮಿಸಿದ್ದೀರಾ? ನಗರಾಭಿವೃದ್ಧಿ ಇಲಾಖೆ ನಿಯಮಗಳ ಪ್ರಕಾರ ಗೋಪುರ ಮಾದರಿಯ ಕಟ್ಟಡಗಳಿಗೆ ಅನುಮತಿ ಪಡೆಯಬೇಕಿಲ್ಲ. ಹೀಗಿದ್ದರೂ, ನಗರಪಾಲಿಕೆಯಿಂದ ಅನುಮತಿ ಪಡೆಯಬೇಕೆಂದು ಹೇಳಿರುವುದು ಹಾಸ್ಯಾಸ್ಪದ. ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಮಾತನಾಡುವುದನ್ನು ನಿಲ್ಲಿಸದಿದ್ದರೆ ಸಂಸದರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಪೊಲೀಸ್ ಠಾಣೆಗೂ ದೂರು ನೀಡಲಾಗುವುದು ಎಚ್ಚರಿಸಿದರು.
ಮೈಸೂರಿನಲ್ಲೂ ಬಿಜೆಪಿ ನೇಮಿಸಿರುವ ವ್ಯಕ್ತಿಗಳು ಮತದಾರರ ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ವರದಿ ಬಂದಿರುವುದರಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ದೂರು ನೀಡಲಾಗುವುದು.
ಪದವಿ ವೈದ್ಯಕೀಯ ಸಮಾಜ ಶಾಸ್ತ್ರದ ಪಠ್ಯದಲ್ಲಿ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಸ್ವಮೂತ್ರ ಕುಡಿದರೆ ಗುಣವಾಗಲಿದೆ ಅಂತ ಹೇಳಿರುವುದು ಅವೈಜ್ಞಾನಿಕ ಮತ್ತು ಮೂರ್ಖತನದಿಂದ ಕೂಡಿದೆ. ಆರ್‌ಎಸ್‌ಎಸ್ ಪ್ರೇರಿತ ವಿಚಾರಧಾರೆಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಒಂದು ವಾರದೊಳಗೆ ಮರು ಮುದ್ರಣ ಮಾಡಿ ಹಂಚಬೇಕು ಎಂದು ಒತ್ತಾಯಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಪಂ ವಾಜಿ ಅಧ್ಯಕ್ಷ ಬಿ.ಎಂ.ರಾಮು, ಸೇವಾದಳದ ಅಧ್ಯಕ್ಷ ಗಿರೀಶ್ ನಾುಂಕ್, ವಕ್ತಾರ ಕೆ.ಮಹೇಶ್ ಮತ್ತಿತರರು ಹಾಜರಿದ್ದರು.


ಪೊಲೀಸರನ್ನು ಮುಂದಿಟ್ಟುಕೊಂಡು ವೇದಿಕೆಯಲ್ಲಿ ಭಾಷಣ ಮಾಡುವರು ಪುಕ್ಕಲರು. ಚಕ್ರವರ್ತಿ ಸೂಲಿಬೆಲೆಯಂತಹ ಪುಕ್ಕಲರ ಬಗ್ಗೆ ಪ್ರತಿಕ್ರಿಯೆ ಕೊಡಬಾರದು. ಅಡ್ಡಂಡ ಕಾರ್ಯಪ್ಪ ಸಾಂಸ್ಕೃತಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

-ಎಂ.ಲಕ್ಷ್ಮಣ್

andolanait

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

7 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

8 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

9 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

10 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

10 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

10 hours ago