ಜಿಲ್ಲೆಗಳು

‘ತಾಕತ್ ಇದ್ದರೆ ಗೋಪುರ ಮಾದರಿ ತಂಗುದಾಣ ನೆಲಸಮಗೊಳಿಸಿ’

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ

ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ ಅವರಿಗೆ ತಾಕತ್ತು, ಧಮ್ ಇದ್ದಲ್ಲಿ ಊಟಿ ರಸ್ತೆಯಲ್ಲಿ ಗೋಪುರ ಮಾದರಿಯ ಬಸ್ ತಂಗುದಾಣವನ್ನು ನೆಲಸಮಗೊಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಸವಾಲು ಹಾಕಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಂಟು ವರ್ಷಗಳಲ್ಲಿ ಜನರಿಗೆ ಕೊಟ್ಟ ಮಾತನ್ನೂ ಉಳಿಸಿಕೊಳ್ಳದೆ ಸುಳ್ಳು ಹೇಳಿಕೊಂಡು ಕಾಲಾಹರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಪ್ರತಾಪ್ ಸಿಂಹ ಮೊದಲಿಗರು. ನಾಗನಹಳ್ಳಿ ಬಳಿ ಸ್ಯಾಟಲೈಟ್ ರೈಲ್ವೆ ಟರ್ಮಿನಲ್, ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ, ಉಂಡುವಾಡಿ ಕುಡಿಯುವ ನೀರಿನ ಯೋಜನೆ, ಕುಶಾಲನಗರಕ್ಕೆ ರೈಲು, ದಸರಾ ಒಳಗೆ ದಶಪಥ ರಸ್ತೆ ಬರಿ ಮಾತಿನಲ್ಲೇ ಇದೆ ಎಂದು ಟೀಕಿಸಿದರು.
ಶಾಸಕ ಎಸ್.ಎ.ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಈ ಇಬ್ಬರ ನಡುವಿನ ವಾರ್‌ನಲ್ಲಿ ಮೈಸೂರಿನ ಮರ್ಯಾದೆ ತೆಗೆಯುತ್ತಿದ್ದಾರೆ. ಬಸ್ ತಂಗುದಾಣಕ್ಕೆ ಅಡ್ಡಿಪಡಿಸಿ ದೊಡ್ಡ ವಿವಾದ ಮಾಡಿರುವ ಸಂಸದರೇ ನಿಮ್ಮ ಮನೆಯಿಂದ ದುಡ್ಡು ತಂದು ನಿರ್ಮಿಸಿದ್ದೀರಾ? ನಗರಾಭಿವೃದ್ಧಿ ಇಲಾಖೆ ನಿಯಮಗಳ ಪ್ರಕಾರ ಗೋಪುರ ಮಾದರಿಯ ಕಟ್ಟಡಗಳಿಗೆ ಅನುಮತಿ ಪಡೆಯಬೇಕಿಲ್ಲ. ಹೀಗಿದ್ದರೂ, ನಗರಪಾಲಿಕೆಯಿಂದ ಅನುಮತಿ ಪಡೆಯಬೇಕೆಂದು ಹೇಳಿರುವುದು ಹಾಸ್ಯಾಸ್ಪದ. ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಮಾತನಾಡುವುದನ್ನು ನಿಲ್ಲಿಸದಿದ್ದರೆ ಸಂಸದರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಪೊಲೀಸ್ ಠಾಣೆಗೂ ದೂರು ನೀಡಲಾಗುವುದು ಎಚ್ಚರಿಸಿದರು.
ಮೈಸೂರಿನಲ್ಲೂ ಬಿಜೆಪಿ ನೇಮಿಸಿರುವ ವ್ಯಕ್ತಿಗಳು ಮತದಾರರ ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ವರದಿ ಬಂದಿರುವುದರಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ದೂರು ನೀಡಲಾಗುವುದು.
ಪದವಿ ವೈದ್ಯಕೀಯ ಸಮಾಜ ಶಾಸ್ತ್ರದ ಪಠ್ಯದಲ್ಲಿ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಸ್ವಮೂತ್ರ ಕುಡಿದರೆ ಗುಣವಾಗಲಿದೆ ಅಂತ ಹೇಳಿರುವುದು ಅವೈಜ್ಞಾನಿಕ ಮತ್ತು ಮೂರ್ಖತನದಿಂದ ಕೂಡಿದೆ. ಆರ್‌ಎಸ್‌ಎಸ್ ಪ್ರೇರಿತ ವಿಚಾರಧಾರೆಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಒಂದು ವಾರದೊಳಗೆ ಮರು ಮುದ್ರಣ ಮಾಡಿ ಹಂಚಬೇಕು ಎಂದು ಒತ್ತಾಯಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಪಂ ವಾಜಿ ಅಧ್ಯಕ್ಷ ಬಿ.ಎಂ.ರಾಮು, ಸೇವಾದಳದ ಅಧ್ಯಕ್ಷ ಗಿರೀಶ್ ನಾುಂಕ್, ವಕ್ತಾರ ಕೆ.ಮಹೇಶ್ ಮತ್ತಿತರರು ಹಾಜರಿದ್ದರು.


ಪೊಲೀಸರನ್ನು ಮುಂದಿಟ್ಟುಕೊಂಡು ವೇದಿಕೆಯಲ್ಲಿ ಭಾಷಣ ಮಾಡುವರು ಪುಕ್ಕಲರು. ಚಕ್ರವರ್ತಿ ಸೂಲಿಬೆಲೆಯಂತಹ ಪುಕ್ಕಲರ ಬಗ್ಗೆ ಪ್ರತಿಕ್ರಿಯೆ ಕೊಡಬಾರದು. ಅಡ್ಡಂಡ ಕಾರ್ಯಪ್ಪ ಸಾಂಸ್ಕೃತಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

-ಎಂ.ಲಕ್ಷ್ಮಣ್

andolanait

Recent Posts

ಪಿರಿಯಾಪಟ್ಟಣ | ನಿಲ್ಲದ ಸರ್ವರ್‌ ಸಮಸ್ಯೆ ; ಪಡಿತರ ಪಡೆಯಲು ಪರದಾಟ

ಪಿರಿಯಾಪಟ್ಟಣ : ಪಿರಿಯಾಪಟ್ಟಣದಲ್ಲಿ ಸರ್ವರ್ ಸಮಸ್ಯೆಯಿಂದಾಗಿ ಜನರು ಪಡಿತರ ಪಡೆಯಲು ಪರದಾಟ ನಡೆಸುವ ಪರಿಸ್ಥಿತಿ ಎದುರಾಗಿದೆ. ಜನಸಾಮಾನ್ಯರು ಎಂದಿನಂತೆ ಪ್ರತಿ…

53 mins ago

ಗೌರವಯುತವಾಗಿ ನಡೆದುಕೊಂಡ ಸಿದ್ದರಾಮಯ್ಯ : ಮಾಜಿ ಸಂಸದ ಪ್ರತಾಪ್‌ ಸಿಂಹ

ಮೈಸೂರು : ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಸಿದ್ದರಾಮಯ್ಯನವರ ಮುಂದಿನ ಜೀವನ ಚೆನ್ನಾಗಿರಲಿ. ನೂತನ ಸಿಎಂ ಆಗಲಿರುವ ಡಿ.ಕೆ.ಶಿವಕುಮಾರ್ ಉತ್ತಮ…

3 hours ago

ನಾಳೆ ಸಿಎಲ್‌ಪಿ ಸಭೆ ಕರೆದಿದ್ದೇವೆ, ಸಿದ್ದರಾಮಯ್ಯ ಜತೆ ಚರ್ಚಿಸಿದ್ದೇನೆ : ಡಿ.ಕೆ.ಶಿವಕುಮಾರ್‌

ಹೊಸದಿಲ್ಲಿ : ಕಳೆದ ಎರಡ್ಮೂರು ದಿನಗಳಿಂದ ಮೌನಕ್ಕೆ ಶರಣಾಗಿದ್ದ ಡಿಕೆ ಶಿವಕುಮಾರ್ ಕೊನೆಗೂ ತುಟಿ ಬಿಚ್ಚಿ ಮಾತನಾಡಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ…

3 hours ago

ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ: ಶಾಸಕ ತನ್ವೀರ್‌ ಸೇಠ್‌

ಮೈಸೂರು: ನಾನು ಸಹ ಹೊಸ ಸಚಿವ ಸಂಪುಟದಲ್ಲಿ ಸೇರುವ ಬಯಕೆ ಇದೆ ಎಂದು ಶಾಸಕ ತನ್ವೀರ್‌ ಸೇಠ್‌ ಹೇಳಿದ್ದಾರೆ. ಈ…

8 hours ago

ರಾಜ್ಯ ಸಚಿವ ಸಂಪುಟ ವಿಸರ್ಜನೆ: ಸಚಿವರ ಸರ್ಕಾರಿ ವಾಹನಗಳು ವಾಪಸ್‌

ಬೆಂಗಳೂರು: ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ನೀಡಿದ್ದ ರಾಜೀನಾಮೆಯನ್ನು ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರು ಅಂಗೀಕರಿಸಿದ್ದಾರೆ. ರಾಜೀನಾಮೆ ಅಂಗೀಕಾರವಾದ ಬೆನ್ನಲ್ಲೇ…

9 hours ago

ಸಿದ್ದರಾಮಯ್ಯರನ್ನು ಹಾಡಿ ಹೊಗಳಿದ ಡಿ.ಕೆ.ಶಿವಕುಮಾರ್‌

ಬೆಂಗಳೂರು: ದೇವರು ವರನೂ ಕೊಡಲ್ಲ. ಶಾಪನೂ ಕೊಡಲ್ಲ. ಅವಕಾಶ ಮಾತ್ರ ಕೊಡುತ್ತಾನೆ. ಆ ಕೊಟ್ಟಿರುವ ಅವಕಾಶದಲ್ಲಿ ನಾವು ಏನು ಸಾಧನೆ…

9 hours ago