ಜಿಲ್ಲೆಗಳು

‘ತಾಕತ್ ಇದ್ದರೆ ಗೋಪುರ ಮಾದರಿ ತಂಗುದಾಣ ನೆಲಸಮಗೊಳಿಸಿ’

ಕೊಟ್ಟ ಮಾತನ್ನು ಉಳಿಸಿಕೊಳ್ಳದ ಪ್ರತಾಪ್ ಸಿಂಹ ಮಾನ ಮರ್ಯಾದೆ ತೆಗೆದಿದ್ದಾರೆ: ಲಕ್ಷ್ಮಣ್ ಕಿಡಿ

ಮೈಸೂರು: ಬಸ್ ತಂಗುದಾಣದ ಗುಂಬಜ್ ಮಾದರಿಯನ್ನು ಒಡೆದು ಹಾಕುತ್ತೇನೆಂದು ಹೇಳಿರುವ ಪ್ರತಾಪ್ ಸಿಂಹ ಅವರಿಗೆ ತಾಕತ್ತು, ಧಮ್ ಇದ್ದಲ್ಲಿ ಊಟಿ ರಸ್ತೆಯಲ್ಲಿ ಗೋಪುರ ಮಾದರಿಯ ಬಸ್ ತಂಗುದಾಣವನ್ನು ನೆಲಸಮಗೊಳಿಸಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಲಕ್ಷ್ಮಣ್ ಸವಾಲು ಹಾಕಿದರು.

ನಗರದ ಕಾಂಗ್ರೆಸ್ ಭವನದಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಎಂಟು ವರ್ಷಗಳಲ್ಲಿ ಜನರಿಗೆ ಕೊಟ್ಟ ಮಾತನ್ನೂ ಉಳಿಸಿಕೊಳ್ಳದೆ ಸುಳ್ಳು ಹೇಳಿಕೊಂಡು ಕಾಲಾಹರಣ ಮಾಡುತ್ತಿದ್ದಾರೆ. ಸುಳ್ಳು ಹೇಳುವುದರಲ್ಲಿ ಪ್ರತಾಪ್ ಸಿಂಹ ಮೊದಲಿಗರು. ನಾಗನಹಳ್ಳಿ ಬಳಿ ಸ್ಯಾಟಲೈಟ್ ರೈಲ್ವೆ ಟರ್ಮಿನಲ್, ವಿಮಾನ ನಿಲ್ದಾಣ ರನ್ ವೇ ವಿಸ್ತರಣೆ, ಉಂಡುವಾಡಿ ಕುಡಿಯುವ ನೀರಿನ ಯೋಜನೆ, ಕುಶಾಲನಗರಕ್ಕೆ ರೈಲು, ದಸರಾ ಒಳಗೆ ದಶಪಥ ರಸ್ತೆ ಬರಿ ಮಾತಿನಲ್ಲೇ ಇದೆ ಎಂದು ಟೀಕಿಸಿದರು.
ಶಾಸಕ ಎಸ್.ಎ.ರಾಮದಾಸ್ ಹಾಗೂ ಸಂಸದ ಪ್ರತಾಪ್ ಸಿಂಹ ಈ ಇಬ್ಬರ ನಡುವಿನ ವಾರ್‌ನಲ್ಲಿ ಮೈಸೂರಿನ ಮರ್ಯಾದೆ ತೆಗೆಯುತ್ತಿದ್ದಾರೆ. ಬಸ್ ತಂಗುದಾಣಕ್ಕೆ ಅಡ್ಡಿಪಡಿಸಿ ದೊಡ್ಡ ವಿವಾದ ಮಾಡಿರುವ ಸಂಸದರೇ ನಿಮ್ಮ ಮನೆಯಿಂದ ದುಡ್ಡು ತಂದು ನಿರ್ಮಿಸಿದ್ದೀರಾ? ನಗರಾಭಿವೃದ್ಧಿ ಇಲಾಖೆ ನಿಯಮಗಳ ಪ್ರಕಾರ ಗೋಪುರ ಮಾದರಿಯ ಕಟ್ಟಡಗಳಿಗೆ ಅನುಮತಿ ಪಡೆಯಬೇಕಿಲ್ಲ. ಹೀಗಿದ್ದರೂ, ನಗರಪಾಲಿಕೆಯಿಂದ ಅನುಮತಿ ಪಡೆಯಬೇಕೆಂದು ಹೇಳಿರುವುದು ಹಾಸ್ಯಾಸ್ಪದ. ಮುಸ್ಲಿಮರನ್ನು ಟಾರ್ಗೆಟ್ ಮಾಡಿ ಮಾತನಾಡುವುದನ್ನು ನಿಲ್ಲಿಸದಿದ್ದರೆ ಸಂಸದರ ಕಚೇರಿ ಎದುರು ಉಪವಾಸ ಸತ್ಯಾಗ್ರಹ ಮಾಡುತ್ತೇನೆ. ಪೊಲೀಸ್ ಠಾಣೆಗೂ ದೂರು ನೀಡಲಾಗುವುದು ಎಚ್ಚರಿಸಿದರು.
ಮೈಸೂರಿನಲ್ಲೂ ಬಿಜೆಪಿ ನೇಮಿಸಿರುವ ವ್ಯಕ್ತಿಗಳು ಮತದಾರರ ಮಾಹಿತಿ ಸಂಗ್ರಹಿಸುತ್ತಿರುವ ಕುರಿತು ವರದಿ ಬಂದಿರುವುದರಿಂದ ಜಿಲ್ಲಾಧಿಕಾರಿಗಳಿಗೆ ಸೋಮವಾರ ದೂರು ನೀಡಲಾಗುವುದು.
ಪದವಿ ವೈದ್ಯಕೀಯ ಸಮಾಜ ಶಾಸ್ತ್ರದ ಪಠ್ಯದಲ್ಲಿ ಏಡ್ಸ್ ಮತ್ತು ಕ್ಯಾನ್ಸರ್‌ಗೆ ಸ್ವಮೂತ್ರ ಕುಡಿದರೆ ಗುಣವಾಗಲಿದೆ ಅಂತ ಹೇಳಿರುವುದು ಅವೈಜ್ಞಾನಿಕ ಮತ್ತು ಮೂರ್ಖತನದಿಂದ ಕೂಡಿದೆ. ಆರ್‌ಎಸ್‌ಎಸ್ ಪ್ರೇರಿತ ವಿಚಾರಧಾರೆಗಳನ್ನು ಪಠ್ಯದಲ್ಲಿ ಸೇರಿಸಲಾಗಿದೆ. ಒಂದು ವಾರದೊಳಗೆ ಮರು ಮುದ್ರಣ ಮಾಡಿ ಹಂಚಬೇಕು ಎಂದು ಒತ್ತಾಯಿಸಿದರು.

ನಗರ ಕಾಂಗ್ರೆಸ್ ಅಧ್ಯಕ್ಷ ಆರ್.ಮೂರ್ತಿ, ಜಿಪಂ ವಾಜಿ ಅಧ್ಯಕ್ಷ ಬಿ.ಎಂ.ರಾಮು, ಸೇವಾದಳದ ಅಧ್ಯಕ್ಷ ಗಿರೀಶ್ ನಾುಂಕ್, ವಕ್ತಾರ ಕೆ.ಮಹೇಶ್ ಮತ್ತಿತರರು ಹಾಜರಿದ್ದರು.


ಪೊಲೀಸರನ್ನು ಮುಂದಿಟ್ಟುಕೊಂಡು ವೇದಿಕೆಯಲ್ಲಿ ಭಾಷಣ ಮಾಡುವರು ಪುಕ್ಕಲರು. ಚಕ್ರವರ್ತಿ ಸೂಲಿಬೆಲೆಯಂತಹ ಪುಕ್ಕಲರ ಬಗ್ಗೆ ಪ್ರತಿಕ್ರಿಯೆ ಕೊಡಬಾರದು. ಅಡ್ಡಂಡ ಕಾರ್ಯಪ್ಪ ಸಾಂಸ್ಕೃತಿಕ ವೇದಿಕೆಯನ್ನು ರಾಜಕೀಯ ವೇದಿಕೆಯನ್ನಾಗಿ ಮಾಡಿಕೊಂಡಿದ್ದಾರೆ.

-ಎಂ.ಲಕ್ಷ್ಮಣ್

andolanait

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

10 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

10 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

10 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

10 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

10 hours ago