ಹನೂರು: ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹ ರಥ ಭಾನುವಾರ ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆ ತಾಲ್ಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು
ಮಲೆಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಎಲ್ಲೇಮಾಳ ಗ್ರಾಮದ ಮೂಲಕ ಹನೂರು ಪಟ್ಟಣಕ್ಕೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಮಹಿಳೆಯರು ಹಾಗೂ ಪುಟಾಣಿಗಳು ಪೂರ್ಣಕುಂಭ ಸ್ವಾಗತ ಕೋರುವ ಮೂಲಕ ಬರಮಾಡಿಕೊಳ್ಳಲಾಯಿತು.
ಈ ವೇಳೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗರಾಜು ಗೌಡ ಮಾತನಾಡಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಿಸುತ್ತಿರುವುದು ಸಂತಸದ ವಿಚಾರ,ನಾಡಪ್ರಭು ಕೆಂಪೇಗೌಡರು ಬೆಂಗಳೂರಿನಲ್ಲಿ ನಿರ್ಮಾಣ ಮಾಡಿರುವ ಕೆರೆಗಳು ಈ ನಾಡಿಗೆ ಅದ್ಬುತ ಕೊಡುಗೆಗಳಾಗಿವೆ. ಪ್ರತಿಯೊಬ್ಬರು ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.
ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳಾದ ಹರೀಶ್, ಆನಂದ್ ಕುಮಾರ್ ,ತಹಸೀಲ್ದಾರ್ ಆನಂದಯ್ಯ ಮುಖ್ಯಾಧಿಕಾರಿ ಮೂರ್ತಿ, ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ದತ್ತೇಶ್ ಕುಮಾರ್ ,ಬಿಜೆಪಿ ಮುಖಂಡ ಪ್ರೀತಂ ನಾಗಪ್ಪ, ಯುವ ಮುಖಂಡ ನವನೀತ್ ಗೌಡ ಒಕ್ಕಲಿಗ ಸಮುದಾಯ ಮುಖಂಡರುಗಳಾದ ಕಾಮಗೆರೆ ನಾಗರಾಜು, ಮಾದೇಶ್ , ಎಲ್ ರಾಜೇಂದ್ರ, ಕೃಷ್ಣ, ವೆಂಕಟೇಗೌಡ ನಾಗೇಂದ್ರ,ಮಂಜೇಶ್,ತೆಳ್ಳನೂರು ವಿಜಯ್, ಕೆಂಪೇಗೌಡ ಯುವಕ ಸಂಘದ ಸದಸ್ಯರುಗಳು ಹಾಗೂ ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.





