ಜಿಲ್ಲೆಗಳು

ಕೆಂಪೇಗೌಡರ ಉದ್ಯಾನಕ್ಕೆ ಮಾದಪ್ಪ ಸನ್ನಿಧಿಯ ಮಣ್ಣು

ಹನೂರು: ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹ ರಥ ಭಾನುವಾರ ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆ ತಾಲ್ಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು

ಮಲೆಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಎಲ್ಲೇಮಾಳ ಗ್ರಾಮದ ಮೂಲಕ ಹನೂರು ಪಟ್ಟಣಕ್ಕೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಮಹಿಳೆಯರು ಹಾಗೂ ಪುಟಾಣಿಗಳು ಪೂರ್ಣಕುಂಭ ಸ್ವಾಗತ ಕೋರುವ ಮೂಲಕ ಬರಮಾಡಿಕೊಳ್ಳಲಾಯಿತು.

ಈ ವೇಳೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗರಾಜು ಗೌಡ ಮಾತನಾಡಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಿಸುತ್ತಿರುವುದು ಸಂತಸದ ವಿಚಾರ,ನಾಡಪ್ರಭು ಕೆಂಪೇಗೌಡರು ಬೆಂಗಳೂರಿನಲ್ಲಿ ನಿರ್ಮಾಣ ಮಾಡಿರುವ ಕೆರೆಗಳು ಈ ನಾಡಿಗೆ ಅದ್ಬುತ ಕೊಡುಗೆಗಳಾಗಿವೆ. ಪ್ರತಿಯೊಬ್ಬರು ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳಾದ ಹರೀಶ್, ಆನಂದ್ ಕುಮಾರ್ ,ತಹಸೀಲ್ದಾರ್ ಆನಂದಯ್ಯ ಮುಖ್ಯಾಧಿಕಾರಿ ಮೂರ್ತಿ, ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ದತ್ತೇಶ್ ಕುಮಾರ್ ,ಬಿಜೆಪಿ ಮುಖಂಡ ಪ್ರೀತಂ ನಾಗಪ್ಪ, ಯುವ ಮುಖಂಡ ನವನೀತ್ ಗೌಡ ಒಕ್ಕಲಿಗ ಸಮುದಾಯ ಮುಖಂಡರುಗಳಾದ ಕಾಮಗೆರೆ ನಾಗರಾಜು, ಮಾದೇಶ್ , ಎಲ್ ರಾಜೇಂದ್ರ, ಕೃಷ್ಣ, ವೆಂಕಟೇಗೌಡ ನಾಗೇಂದ್ರ,ಮಂಜೇಶ್,ತೆಳ್ಳನೂರು ವಿಜಯ್, ಕೆಂಪೇಗೌಡ ಯುವಕ ಸಂಘದ ಸದಸ್ಯರುಗಳು ಹಾಗೂ ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.

andolana

Recent Posts

ರಾಜ್ಯದ ಅಭಿವೃದ್ಧಿಗೆ ಪೂರಕವಾದ ಬಜೆಟ್‌ ಮಂಡಿಸಿದ್ದೇನೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕೇಂದ್ರ ಸರ್ಕಾರ ಜಿಎಸ್‌ಟಿ ಕೊಡದಿದ್ದರಿಂದ ರಾಜ್ಯದ ಬೆಳವಣಿಗೆ ಕಡಿಮೆಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು. 2026-27ನೇ ಸಾಲಿನ ಬಜೆಟ್‌…

2 hours ago

2025-26ನೇ ಸಾಲಿನ ರಾಜ್ಯ ಬಜೆಟ್ ಕುರಿತು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಪ್ರತಿಕ್ರಿಯೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಅತ್ಯಂತ ಜನಪರ ಬಜೆಟ್‌ ಮಂಡನೆ ಮಾಡಿದ್ದಾರೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಸಂತಸ…

3 hours ago

ರಾಜ್ಯ ಬಜೆಟ್‌ನಲ್ಲಿ ಜಯದೇವ ಆಸ್ಪತ್ರೆಗೆ 180 ಕೋಟಿ ಅನುದಾನ: ಸಿಎಂ ಸಿದ್ದುಗೆ ಡಾ.ಬಿ.ದಿನೇಶ್‌ ಧನ್ಯವಾದ

ಮೈಸೂರು: ಮೈಸೂರಿನ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆ ಉನ್ನತೀಕರಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ೧೮೦ ಕೋಟಿ ರೂ. ಅನುದಾನ ಘೋಷಿಸಿ,…

3 hours ago

ಸಿದ್ದರಾಮಯ್ಯ ದಾಖಲೆ ಮಾಡಲು ಹೋಗಿ ರಾಜ್ಯದ ಆರ್ಥಿಕತೆಯನ್ನು ದಿಕ್ಕಾಪಾಲಾಗಿಸಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಬೆಂಗಳೂರು: ಸ್ಲೋಗನ್ ರಾಮಯ್ಯನವರ ಬಜೆಟ್ಟಿನ ಸುದೀರ್ಘ ಪ್ರಲಾಪ ಆಲಿಸಿದೆ. ಅವರಿಗೆ 17ನೇ ಬಜೆಟ್ ಮಂಡಿಸಿದ ಖುಷಿ, ಜನರಿಗೆ ಬರೆ ಎಳೆಸಿಕೊಂಡ…

4 hours ago

ರಾಜ್ಯ ಬಜೆಟ್‌ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ: ಕುರುಬೂರು ಶಾಂತಕುಮಾರ್‌ ಅಸಮಾಧಾನ

ಮೈಸೂರು: ರಾಜ್ಯ ಸರ್ಕಾರ ಮಂಡಿಸಿರುವ ಬಜೆಟ್ ರೈತರ ಪಾಲಿಗೆ ತೀವ್ರ ನಿರಾಸೆ ತಂದಿದೆ ಎಂದು ರಾಜ್ಯ ರೈತ ಸಂಘಟನೆಗಳ ಒಕ್ಕೂಟದ…

4 hours ago

ನೀರಿನಲ್ಲಿ ಹೋಮ ಮಾಡಿದ ಸಿದ್ದರಾಮಯ್ಯ ಬಜೆಟ್:‌ ವಿಜಯೇಂದ್ರ ಕಿಡಿ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರಿಂದು ಮಂಡಿಸಿದ ರಾಜ್ಯ ಬಜೆಟ್‌ ಅನ್ನು ಟೀಕಿಸಿದ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು, ಸಿದ್ದರಾಮಯ್ಯ ಅವರು…

4 hours ago