ಜಿಲ್ಲೆಗಳು

ಕೆಂಪೇಗೌಡರ ಉದ್ಯಾನಕ್ಕೆ ಮಾದಪ್ಪ ಸನ್ನಿಧಿಯ ಮಣ್ಣು

ಹನೂರು: ನವೆಂಬರ್ 11 ರಂದು ಬೆಂಗಳೂರಿನ ಕೆಂಪೇಗೌಡರ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪವಿತ್ರ ಮೃತ್ತಿಕೆ ಸಂಗ್ರಹ ರಥ ಭಾನುವಾರ ಪಟ್ಟಣಕ್ಕೆ ಆಗಮಿಸಿದ್ದ ಹಿನ್ನೆಲೆ ತಾಲ್ಲೂಕು ಆಡಳಿತ ಮತ್ತು ಒಕ್ಕಲಿಗರ ಸಂಘದ ವತಿಯಿಂದ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು

ಮಲೆಮಹದೇಶ್ವರ ಬೆಟ್ಟದಲ್ಲಿ ಪೂಜೆ ಸಲ್ಲಿಸಿ ಎಲ್ಲೇಮಾಳ ಗ್ರಾಮದ ಮೂಲಕ ಹನೂರು ಪಟ್ಟಣಕ್ಕೆ ಆಗಮಿಸಿದ ಕೆಂಪೇಗೌಡ ರಥಕ್ಕೆ ಪಟ್ಟಣದ ಪೆಟ್ರೋಲ್ ಬಂಕ್ ಸಮೀಪ ಮಹಿಳೆಯರು ಹಾಗೂ ಪುಟಾಣಿಗಳು ಪೂರ್ಣಕುಂಭ ಸ್ವಾಗತ ಕೋರುವ ಮೂಲಕ ಬರಮಾಡಿಕೊಳ್ಳಲಾಯಿತು.

ಈ ವೇಳೆ ಒಕ್ಕಲಿಗ ಸಂಘದ ತಾಲ್ಲೂಕು ಅಧ್ಯಕ್ಷ ಲಿಂಗರಾಜು ಗೌಡ ಮಾತನಾಡಿ ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಾಡಪ್ರಭು ಕೆಂಪೇಗೌಡರ ಪುತ್ಥಳಿ ನಿರ್ಮಿಸುತ್ತಿರುವುದು ಸಂತಸದ ವಿಚಾರ,ನಾಡಪ್ರಭು ಕೆಂಪೇಗೌಡರು ಬೆಂಗಳೂರಿನಲ್ಲಿ ನಿರ್ಮಾಣ ಮಾಡಿರುವ ಕೆರೆಗಳು ಈ ನಾಡಿಗೆ ಅದ್ಬುತ ಕೊಡುಗೆಗಳಾಗಿವೆ. ಪ್ರತಿಯೊಬ್ಬರು ಕೆಂಪೇಗೌಡರ ತತ್ವ ಆದರ್ಶಗಳನ್ನು ಮೈಗೂಡಿಸಿಕೊಂಡು ಉತ್ತಮ ಜೀವನ ರೂಪಿಸಿಕೊಳ್ಳಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಚಂದ್ರಮ್ಮ, ಉಪಾಧ್ಯಕ್ಷ ಗಿರೀಶ್, ಸದಸ್ಯರುಗಳಾದ ಹರೀಶ್, ಆನಂದ್ ಕುಮಾರ್ ,ತಹಸೀಲ್ದಾರ್ ಆನಂದಯ್ಯ ಮುಖ್ಯಾಧಿಕಾರಿ ಮೂರ್ತಿ, ಹಿಂದುಳಿದ ವರ್ಗಗಳ ಮೋರ್ಚಾದ ಕಾರ್ಯಕಾರಿಣಿ ಸದಸ್ಯ ಜನಧ್ವನಿ ಬಿ ವೆಂಕಟೇಶ್ , ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಡಾ ದತ್ತೇಶ್ ಕುಮಾರ್ ,ಬಿಜೆಪಿ ಮುಖಂಡ ಪ್ರೀತಂ ನಾಗಪ್ಪ, ಯುವ ಮುಖಂಡ ನವನೀತ್ ಗೌಡ ಒಕ್ಕಲಿಗ ಸಮುದಾಯ ಮುಖಂಡರುಗಳಾದ ಕಾಮಗೆರೆ ನಾಗರಾಜು, ಮಾದೇಶ್ , ಎಲ್ ರಾಜೇಂದ್ರ, ಕೃಷ್ಣ, ವೆಂಕಟೇಗೌಡ ನಾಗೇಂದ್ರ,ಮಂಜೇಶ್,ತೆಳ್ಳನೂರು ವಿಜಯ್, ಕೆಂಪೇಗೌಡ ಯುವಕ ಸಂಘದ ಸದಸ್ಯರುಗಳು ಹಾಗೂ ಮಹಿಳಾ ಸಂಘದ ಸದಸ್ಯರು ಹಾಜರಿದ್ದರು.

andolana

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

4 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

4 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

6 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

7 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

11 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

11 hours ago