ಜಿಲ್ಲೆಗಳು

ಮದ್ದೂರು: ಅಧಿಕಾರಿಗಳ ವಿರುದ್ಧ ಹಲ್ಲೆಗೆ ಯತ್ನ

ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಘಟನೆ; ಆರೋಪಿಗಳು ಪರಾರಿ

ಮದ್ದೂರು : ಸರ್ಕಾರದ ಆದೇಶದಂತೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ಮಾಣದ  ಜಮೀನಿನ ಅಳತೆಗೆ ಹೋಗಿದ್ದ ಕಂದಾಯ ಇಲಾಖೆ ಅಧಿಕಾರಿಗಳ ಮೇಲೆ ಒತ್ತುವರಿದಾರರು ಹಲ್ಲೆ ನಡೆಸಲು ವಿಫಲ ಯತ್ನ ನಡೆಸಿದ ಘಟನೆ ಪೊಲೀಸರ ಎದುರೇ ತಾಲ್ಲೂಕಿನ ಹುಲಿಕೆರೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ.
ಜಮೀನಿನ ಅಳತೆ ಬಗ್ಗೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೈತ ಬಸವೇಗೌಡ ಸ್ಥಳದಲ್ಲೇ ಕ್ರಿಮಿನಾಶಕ ಸೇವಿಸಿ ಅಸ್ವಸ್ತಗೊಂಡಿದ್ದು, ಈತನನ್ನು ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದು, ಪರಿಸ್ಥಿತಿ ಗಂಭೀರವಾಗಿದೆ.
ಅಳತೆ ವೇಳೆ ಅಧಿಕಾರಿಗಳೊಂದಿಗೆ ಚಕಮಕಿಗಿಳಿದ ಒತ್ತುವರಿದಾರರು, ಅವಾಚ್ಯ ಶಬ್ದಗಳಿಂದ ನಿಂದಿಸಿ ತಳ್ಳಾಟ, ನೂಕಾಟ ನಡೆಸಿದ್ದರಿಂದಾಗಿ ಸ್ಥಳದಲ್ಲಿ ಬಿಗುವಿನ ಪರಿಸ್ಥಿತಿ ಉಂಟಾಗಿದ್ದು, ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಇದೇ ವೇಳೆ ಅಧಿಕಾರಿಗಳ ಬೆಂಬಲಕ್ಕೆ ನಿಂತ ಪಕ್ಕದ ಜಮೀನಿನ ರೈತರ ಮೇಲೆ ಒತ್ತುವರಿದಾರರ ಗುಂಪು ಹಲ್ಲೆ ನಡೆಸಿದ ಪರಿಣಾಮ ನಾಲ್ವರು ಗಾಯಗೊಂಡಿದ್ದಾರೆ.
ಹಲ್ಲೆಯಿಂದಾಗಿ ಕೆ.ಬೆಳ್ಳೂರು ಗ್ರಾಮದ ಬಿ.ಎಸ್. ಸುನಿಲ್‌ಕುಮಾರ್ (35), ಬಿ.ಕೆ. ಕೆಂಪರಾಜು (40), ಪುನೀತ್ (28) ಮದ್ದೂರು ಸಾರ್ವಜನಿಕ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆ ಸಂಬಂಧ ಪೊಲೀಸರು ಕೆ.ಬೆಳ್ಳೂರು ಗ್ರಾಮದ ಪಿ.ಕೆಂಪೇಗೌಡ, ಪುಟ್ಟಸ್ವಾಮಿ, ಮಹದೇವು, ರಾಜಣ್ಣ, ಬಿ.ಆರ್. ಮನು, ಕೆಂಪರಾಜು, ಬಸವೇಗೌಡ, ಕವಿತಾ, ರತ್ನಮ್ಮ, ಮೋಟೇಗೌಡ, ಮೂರ್ತಿ, ಸುರೇಶ, ಚಿಕ್ಕೆದೇಗೌಡ ಹಾಗೂ ಸರೋಜಮ್ಮ ಎಂಬವರ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡಿದ್ದು, ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ.
ಕೊಕ್ಕರೆ ಬೆಳ್ಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಉ ಹುಲಿಕೆರೆ ಗ್ರಾಮದ ಸರ್ವೆ ನಂ. 107ರಲ್ಲಿರುವ 9 ಗುಂಟೆ ಬೀಳು ಜಮೀನನ್ನು ಗ್ರಾಮ ಪಂಚಾಯಿತಿಗೆ ಘನತ್ಯಾಜ್ಯ ವಿಲೇವಾರಿ ಘಟಕ ನಿರ್ವಾಣ ಮಾಡಲು ಸರ್ಕಾರ ಮಂಜೂರು ಮಾಡಿತ್ತು. ಜಮೀನು ಅಳತೆ ಮಾಡಿ ಪಂಚಾಯಿತಿಗೆ ಹಸ್ತಾಂತರ ಮಾಡಬೇಕು ಎಂದು ಜಿಲ್ಲಾಧಿಕಾರಿ, ಉಪವಿಭಾಗಾಧಿಕಾರಿ, ತಹಸಿಲ್ದಾರ್ ಆದೇಶ ಹೊರಡಿಸಿದ್ದರು. ಆದೇಶದನ್ವಯ ರಾಜಸ್ವ ನಿರೀಕ್ಷಕ ಎಂ. ಜಯರಾಂ, ಸರ್ವೆಯರ್ ಶ್ರೀಕಂಠಪ್ಪ ಹಾಗೂ ಕೆ. ಬೆಳ್ಳೂರು ಪಿಡಿಓ ಮಹಮ್ಮದ್ ರಸೂಲ್ ಪೊಲೀಸರ ಬಿಗಿ ಭದ್ರತೆಯಲ್ಲಿ ಮಂಗಳವಾರ ಜಮೀನು ಅಳತೆ ಮಾಡಲು ಸ್ಥಳಕ್ಕೆ ತೆರಳಿದ್ದರು.
ಅಳತೆ ಕಾರ್ಯದ ವೇಳೆ ಸ್ಥಳಕ್ಕೆ ಧಾವಿಸಿದ ಒತ್ತುವರಿದಾರ 14 ಮಂದಿ ಆರೋಪಿಗಳು ಅಧಿಕಾರಿಗಳ ಕಾರ್ಯಕ್ಕೆ ಅಡ್ಡಿಪಡಿಸಿ ಪ್ರತಿಭಟನೆ ನಡೆಸಿದರು. ಒಂದು ಹಂತದಲ್ಲಿ ಅಧಿಕಾರಿಗಳ ಮೇಲೆ ಗುಂಪು ಹಲ್ಲೆ ನಡೆಸಲು ಯತ್ನಿಸಲಾಯಿತು ಎಂದು ಆರೋಪಿಸಲಾಗಿದೆ.

andolanait

Recent Posts

3,705 ಕೋಟಿ ರೂ. ಪರಿಹಾರ ಕೋರಿ ಕೇಂದ್ರಕ್ಕೆ ಮೆಮೊರಾಂಡಂ ಸಲ್ಲಿಸಿದ ರಾಜ್ಯ ಸರ್ಕಾರ

ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಮಳೆ ಕೈಕೊಟ್ಟಿರುವ ಹಿನ್ನೆಲೆಯಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಗಂಭೀರವಾಗುತ್ತಿದ್ದು, ಮೊದಲ ಹಂತದಲ್ಲಿ ಘೋಷಿಸಲಾದ 101…

12 mins ago

ಹನೂರು | ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಕಾರ್ಮಿಕ ಸಾವು

ಹನೂರು : ಕೆಲಸಕ್ಕೆ ಹೋಗಿ ವಾಪಸ್ ಬರುವಾಗ ಮಳೆಯ ನೀರಿನಲ್ಲಿ ಕೊಚ್ಚಿ ಹೋಗಿ ಗಾರೆ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ಹನೂರು…

57 mins ago

ಗ್ರಾಮದ ಸ್ವಚ್ಛತೆ ನೋಡಿಕೊಳ್ಳುವವರೇ ಅನೈರ್ಮಲ್ಯಕ್ಕೆ ಕಾರಣ?

ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…

2 hours ago

ಮಹಾಪ್ರವಾಹಕ್ಕೆ ನೇಪಾಳ ತತ್ತರ: ನಾಪತ್ತೆಯಾದವರ ಸಂಖ್ಯೆ 6100ಕ್ಕೆ ಏರಿಕೆ

ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…

8 hours ago

ಓದುಗರ ಪತ್ರ: ಇನ್ಸ್‌ಪೆಕ್ಟರ್ ಧನಂಜಯರ ಹೇಳಿಕೆಯಲ್ಲಿ ತಪ್ಪಿಲ್ಲ

ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…

14 hours ago

ಓದುಗರ ಪತ್ರ: ದಸರಾ ಬಂದಾಗ ಮಾತ್ರ ಮೈಸೂರಿಗೆ ಸಿಂಗಾರ

ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…

15 hours ago