ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ.
ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿರುವ ಚಿರತೆಗಳು ಸುಮಾರು ಒಂದು ವರ್ಷ ವಯೋಮಾನದ ಹೆಣ್ಣು ಚಿರತೆಗಳಾಗಿವೆ.
ಮಾರಸಿಂಗನ ಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆಗಳು ಹಾವಳಿ ಮಿತಿಮೀರಿದ ಹಿನ್ನೆಲೆಯಲ್ಲಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವಾರದ ಹಿಂದೆ ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಬೋನು ಇಟ್ಟ ಕೆಲವೇ ದಿನಗಳಲ್ಲಿ ಚಿರತೆ ಸೆರೆಯಾಗಿರುವುದು ಗ್ರಾಮಸ್ಥರಲ್ಲಿ ನೆಮ್ಮದಿ ಮೂಡಿಸಿದೆ. ಆದರೆ ಈ ಸೆರೆ ಸಿಕ್ಕಿರುವ ಮರಿ ಚಿರತೆಗಳ ಜತೆ ಇನ್ನಷ್ಟು ಚಿರತೆಗಳು ಈ ಭಾಗದಲ್ಲಿ ಇರುವ ಆತಂಕ ವ್ಯಕ್ತಪಡಿಸಿದ್ದಾರೆ.
ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ ಮಹದೇವಸ್ವಾಮಿ, ಉಪವಲಯ ಅರಣ್ಯ ಅಧಿಕಾರಿ ರತ್ನಾಕರ್, ವಲಯ ಅರಣ್ಯ ಅಧಿಕಾರಿ ಗವಿಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು. ಹೊರ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಈ ಚಿರತೆಗಳನ್ನು ಬಿಡುವುದಾಗಿ ಎಸಿಎಫ್ ಮಹದೇವಸ್ವಾಮಿ ಆಂದೋಲನಕ್ಕೆ ತಿಳಿಸಿದ್ದಾರೆ.
ಚಿರತೆ ಸೆರೆ ಸಿಕ್ಕ ವಿಷಯ ಕಾಡ್ಗಿಚ್ಚಿನಂತೆ ಹರಡಿ ನೂರಾರು ಗ್ರಾಮಸ್ಥರು ಚಿರತೆ ವೀಕ್ಷಿಸಲು, ಮೊಬೈಲ್ ನಲ್ಲಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.
ನವೆಂಬರ್ ಆರರಂದು ತಾಲ್ಲೂಕಿನ ಕುಂದನಕುಪ್ಪೆಯಲ್ಲಿ ಕುರಿ ತಿನ್ನಲು ಬಂದ ಚಿರತೆ ಕೊಟ್ಟಿಗೆಯಲ್ಲಿ ಸಿಲುಕಿಕೊಂಡು ಅರಣ್ಯಾಧಿಕಾರಿಗಳ ಬಲೆಗೆ ಬಿದ್ದಿತ್ತು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…