ಜಿಲ್ಲೆಗಳು

ಮದ್ದೂರು ಮಾರಸಿಂಗನಹಳ್ಳಿಯಲ್ಲಿ ಅವಳಿ ಚಿರತೆ ಬಲೆಗೆ

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ.

ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿರುವ ಚಿರತೆಗಳು ‌ಸುಮಾರು ಒಂದು ವರ್ಷ ವಯೋಮಾನದ ಹೆಣ್ಣು ಚಿರತೆಗಳಾಗಿವೆ.

ಮಾರಸಿಂಗನ ಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆಗಳು ಹಾವಳಿ ಮಿತಿಮೀರಿದ ಹಿನ್ನೆಲೆಯಲ್ಲಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವಾರದ ಹಿಂದೆ ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಬೋನು ಇಟ್ಟ ಕೆಲವೇ ದಿನಗಳಲ್ಲಿ ಚಿರತೆ ಸೆರೆಯಾಗಿರುವುದು ಗ್ರಾಮಸ್ಥರಲ್ಲಿ ನೆಮ್ಮದಿ ಮೂಡಿಸಿದೆ. ಆದರೆ ಈ ಸೆರೆ ಸಿಕ್ಕಿರುವ ಮರಿ ಚಿರತೆಗಳ ಜತೆ ಇನ್ನಷ್ಟು ಚಿರತೆಗಳು ಈ ಭಾಗದಲ್ಲಿ ಇರುವ ಆತಂಕ ವ್ಯಕ್ತಪಡಿಸಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ ಮಹದೇವಸ್ವಾಮಿ, ಉಪವಲಯ ಅರಣ್ಯ ಅಧಿಕಾರಿ ರತ್ನಾಕರ್, ವಲಯ ಅರಣ್ಯ ಅಧಿಕಾರಿ ಗವಿಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು. ಹೊರ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಈ ಚಿರತೆಗಳನ್ನು ಬಿಡುವುದಾಗಿ ಎಸಿಎಫ್‌ ಮಹದೇವಸ್ವಾಮಿ ಆಂದೋಲನಕ್ಕೆ ತಿಳಿಸಿದ್ದಾರೆ. ‌

ಚಿರತೆ ಸೆರೆ ಸಿಕ್ಕ ವಿಷಯ ಕಾಡ್ಗಿಚ್ಚಿನಂತೆ ಹರಡಿ ನೂರಾರು ಗ್ರಾಮಸ್ಥರು ಚಿರತೆ ವೀಕ್ಷಿಸಲು, ಮೊಬೈಲ್ ನಲ್ಲಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.

ನವೆಂಬರ್‌ ಆರರಂದು ತಾಲ್ಲೂಕಿನ ಕುಂದನಕುಪ್ಪೆಯಲ್ಲಿ ಕುರಿ ತಿನ್ನಲು ಬಂದ ಚಿರತೆ ಕೊಟ್ಟಿಗೆಯಲ್ಲಿ ಸಿಲುಕಿಕೊಂಡು ಅರಣ್ಯಾಧಿಕಾರಿಗಳ ಬಲೆಗೆ ಬಿದ್ದಿತ್ತು.

andolanait

Recent Posts

ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ: ಬಸ್ ಟಿಕೆಟ್‌ ದರ ದುಪ್ಪಟ್ಟು ಏರಿಕೆ

ಬೆಂಗಳೂರು: ಇಂಡಿಗೋ ವಿಮಾನ ಹಾರಾಟದಲ್ಲಿ ವ್ಯತ್ಯಯ ಇರುವುದರಿಂದ ಪ್ರಯಾಣಿಕರ ಪರದಾಟ ಮುಂದುವರೆದಿದೆ. ಇಂಡಿಗೋ ವಿಮಾನ ಸಮಸ್ಯೆ ಬೆನ್ನಲ್ಲೇ ಇತರ ವಿಮಾನಗಳ…

4 mins ago

2026ರ ಐಪಿಎಲ್‌ ಬೆಂಗಳೂರಿನಲ್ಲೇ ಫಿಕ್ಸ್: ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ

ಬೆಂಗಳೂರು: 2026ರ ಐಪಿಎಲ್‌ಗೆ ಬೆಂಗಳೂರಿನಲ್ಲಿ ನಡೆಯಲಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಘೋಷಣೆ ಮಾಡಿದ್ದಾರೆ. ಬೆಂಗಳೂರಿನಲ್ಲಿ ಕೆಎಸ್‌ಸಿಎ ಚುನಾವಣೆ ಮತದಾನದ ವೇಳೆ…

28 mins ago

ದೆಹಲಿ: ಇಂದು 108 ಇಂಡಿಗೋ ವಿಮಾನಗಳ ಹಾರಾಟ ರದ್ದು

ನವದೆಹಲಿ: ಇಂಡಿಗೋ ವಿಮಾನದ ಅಧ್ವಾನ ಆರನೇ ದಿನವೂ ಮುಂದುವರಿದಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂದು ನೂರಕ್ಕೂ…

39 mins ago

ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗ ಕಾಲು ಜಾರಿ ಬಿದ್ದು ವ್ಯಕ್ತಿ ಸಾವು

ರಾಮನಗರ: ದೇವರ ದರ್ಶನಕ್ಕೆಂದು ರೇವಣಸಿದ್ದೇಶ್ವರ ಬೆಟ್ಟ ಹತ್ತುವಾಗಲೇ ವ್ಯಕ್ತಿಯೋರ್ವರು ಕಾಲು ಜಾರಿ ಬಿದ್ದು ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. ಕೆಂಪನಹಳ್ಳಿ…

2 hours ago

ನಾಳೆಯಿಂದ ಬೆಳಗಾವಿಯ ಚಳಿಗಾಲದ ಅಧಿವೇಶನ: ಬಿಗಿ ಭದ್ರತೆ

ಬೆಂಗಳೂರು: ದೆಹಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ಇಂದಿನಿಂದ ಆರಂಭವಾಗುವ ಬೆಳಗಾವಿಯ ಚಳಿಗಾಲದ ಅಧಿವೇಶನಕ್ಕೆ ಬಿಗಿ ಭದ್ರತೆ ಆಯೋಜಿಸಲಾಗಿದೆ. ಸುಮಾರು ಆರು…

2 hours ago

ಗೋವಾದಲ್ಲಿ 25 ಮಂದಿ ಸಜೀವ ದಹನ: ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಉತ್ತರ ಗೋವಾದ ಬಾಗಾ ಬೀಚ್‌ ಬಳಿಯ ಅರ್ಪೊರಾದ ನೈಟ್‌ಕ್ಲಬ್‌ ಬೀರ್ಚ್‌ ಬೈ ರೋಮಿಯೋ ಲೇನ್‌ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ…

3 hours ago