ಜಿಲ್ಲೆಗಳು

ಮದ್ದೂರು ಮಾರಸಿಂಗನಹಳ್ಳಿಯಲ್ಲಿ ಅವಳಿ ಚಿರತೆ ಬಲೆಗೆ

ಮದ್ದೂರು: ತಾಲೂಕಿನ ಮಾರಸಿಂಗನಹಳ್ಳಿ ಗ್ರಾಮದಲ್ಲಿ ಎರಡು ಹೆಣ್ಣು ಚಿರತೆಗಳು ಶನಿವಾರ ಸಂಜೆ ಬಲೆಗೆ ಬಿದ್ದಿವೆ.

ಮಾರಸಿಂಗನಹಳ್ಳಿ ಗ್ರಾಮದ ಶಿಂಷಾ ನದಿ ತೀರದ ಹೊರವಲಯದ ಸರ್ಕಾರಿ ನೆಡುತೋಪಿನ ಜಮೀನಿನಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಇಟ್ಟಿದ್ದ ಬೋನಿಗೆ ಬಿದ್ದಿರುವ ಚಿರತೆಗಳು ‌ಸುಮಾರು ಒಂದು ವರ್ಷ ವಯೋಮಾನದ ಹೆಣ್ಣು ಚಿರತೆಗಳಾಗಿವೆ.

ಮಾರಸಿಂಗನ ಹಳ್ಳಿ ಸುತ್ತಮುತ್ತಲಿನ ಗ್ರಾಮದಲ್ಲಿ ಚಿರತೆಗಳು ಹಾವಳಿ ಮಿತಿಮೀರಿದ ಹಿನ್ನೆಲೆಯಲ್ಲಿ ಚಿರತೆಗಳನ್ನು ಸೆರೆ ಹಿಡಿಯುವಂತೆ ಗ್ರಾಮಸ್ಥರು ವಾರದ ಹಿಂದೆ ಅರಣ್ಯ ಅಧಿಕಾರಿಗಳನ್ನು ಒತ್ತಾಯಿಸಿದ್ದರು. ಬೋನು ಇಟ್ಟ ಕೆಲವೇ ದಿನಗಳಲ್ಲಿ ಚಿರತೆ ಸೆರೆಯಾಗಿರುವುದು ಗ್ರಾಮಸ್ಥರಲ್ಲಿ ನೆಮ್ಮದಿ ಮೂಡಿಸಿದೆ. ಆದರೆ ಈ ಸೆರೆ ಸಿಕ್ಕಿರುವ ಮರಿ ಚಿರತೆಗಳ ಜತೆ ಇನ್ನಷ್ಟು ಚಿರತೆಗಳು ಈ ಭಾಗದಲ್ಲಿ ಇರುವ ಆತಂಕ ವ್ಯಕ್ತಪಡಿಸಿದ್ದಾರೆ.

ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಬಿ ಮಹದೇವಸ್ವಾಮಿ, ಉಪವಲಯ ಅರಣ್ಯ ಅಧಿಕಾರಿ ರತ್ನಾಕರ್, ವಲಯ ಅರಣ್ಯ ಅಧಿಕಾರಿ ಗವಿಯಪ್ಪ ಸ್ಥಳಕ್ಕೆ ಭೇಟಿ ನೀಡಿದ್ದರು. ಹೊರ ಜಿಲ್ಲೆಯ ಅರಣ್ಯ ಪ್ರದೇಶಕ್ಕೆ ಈ ಚಿರತೆಗಳನ್ನು ಬಿಡುವುದಾಗಿ ಎಸಿಎಫ್‌ ಮಹದೇವಸ್ವಾಮಿ ಆಂದೋಲನಕ್ಕೆ ತಿಳಿಸಿದ್ದಾರೆ. ‌

ಚಿರತೆ ಸೆರೆ ಸಿಕ್ಕ ವಿಷಯ ಕಾಡ್ಗಿಚ್ಚಿನಂತೆ ಹರಡಿ ನೂರಾರು ಗ್ರಾಮಸ್ಥರು ಚಿರತೆ ವೀಕ್ಷಿಸಲು, ಮೊಬೈಲ್ ನಲ್ಲಿ ಪೋಟೋ ಕ್ಲಿಕ್ಕಿಸಿಕೊಳ್ಳಲು ಮುಗಿಬಿದ್ದರು.

ನವೆಂಬರ್‌ ಆರರಂದು ತಾಲ್ಲೂಕಿನ ಕುಂದನಕುಪ್ಪೆಯಲ್ಲಿ ಕುರಿ ತಿನ್ನಲು ಬಂದ ಚಿರತೆ ಕೊಟ್ಟಿಗೆಯಲ್ಲಿ ಸಿಲುಕಿಕೊಂಡು ಅರಣ್ಯಾಧಿಕಾರಿಗಳ ಬಲೆಗೆ ಬಿದ್ದಿತ್ತು.

andolanait

Recent Posts

ಬನ್ನೇರುಘಟ್ಟ ಉದ್ಯಾನಕ್ಕೆ ಹೊಸ ಅತಿಥಿಯ ಆಗಮನ: ಮುದ್ದಾದ ಮರಿಗೆ ಜನ್ಮ ನೀಡಿದ ನೀರಾನೆ

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನೀರಾನೆಯೊಂದು ಮುದ್ದಾದ ಮರಿಗೆ ಜನ್ಮ ನೀಡಿದೆ. ಉದ್ಯಾನದಲ್ಲಿದ್ದ 17 ವರ್ಷ ವಯಸ್ಸಿನ ದಶ್ಯ ಎಂಬ…

7 hours ago

‘ಬಿಡದಿ ಟೌನ್‌ಶಿಪ್ ವಿರುದ್ಧ ಕಾನೂನು ಹೋರಾಟ’: ಕೇಂದ್ರ ಬೃಹತ್ ಕೈಗಾರಿಕಾ ಖಾತೆ ಸಚಿವ ಎಚ್‌ಡಿಕೆ ಘೋಷಣೆ

ಬೆಂಗಳೂರು: ರೈತರ ತೀವ್ರ ವಿರೋಧದ ನಡುವೆ ಅಂತಿಮ ಅಧಿಸೂಚನೆ ಹೊರಡಿಸಿ ಬಿಡದಿ ಟೌನ್‌ಶಿಪ್ ಮಾಡಲು ಹೊರಟಿರುವ ರಾಜ್ಯ ಸರ್ಕಾರದ ವಿರುದ್ಧ…

7 hours ago

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಿಸಲ್ಲ: ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ

ಬೆಂಗಳೂರು: ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಯನ್ನು ನಿಲ್ಲಿಸಲ್ಲ ಎಂದು ಸಿಎಂ ಡಿ.ಕೆ.ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ…

8 hours ago

ರಾಜ್ಯದಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಏಳು ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕೋಲಾರ, ಹಾಸನ,…

10 hours ago

ಓದುಗರ ಪತ್ರ: ‘ಮನೆಗೊಂದು ಗ್ರಂಥಾಲಯ’ ಯೋಜನೆ ಯಶಸ್ವಿಯಾಗಲಿ

‘ಮನೆಗೊಂದು ಗ್ರಂಥಾಲಯ’ ಹೆಸರಿನಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರವು ವಿಶಿಷ್ಟ ಯೋಜನೆಯೊಂದನ್ನು ಪ್ರಾರಂಭ ಮಾಡಿರುವುದು ಶ್ಲಾಘನೀಯ. ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷರಾದ…

13 hours ago

ಓದುಗರ ಪತ್ರ: ವಿದ್ಯಾರ್ಥಿ ಬಸ್ ಪಾಸ್ ದೂರ ಮಿತಿ ಹೆಚ್ಚಿಸಲಿ

ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡಿದ ಬಳಿಕ ರಾಜ್ಯದ ಶಾಲಾ -ಕಾಲೇಜುಗಳ ಎಲ್ಲ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡುವುದಾಗಿ…

13 hours ago