ಜಿಲ್ಲೆಗಳು

ಮದ್ದೂರು ತಾಲ್ಲೂಕು ಸಮ್ಮೇಳನ ಅಧ್ಯಕ್ಷರಾಗಿ ಮಾಜಿ ಪತ್ರಕರ್ತ ಡಾ.ಬೆಳ್ಳೂರು ವೆಂಕಟಪ್ಪ ಆಯ್ಕೆ

ಮದ್ದೂರು: ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ೯ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸಲು ತೀರ್ಮಾನಿಸಿರುವುದಾಗಿ ಕಸಾಪ ಜಿಲ್ಲಾಧ್ಯಕ್ಷ ರವಿಕುಮಾರ್ ಚಾಮಲಾಪುರ ತಿಳಿಸಿದರು.

ಪಟ್ಟಣದ ಪ್ರವಾಸಿಮಂದಿರದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿ ವೇಳೆ ಮಾತನಾಡಿದ ಅವರು, ಮಾರ್ಚ್.೨ರ ಗುರುವಾರದಂದು ಪಟ್ಟಣದ ಹಳೇ ಬಸ್‌ ನಿಲ್ದಾಣದಲ್ಲಿ ತಾಲೂಕು ಸಮ್ಮೇಳನವನ್ನು ಹಮ್ಮಿಕೊಂಡಿದ್ದು ಸಮ್ಮೇಳನದ ಸರ್ವಾಧ್ಯಕ್ಷರಾಗಿ ಕವಿ ಹಾಗೂ ವಿಮರ್ಶಕ, ಡಾ. ಬೆಳ್ಳೂರು ಸಿ.ವೆಂಕಟಪ್ಪ ಅವರನ್ನು ಆಯ್ಕೆ ಮಾಡಲಾಗಿದೆ  ಎಂದರು.
ಪಟ್ಟಣದಲ್ಲಿ ನಡೆಯುವ ೯ನೇ ಕನ್ನಡ ಸಾಹಿತ್ಯ ಸಮ್ಮೆಳನವನ್ನು ಕನ್ನಡದ ಹಬ್ಬದಂತೆ ಆಚರಿಸಲು ಪ್ರತಿಯೊಬ್ಬ ಅಭಿಮಾನಿಯು ಶ್ರಮಿಸುವ ಜತೆಗೆ ತಮ್ಮ ಸಹಕಾರ ಅತ್ಯಗತ್ಯವಾಗಿದ್ದು ಸಾಹಿತ್ಯಾಸಕ್ತರು, ಪ್ರಗತಿಪರ ಸಂಘಟನೆಗಳ ಚಿಂತಕರು, ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದ್ದಾರೆ.

ಸಮ್ಮೇಳನಾಧ್ಯಕ್ಷರ ಪರಿಚಯ :
ತಾಲ್ಲೂಕಿನ ಕೆ.ಬೆಳ್ಳೂರು ಗ್ರಾಮದ ಚಿಕ್ಕೇಗೌಡ-ದೊಡ್ಡತಾಯಮ್ಮ ದಂಪತಿಗಳ ಪುತ್ರ ಡಾ.ಬೆಳ್ಳೂರು ಸಿ. ವೆಂಕಟಪ್ಪ ಅವರು ೧೯೭೪ರ ಮೇ ೫ರಲ್ಲಿ ಸಾಮಾನ್ಯ ರೈತ ಕುಟುಂಬದಲ್ಲಿ ಜನಿಸಿದ್ದಾರೆ.
ಡಾ.ಬೆಳ್ಳೂರು ಸಿ. ವೆಂಕಟಪ್ಪ ಅವರು ಕವಿ, ವಿಮರ್ಶಕ, ಪತ್ರಕರ್ತ ಹಾಗೂ ಅನುವಾದದಲ್ಲೂ ಆಸಕ್ತಿ ಬೆಳೆಸಿಕೊಂಡಿರುವ ಇವರು ಇತ್ತೀಚೆಗೆ ಖಲೀಲ್‌ಜಿಬ್ರಾನ್ ಅವರ ಫ್ರ್ರೊಪೆಟ್ ಕೃತಿಯನ್ನು ಕನ್ನಡಕ್ಕೆ ಅನುವಾದಿಸಿದ್ದು ಪ್ರಸಕ್ತ ಇವರು ರಾಮನಗರ ಜಿಲ್ಲೆಯ ಕೂನಗಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕರಾಗಿ ಅಧ್ಯಾಪನ ಹಾಗೂ ಅಧ್ಯಯನದಲ್ಲಿ ನಿರತರಾಗಿದ್ದಾರೆ.
ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ  ಸಂಶೋಧನಾ ವಿದ್ಯಾರ್ಥಿಯಾಗಿ ಡಾ. ರಾಗೌ ಅವರ ಮಾರ್ಗದರ್ಶನದಲ್ಲಿ ೨೦೦೦-೨೦೦೫ರ ತನಕ ಸಂಶೋಧಕರಾಗಿ ’ಪ್ರಗತಿಶೀಲ ಸಾಹಿತ್ಯ ಮತ್ತು ಚಳುವಳಿ’ ಕುರಿತು ನಿಬಂಧವನ್ನು ಬರೆದು ೨೦೦೬ರಲ್ಲಿ ಡಾಕ್ಟರೇಟ್ ಗಳಿಸಿದರು.
ಪ್ರಾಥಮಿಕ ಶಿಕ್ಷಣವನ್ನು ಹುಟ್ಟೂರಿನಲ್ಲಿ ಮಾಧ್ಯಮಿಕ ಹಾಗೂ ಪ್ರೌಢಶಿಕ್ಷಣವನ್ನು ಕೆ. ಹೊನ್ನಲಗೆರೆ ಸರಕಾರಿ ಶಾಲೆಯಲ್ಲಿ ಪೂರ್ಣಗೊಳಿಸಿ ಕಾಲೇಜು ಶಿಕ್ಷಣವನ್ನು ಭಾರತಿ ಕಾಲೇಜಿನಲ್ಲಿ ವ್ಯಾಸಂಗ ಮಾಡಿ ಬಳಿಕ ಮೈಸೂರಿನ ಮಾನಸ ಗಂಗೋತ್ರಿಯ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆಯಲ್ಲಿ ಎಂಎ ಪದವಿ ಗಳಿಸಿದ್ದಾರೆ.
ಇವರು ಸಂಜೆವಾಣಿ, ಆಂದೋಲನ, ಪೌರವಾಣಿ, ಸೂರ್ಯೋದಯ ದಿನಪತ್ರಿಕೆಗಳಲ್ಲಿ ವರದಿಗಾರರಾಗಿ, ಉಪಸಂಪಾದಕರಾಗಿ ಕರ್ತವ್ಯನಿರ್ವಹಿಸಿದ್ದು ‘ಮಲ್ಲಿಗೆ ಮೊಗ್ಗು, ಹೊಳೆ ಮೇಲೆ ಮಳೆ’ ಕಾವ್ಯಗಳನ್ನು ರಚಿಸಿ ಪ್ರಗತಿ ಶೀಲ ಸಾಹಿತ್ಯ ಕಥನ, ಪ್ರಗತಿ ಶೀಲ ಚಳುವಳಿ ಬಗ್ಗೆ ಸಂಶೋಧನೆ, ’ದೇವಕಣಗಿಲೆ’ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರ ವ್ಯಕ್ತಿತ್ವ ಜೀವನ ಚರಿತ್ರೆ ಹಾಗೂ ದೇವರು ಧರ್ಮಹಿಂಸೆ, ಭಾರತರತ್ನ ಪುರಸ್ಕೃತರು ಇನ್ನಿತರೆ ಹಲವಾರು ಕೃತಿಗಳನ್ನು ರಚಿಸಿದ್ದಾರೆ.
ಬೆಂಗಳೂರಿನಲ್ಲಿ ಆಯೋಜಿಸಿದ್ದ  ಸಮಕಾಲಿನ ಕನ್ನಡ ಸಾಹಿತ್ಯ, ಸೃಜನ ಶೀಲತೆ ಮತ್ತು ಸರಕು ಸಂಸ್ಕೃತಿ, ಹೆಜ್ಜೆ-ಗೆಜ್ಜೆ, ರಂಗವೇದಿಕೆ ಏರ್ಪಡಿಸಿದ್ದ ವಿಚಾರ ಸಂಕಿರಣದಲ್ಲಿ ಪ್ರಬಂಧ ಮಂಡಿಸಿದ್ದು, ಮೈಸೂರು ದಸರ ಕವಿಗೋಷ್ಠಿಯಲ್ಲಿ ಕವಿತೆ ವಾಚನ ಮತ್ತು ಆದಿಚುಂಚನಗಿರಿ ಮಠದಲ್ಲಿ ನಡೆದ ರಾಷ್ಟ್ರೀಯ ಕವಿಗೋಷ್ಠಿಯಲ್ಲಿ ಕವಿತಾ ವಾಚನ ನಡೆಸಿಕೊಟ್ಟಿದ್ದಾರೆ.
ಗೋಷ್ಠಿಯಲ್ಲಿ ಕಸಾಪ ತಾಲೂಕು ಅಧ್ಯಕ್ಷ ವಿ.ಸಿ. ಉಮಾಶಂಕರ್, ಉಪಾಧ್ಯಕ್ಷ ುು ಮಹಾಲಿಂಗ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ಸಿ.ಎಂ. ಕ್ರಾಂತಿಸಿಂಹ, ಪದಾಧಿಕಾರಿಗಳಾದ ಬಸವರಾಜು, ತಿಪ್ಪೂರು ರಾಜೇಶ್, ಮನು, ಶಿವಲಿಂಗ, ವಿಷಕಂಠ, ಟಿ.ಸಿ. ವಸಂತ, ಮಂಜುಳಾ, ಜಯಲಕ್ಷ್ಮಿ ದಿವ್ಯ, ಲತಾ, ಶಶಿಕಲಾ, ಪಲ್ಲವಿ, ಲೀಲಮ್ಮ ಇತರರಿದ್ದರು.

andolanait

Recent Posts

ಕ್ಯಾತನಹಳ್ಳಿಯಲ್ಲಿ ಅರ್ಧಕ್ಕೆ ನಿಂತ ಕಾಮಗಾರಿಗಳು

ಮಹೇಶ್ ಕರೋಠಿ ಕಿಕ್ಕೇರಿ: ಇಲ್ಲಿಗೆ ಸಮೀಪದ ಮಂದಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕ್ಯಾತನಹಳ್ಳಿ ಗ್ರಾಮದಲ್ಲಿ ಕಳೆದ ೨-೩ ವರ್ಷಗಳಿಂದ ಹಲವು…

2 hours ago

ಓದುಗರ ಪತ್ರ: ಬಂದರು ಎಂದರೆ…

ನೆಂಟರಿಷ್ಟರು ಮನೆಗೆ ಬಂದರು ಎಂದರೆ... ಏನು ಎತ್ತ, ಹೇಗೆ ಅವರ ಆತಿಥ್ಯ? ಇಂಥ ಸಂಕಷ್ಟಗಳಿಗೆಲ್ಲಾ ಕಾರಣ,ಬಂದ್ ಆಗಿರುವ ಆ ಹಾರ್ಮುಜ್…

2 hours ago

ಓದುಗರ ಪತ್ರ: ರಸ್ತೆ ಡುಬ್ಬಗಳಿಗೆ ಬಿಳಿ ಬಣ್ಣ ಬಳಿಯಿರಿ

ಮೈಸೂರಿನಿಂದ ಎಚ್.ಡಿ.ಕೋಟೆ ಮಾರ್ಗದಲ್ಲಿ ಬರುವ ಮಾದಾಪುರ ಗ್ರಾಮದಿಂದ ಕೆ. ಬೆಳತ್ತೂರು ಹಾಗೂ ಲೆಂಕೆ ಗ್ರಾಮದವರೆಗೂ ರಸ್ತೆ ಡಾಂಬರೀಕರಣವಾಗಿದೆ. ಈ ರಸ್ತೆಯಲ್ಲಿ…

2 hours ago

ಓದುಗರ ಪತ್ರ: ರಾಜಕೀಯದ ಪ್ರಚಾರ ಸಾಧನವಾಗುತ್ತಿರುವ ಜಾತ್ರೆಗಳು

ಜಾತ್ರೆಗಳು ಹಾಗೂ ಹಬ್ಬಗಳು ಗ್ರಾಮದ ಎಲ್ಲಾ ಜನರು ಒಟ್ಟುಗೂಡಿ ಮಾಡುವ ಕಾರ್ಯಕ್ರಮವಾಗಿವೆ. ಇದರಲ್ಲಿ ಜನರ ಒಗ್ಗಟ್ಟು, ಪರಸ್ಪರ ಸಹಕಾರ ಕಾಣುತ್ತೇವೆ.…

2 hours ago

ಓದುಗರ ಪತ್ರ: ಸೆಸ್ಕ್ ಯುಜಿ ಕೇಬಲ್ ಮುಂಜಾಗ್ರತೆ ವಹಿಸಿ

ಮೈಸೂರಿನ ಬಹುತೇಕ ಎಲ್ಲ ಬಡಾವಣೆಗಳಲ್ಲೂ, ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ (ಸೆಸ್ಕ್)ದಿಂದ ಅಂಡರ್ ಗ್ರೌಂಡ್ ಕೇಬಲ್ ಅನ್ನು ಅಳಡಿಸುತ್ತಿದ್ದು, ಕಾಮಗಾರಿಯ…

2 hours ago

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ: ಕೆನೆಪದರ ಪರಿಶಿಷ್ಟರಿಗೆ ಬೇಡವೆನ್ನುವ ಕೇಂದ್ರಕ್ಕೆ ಮತ್ತೆ ಸುಪ್ರೀಂ ತಾಕೀತು

ಮೀಸಲಾತಿ ವ್ಯವಸ್ಥೆ ಜಾರಿ ಸಂಬಂಧ ಪರ ಮತ್ತು ವಿರೋಧದ ಚರ್ಚೆ ಹಾದಿ ಬೀದಿ, ಹಳ್ಳಿಯ ಪಂಚಾಯಿತಿ ಕಟ್ಟೆಗಳಲ್ಲಿ ಮತ್ತು ಖಾಸಗಿಯಾಗಿ…

2 hours ago