ಜಿಲ್ಲೆಗಳು

ಮಡಿಕೇರಿ ದಸರಾ ಸರಣಿ 3 : ಇಂದು ನವರಾತ್ರಿಯ ಕರಗ ಉತ್ಸವಕ್ಕೆ ಚಾಲನೆ

ಪಂಪಿನ ಕೆರೆಯಿಂದ ಹೊರಡಲಿರುವ ೪ ಶಕ್ತಿ ದೇವತೆಗಳ ಕರಗಗಳು: ೯ ದಿನಗಳವರೆಗೆ ನಗರ ಪ್ರದಕ್ಷಿಣೆ

ನವೀನ್ ಡಿಸೋಜ
ಮಡಿಕೇರಿ: ಕೊಡಗಿನ ನಾಲ್ಕು ಶಕ್ತಿ ದೇವತೆಗಳ ಕರಗ ಹೊರಡುವುದರೊಂದಿಗೆ ಇಂದು ಐತಿಹಾಸಿಕ ಮಡಿಕೇರಿ ದಸರಾ ಉತ್ಸವಕ್ಕೆ ವಿದ್ಯುಕ್ತವಾಗಿ ಚಾಲನೆ ದೊರೆಯಲಿದೆ.
ಈ ಬಾರಿ ಅದ್ಧೂರಿ ದಸರಾ ಆಚರಣೆಗೆ ಜಿಲ್ಲಾಡಳಿತದಿಂದ ಸಿದ್ಧತೆಗಳು ನಡೆುುಂತ್ತಿದ್ದು, ಈಗಾಗಲೇ ದಶಮಂಟಪಗಳ ತಾಂರಿ ಕಾರ್ಯ ಆರಂಭಗೊಂಡಿದೆ. ಸೆ.೨೭ರಿಂದ ನಗರದ ಗಾಂಧಿ ಮೈದಾನದಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಆರಂಭವಾಗಲಿದೆ.

ಈ ಎಲ್ಲ ಕಾರ್ಯಕ್ರಮಕ್ಕೂ ಮುನ್ನ ಸಂಪ್ರದಾಯದಂತೆ ನಗರದ ನಾಲ್ಕು ಶಕ್ತಿದೇವತೆಗಳ ಕರಗ ಹೊರಡಿಸುವುದು ವಾಡಿಕೆ. ಅದರಂತೆ ಸೋಮವಾರ ಸಂಜೆ ಕರಗ ಹೊರಡುವುದರ ಮೂಲಕ ದಸರಾ ಉತ್ಸವಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದೆ.

ನಗರದ ನಾಲ್ಕು ಮೂಲೆಗಳಲ್ಲಿ ನೆಲೆ ನಿಂತಿರುವ ಶಕ್ತಿ ದೇವತೆಗಳಾದ ನಗರವನ್ನು ಕಾುುಂವ ಕುಂದೂರುಮೊಟ್ಟೆ ಚೌಟಿ ವಾರಿಯಮ್ಮ,  ಕೋಟೆಯನ್ನು ಕಾಯುವ ಕೋಟೆ ವಾರಿುಂಮ್ಮ, ಆರೋಗ್ಯ ಐಶ್ವರ್ಯವನ್ನು ಪಾಲಿಸುವ ಕಂಚಿ ಕಾವಾಕ್ಷಿ ಹಾಗೂ ಸೈನ್ಯವನ್ನು ಕಾಪಾಡುವ ದಂಡಿನ ವಾರಿಯಮ್ಮ ಸುವಾರು ೩೦೦ ವರ್ಷಗಳಿಂದ ನಗರದಲ್ಲಿ ನೆಲೆ ನಿಂತಿದೆ. ಈ ೪  ಕರಗಗಳು ಇಂದಿನಿಂದ ನಗರ ಸಂಚಾರ ಆರಂಭಿಸಲಿವೆ.
ನಾಲ್ಕೂ ಶಕ್ತಿ ದೇವತೆಗಳ ದೇವಾಲುಂಗಳ ಪ್ರಮುಖರು ಪಂಪಿನ ಕೆರೆಗೆ ತೆರಳಿ, ಸಂಪ್ರದಾುಂದಂತೆ ಕರಗ ಕಟ್ಟಿ ವಿಶೇಷ ಪೂಜೆ ಸಲ್ಲಿಸಿ ಸಂಜೆ ನಗರ ಸಂಚಾರ ಆರಂಭಿಸಲಿವೆ. ಶ್ರೀ ಬಸವೇಶ್ವರ, ಶ್ರೀ ಚೌಡೇಶ್ವರಿ, ಶ್ರೀ ಕೋದಂಡರಾಮ ಹಾಗೂ ಶ್ರೀ ಕನ್ನಿಕಾ ದೇವಾಲಯಗಳ ಪರಮೇಶ್ವರಿ ದೇವಾಲಯಗಳಿಗೆ ತೆರಳಿ ಪೇಟೆ ಶ್ರೀ ರಾಮ ಮಂದಿರಕ್ಕೆ ಸೇರಲಿವೆ. ಅಲ್ಲಿಂದ ಕರಗಗಳು ತಮ್ಮ-ತಮ್ಮ ದೇವಾಲಯಗಳಿಗೆ ತೆರಳಲಿವೆ.
ಬಿಂದಿಗೆಗೆ ಬಿದಿರನ್ನು ಗೋಪುರವಾಗಿ ಕಟ್ಟಿ, ಹೂವಿನಿಂದ ಶೃಂಗರಿಸಿ, ಶಕ್ತಿ ದೇವತೆಯ ಬೆಳ್ಳಿಯ ಮುಖವಾಡವನ್ನು ಅಳವಡಿಸಿ ಕರಗ ವನ್ನು ಸಿದ್ಧಪಡಿಸಲಾಗುತ್ತದೆ. ಪ್ರತಿನಿತ್ಯ ಕರಗದ ಹೂವನ್ನು ಬದಲಾಯಿಸಿ ಶೃಂಗರಿಸಲಾಗುತ್ತದೆ.
ಬೆಳಿಗ್ಗೆ ಸಂಚಾರ ಹೂರಡುವ ಮುನ್ನ ನೈವೇದ್ಯ ಅರ್ಪಿಸಲಾಗುತ್ತದೆ. ನಾಲ್ಕು ಕರಗಗಳು ವಿಜಯ ದಶಮಿಯoದು  ರಾತ್ರಿ ಮಡಿಕೇರಿ  ರಾಜ ಬೀದಿಯಲ್ಲಿ ನಡೆಯುವ ಶೋಭಾ ಯಾತ್ರೆಯಲ್ಲಿ  ಪಾಲ್ಗೊಳ್ಳಲಿದ್ದು, ಅ.೬ರಂದು ಬೆಳಗಿನ ಜಾವ ಬನ್ನಿಮಂಟಪದಲ್ಲಿ ಬನ್ನಿ  ಕಡಿಯುವುದರೊಂದಿಗೆ ದಸರಾ ಮುಕ್ತಾಯಗೊಳ್ಳಲಿದೆ.



ನಾಡಿನ ಸುಭಿಕ್ಷೆಗಾಗಿ ರಾಜರ ಕಾಲದಿಂದಲೇ ಕರಗ ಉತ್ಸವ ನಡೆದುಕೊಂಡು ಬಂದಿದೆ. ಅದೇ ರೀತಿ ಪ್ರಸಕ್ತ ಸಾಲಿನಲ್ಲಿ ಸೆ.೨೬ರಿಂದ ಆರಂಭಗೊಂಡು ವಿಜಯದಶಮಿಯವರೆಗೆ  ಕರಗಗಳು ನಗರದ ಪ್ರದಕ್ಷಿಣೆ ವಾಡಲಿದೆ. ಆದರೆ, ನಗರದಲ್ಲಿ ರಸ್ತೆ ದುರಸ್ತಿ ಕಾರ್ಯ ನಡೆದಿಲ್ಲ. ಕರಗ ಹೊರುವವರು ಹಾಗೂ ಜತೆಗೆ ಸಾಗುವವರು ಪಾದರಕ್ಷೆ ಹಾಕದೆ ಬರಿಗಾಲಿನಲ್ಲಿ ಸಾಗಬೇಕಾಗಿದೆ. ನಗರಸಭೆ ಎಚ್ಚೆತ್ತುಕೊಂಡು ಶೀಘ್ರ ರಸ್ತೆ ದುರಸ್ತಿಗೆ ಮುಂದಾಗಬೇಕು.
ಜಿ.ವಿ.ರವಿಕುವಾರ್, ಅಧ್ಯಕ್ಷೃರು, ಶ್ರೀ ಕಂಚಿ ಕಾಮಾಕ್ಷಿಯಮ್ಮ ದೇವಾಲಯ ಸಮಿತಿ.


ಮಂಜಿನನಗರಿ ಮಡಿಕೇರಿಯ ಐತಿಹಾಸಿಕ ದಸರಾ ಉತ್ಸವ ಕರಗೋತ್ಸವದ ಮೂಲಕ ಆರಂಭಗೊಳ್ಳುತ್ತಿದೆ. ಐದು ದಿನಗಳು ವಾತ್ರ ಬಾಕಿ ಉಳಿದಿದ್ದು, ಹಬ್ಬದ ವಾತಾವರಣವನ್ನು ಸೃಷ್ಟಿಸಬೇಕಾದ ನಗರಸಭೆ ಯಾವುದೇ ಕಾರ್ಯಕ್ರಮಗಳನ್ನು ಕೈಗೊಂಡಿಲ್ಲ. ನಗರದ ನಾಲ್ಕು ಶಕ್ತಿ ದೇವತೆಗಳ ಕರಗಗಳು ಸೆ.೨೬ರಿಂದ ನಗರ ಸಂಚಾರ ಆರಂಭಿಸುತ್ತಿವೆ. ಆದರೆ, ರಸ್ತೆಗಳೆಲ್ಲವೂ ಹದಗೆಟ್ಟಿದ್ದು, ಹೊಂಡ, ಗುಂಡಿಗಳಾಗಿ ವೆ. ವಾಹನಗಳು ವಾತ್ರವಲ್ಲ ಪಾದಚಾರಿಗಳೂ ನಡೆದಾಡಲು ಸಾಧ್ಯವಾಗದ ಸ್ಥಿತಿ ಇದೆ.
ಚೊಟ್ಟೆಯoಡ ಶರತ್, ಮಡಿಕೇರಿ ನಗರಾಧ್ಯಕ್ಷರು, ಕೊಡಗು ರಕ್ಷಣಾ ವೇದಿಕೆ.

 

andolanait

Recent Posts

ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ: ಎಂಎಲ್‌ಸಿ ರಾಜೇಂದ್ರ ರಾಜಣ್ಣ

ಮೈಸೂರು: ಸಿದ್ದರಾಮಯ್ಯ ಐದು ವರ್ಷ ಸಿಎಂ ಆಗಿರುತ್ತಾರೆ ಎಂದು ಎಂಎಲ್‌ಸಿ ಹಾಗೂ ಮಾಜಿ ಸಚಿವ ಕೆ.ಎನ್.ರಾಜಣ್ಣ ಪುತ್ರ ರಾಜೇಂದ್ರ ಹೇಳಿದ್ದಾರೆ.…

44 mins ago

ಧರ್ಮಸ್ಥಳ ಬುರುಡೆ ಪ್ರಕರಣ: ಬಂಗ್ಲೆಗುಡ್ಡದಲ್ಲಿ ಸಿಕ್ಕಿದ್ದ 7 ಅಸ್ಥಿಪಂಜರ ಎಫ್‌ಎಸ್‌ಎಲ್‌ಗೆ ರವಾನೆ

ಮಂಗಳೂರು: ಧರ್ಮಸ್ಥಳ ಬುರುಡೆ ರಹಸ್ಯ ಪ್ರಕರಣದಲ್ಲಿ ಮತ್ತೊಂದು ಬೆಳವಣಿಗೆ ನಡೆದಿದ್ದು, ಬಂಗ್ಲೆಗುಡ್ಡದಲ್ಲಿ ಸಿಕ್ಕ 7 ಅಸ್ಥಿಪಂಜರಗಳನ್ನು ಎಫ್‌ಎಸ್‌ಎಲ್‌ಗೆ ರವಾನೆ ಮಾಡಲಾಗಿದೆ.…

1 hour ago

ಕೇರಳ ವಿಧಾನಸಭೆ ಚುನಾವಣೆ: ಶೋಭಾ ಕರಂದ್ಲಾಜೆಗೆ ಮಹತ್ವದ ಜವಾಬ್ದಾರಿ

ನವದೆಹಲಿ: ಬಿಜೆಪಿ ನೂತನ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ಸ್ವೀಕಾರ ಮಾಡಿದ ನಿತಿನ್‌ ನಬಿನ್‌ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗಳತ್ತ ಗಮನಹರಿಸಿದ್ದಾರೆ.…

1 hour ago

ಗಗನಯಾತ್ರಿ ಸುನಿತಾ ವಿಲಿಯಮ್ಸ್‌ ನಿವೃತ್ತಿ ಘೋಷಣೆ

ಕೇಪ್‌ ಕೆನವೆರೆಲ್:‌ ಅಂತರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ 9 ತಿಂಗಳ ಕಾಲ ಸುದೀರ್ಘ ಕಾಲದ ಅನುಭವ ಹೊಂದಿರುವ ಸುನಿತಾ ವಿಲಿಯಮ್ಸ್‌ ನಿವೃತ್ತರಾಗಿದ್ದಾರೆ.…

2 hours ago

ಹನೂರು| ಪಾದಯಾತ್ರೆ ಮಾಡುವ ವೇಳೆ ಚಿರತೆ ದಾಳಿ: ವ್ಯಕ್ತಿ ಸಾವು

ಮಹಾದೇಶ್‌ ಎಂ ಗೌಡ ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…

2 hours ago

ತೆಂಗಿನ ಮರದಿಂದ ಬಿದ್ದು ನರಳಾಡಿದ ಯುವಕನನ್ನು ಕೆರೆಯಲ್ಲಿ ಮುಳುಗಿಸಿ ಕೊಂದ ಸ್ನೇಹಿತರು

ರಾಮನಗರ: ತೆಂಗಿನ ಮರ ಹತ್ತಿ ಕೆಳಗೆ ಬಿದ್ದ ಸ್ನೇಹಿತನನ್ನು ಕೆರೆಯಲ್ಲಿ ಮುಳುಗಿಸಿ ಹತ್ಯೆ ಮಾಡಿದ ಘಟನೆ ಬೆಂಗಳೂರು ದಕ್ಷಿಣ ಜಿಲ್ಲೆ…

2 hours ago